ಡಾ. ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು. ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ. ವಿಷ್ಣುವರ್ಧನ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು ೨೨೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು.ಇವರಿಗೆ ಇದ್ದ ಬಿರುದುಗಳು ಸಾಹಸ ಸಿಂಹ, ಅಭಿನಯ ಭಾರ್ಗವ, ಮೈಸೂರು ರತ್ನ
ಸೆಪ್ಟೆಂಬರ್ 18 1950 ಡಾ.ವಿಷ್ಣುವರ್ಧನ್ ಹುಟ್ಟಿದ ದಿನ. ಮೈಸೂರಿನಲ್ಲಿ ಜನಿಸಿದ ಡಾ.ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದರು. ‘ವಂಶವೃಕ್ಷ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ರು. ಆದರೆ ಇವರಿಗೆ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಬ್ರೇಕ್ ನೀಡಿದ್ದು ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಸಿನಿಮಾ. ಈ ಸಿನಿಮಾದಲ್ಲಿ ರಾಮಾಚಾರಿ ಪಾತ್ರದಲ್ಲಿ ಅಭಿನಯಿಸಿದ್ದ ವಿಷ್ಣುವರ್ಧನ್ ಎಲ್ಲರ ಮನೆಮಾತಾಗಿದ್ದರು. ಈ ಚಿತ್ರದ ಚಾಮಯ್ಯ ಮೇಷ್ಟ್ರು ಹಾಗೂ ಶಿಷ್ಯ ರಾಮಾಚಾರಿ ಬಾಂಧವ್ಯ ಇಂದಿಗೂ ಅಜರಾಮರ.
ಹೆಚ್ ಎಲ್ ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ಎಂಬ ದಂಪತಿಗೆ ಏಳನೇ ಮಗನಾಗಿ ಜನಿಸಿದವರು ವಿಷ್ಣುವರ್ಧನ್. ಕಲಾ ಕುಟುಂಬದಲ್ಲಿ ಹುಟ್ಟಿದ ಸಂಪತ್ ಕುಮಾರ್, ಚಿತ್ರರಂಗದಲ್ಲಿ ವಿಷ್ಣುವರ್ಧನ್ ಆಗಿ ಬೆಳೆದು ಬಂದಿದ್ದು ಮಾತ್ರ ರೋಚಕ.ಇಂದು ಸಾಹಸ ಸಿಂಹ ಬದುಕಿದ್ದರೆ 71ನೇ ಹುಟ್ಟು ಹಬ್ಬವನ್ನ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿದ್ದರು. ಕೂಲಿ ಕಾರ್ಮಿಕ, ಕಳ್ಳ, ಪೊಲೀಸ್, ಫೋಟೋಗ್ರಾಫರ್, ಭಗ್ನ ಪ್ರೇಮಿಯಾಗಿ, ವೈದ್ಯನಾಗಿ, ಕ್ಯಾನ್ಸರ್ ಪೀಡಿತ ರೋಗಿಯಾಗಿ, ಡಾನ್, ಪೌರಾಣಿಕ ಹೀಗೆ ಎಲ್ಲಾ ತರಹದ ಪಾತ್ರಗಳನ್ನ ಮಾಡಿದ್ದಾರೆ. ಈ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಉಳಿದಿದ್ದಾರೆ.
ಡಾ. ವಿಷ್ಣುವರ್ಧನ್ಅವರು ಮೈಸೂರಿನಲ್ಲಿ ಹೆಚ್.ಎಲ್.ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ಎಂಬ ದಂಪತಿಗಳಿಗೆ ಜನಿಸಿದರು. ಇವರ ತಂದೆ ಕಲಾವಿದರು, ಸಂಗೀತ ನಿರ್ದೇಶಕರು ಮತ್ತು ಸಂಭಾಷಣೆಕಾರರು ಆಗಿದ್ದರು. ಇವರ ಕುಟುಂಬದವರು ಮೈಸೂರಿನ ಚಾಮುಂಡಿಪುರಂನಲ್ಲಿ ವಾಸಿಸುತ್ತಿದ್ದರು.ಇವರ ಪೂರ್ವಜರು ಮಂಡ್ಯ ಜಿಲ್ಲೆಯವರು.೬ ಸಹೋದರ/ಸಹೋದರಿಯರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಣವನ್ನು ಬೆಂಗಳೂರಿನ ಕನ್ನಡ ಮಾದರಿ ಶಾಲೆಯಲ್ಲಿ ಮುಗಿಸಿದರು. ತಮ್ಮ ಪ್ರೌಢಶಾಲಾ ಶಿಕ್ಷಣ ಮತ್ತು ಪದವಿಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪಡೆದುಕೊಂಡರು.
ಶಿವಶರಣ ನಂಬೆಯಕ್ಕ ಎಂಬ ಸಿನೆಮಾದಲ್ಲಿ 1955ರಲ್ಲಿ ಬಾಲ ನಟನಾಗಿ ನಟಿಸಿದ್ದರು. ವಿಷ್ಣು ನಟನೆಯ ಈ ಸಿನೆಮಾ 28 ದಿನದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಸಿನೆಮಾ ಎಂಬ ಹಿರಿಮೆಗೆ ಪಾತ್ರವಾಗಿತ್ತು. ಶಂಕರ್ ಸಿಂಗ್ ಸಿದ್ದಪಡಿಸಿದ ಈ ಸಿನೆಮಾ ಸಂಪತ್ ಕುಮಾರ್ (ವಿಷ್ಣು) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿತು, ಮುಂದೆ 1956ರಲ್ಲಿ ಕೋಕಿಲವಾಣಿ ಎಂಬ ಮತ್ತೊಂದು ಸಿನೆಮಾದಲ್ಲಿ ಕೂಡ ವಿಷ್ಣು ನಟಿಸಿದ್ದರು. ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರ ವಹಿಸಿದ್ದರು.
ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ ೧೯೭೨ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು. ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ‘ವಿಷ್ಣುವರ್ಧನ್’ ಎಂದು ಹೆಸರಿಟ್ಟಿದ್ದು ಪುಟ್ಟಣ್ಣ ಕಣಗಾಲ್. ಹೆಸರಿನ ಬದಲಾವಣೆಯೊಂದಿಗೆ ನಾಯಕನಟನಾಗಿ ನಾಗರಹಾವು ಚಿತ್ರದೊಂದಿಗೆ ವಿಷ್ಣುವರ್ಧನ ಎಂಬ ನಟನ ಉದಯವಾಯಿತು.
29.12.1972 ರಂದು ತೆರೆಕಂಡ ಈ ಸಿನೆಮಾ, ಬೆಂಗಳೂರಿನ ಸಾಗರ್ ಚಿತ್ರಮಂದಿರ ಒಂದರಲ್ಲೇ ಸತತ 25 ವಾರಗಳು ಯಶಸ್ವಿಯಾದ ಚಿತ್ರ, ಆಗಿನ ಕಾಲಕ್ಕೇ 7 ಲಕ್ಷ ರೂಪಾಯಿಗಳನ್ನು ಗಳಿಸಿ ಹೊಸ ದಾಖಲೆ ಬರೆಯಿತು ಮತ್ತು ಬೆಂಗಳೂರಿನ ಮೂರು ಮುಖ್ಯ ಚಿತ್ರಮಂದಿರಗಳಲ್ಲಿ ನೂರು ದಿನ ಪೂರೈಸಿದ ಮೊದಲ ಸಿನೆಮಾವೆಂಬ ಹೆಗ್ಗಳಿಕೆ ಪಡೆಯಿತು. ರಾಶ್ಟ್ರಪ್ರಶಸ್ತಿ ಗೆದ್ದುಕೊಂಡಿತು. ವಿಷ್ಣು ನಟಿಸಿದ್ದ ‘ಸಾಹಸಸಿಂಹ’ ಸಿನೆಮಾ 25 ವಾರಗಳನ್ನು ಪೂರೈಸಿತು. ಇಲ್ಲಿಂದ ಮುಂದೆ ವಿಷ್ಣು ಸಾಹಸಸಿಂಹ ಎಂದು ಹೆಸರುವಾಸಿಯಾದರು. ಆದರೆ ಈ ಚಿತ್ರಕ್ಕೂ ಮೊದಲೆ ಅಂದರೆ 1979ರಲ್ಲೆ ಇವರಿಗೆ ‘ಸಾಹಸಸಿಂಹ’ ಎಂಬ ಬಿರುದು ಬಂದಿತ್ತು.
ನಟನೆಯಲ್ಲದೇ, ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ
೧೯೮೦ರ ದಶಕದಲ್ಲಿ ಕಿರುತೆರೆಯಲ್ಲಿ ಪ್ರಸಾರಗೊಂಡ ಶಂಕರ್ ನಾಗ್ ನಿರ್ದೇಶನದ ಜನಪ್ರಿಯ ಧಾರಾವಾಹಿ ಮಾಲ್ಗುಡಿ ಡೇಸ್ ಕಥೆಯೊಂದರಲ್ಲಿ ವಿಷ್ಣುವರ್ಧನ್ ನಟಿಸಿದ್ದರು.
ಕನ್ನಡ ಚಿತ್ರರಂಗದಲ್ಲೆ ಅತಿ ಹೆಚ್ಚು ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಾರು ೧೪ ಚಿತ್ರಗಳು
ವಿಷ್ಣುವರ್ಧನ್-ಸುಹಾಸಿನಿ, ವಿಷ್ಣುವರ್ಧನ್-ಮಾಧವಿ ಜೋಡಿ ಕನ್ನಡ ಚಿತ್ರರಂಗದ ಅಪೂರ್ವ ಜೋಡಿಯೆಂದು ಹೆಸರಾಗಿದೆ. ಹಾಗೆಯೇ ವಿಷ್ಣು ಅವರ ಹೆಚ್ಚಿನ ಚಿತ್ರದಲ್ಲಿ ನಟಿಸಿದ ಕೀರ್ತಿ ನಟಿ ಆರತಿ ಅವರಿಗೆ ಸಲ್ಲುತ್ತದೆ.
ಬನ್ನಂಜೆ ಗೋವಿಂದಾಚಾರ್ಯರು ಇವರ ಆದ್ಯಾತ್ಮಿಕ ಗುರುವಾಗಿದ್ದರು, ಸಂಖ್ಯಾಭವಿಷ್ಯಶಾಸ್ತ್ರವನ್ನು ನಂಬುತ್ತಿದ್ದ ಇವರು ತಮ್ಮ ಕಾರಿನ ನಂಬರಾಗಿ ಮತ್ತು ಮೊಬೈಲ್ ನ ಕೊನೆಯ ಸಂಖ್ಯೆಯಾಗಿ “೩೨೧” ಬಳಸುತ್ತಿದ್ದರು.
ಬೆಂಗಳೂರು ವಿಶ್ವವಿದ್ಯಾಲಯವು ೨೦೦೫ನೇ ವರ್ಷದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಗೌರವಿಸಿದೆ.
ಇವರ ಸ್ಮರಣಾರ್ಥ ಭಾರತ ಸರ್ಕಾರ 2013ರಲ್ಲಿ ಅಂಚೆ ಚೀಟಿ ಹೊರತಂದಿದೆ.
ಈ ಮಹಾನ್ ನಟನ ಬಗ್ಗೆ ಯಾರಿಗೂ ಗೊತ್ತಿಲ್ಲದ ಟ್ಯಾಲೆಂಟ್ವೊಂದು ಇತ್ತು. ಅದು ನಟನೆಯ ಜೊತೆಗೆ ಹಿನ್ನೆಲೆ ಗಾಯನ. ವಿಷ್ಣುವರ್ಧನ್ ಶಾಸ್ತ್ರೀಯವಾಗಿ ಗಾಯನವನ್ನು ಕಲಿತಿದ್ದವರಲ್ಲ. ಸಂಗೀತವನ್ನು ಅಧ್ಯಯನ ಮಾಡಿದವರೂ ಅಲ್ಲ. ಆದರೆ, ಅಭಿನಯ ಶಾರದೆ ಮಾತ್ರ ವಿಷ್ಣುವರ್ಧನ್ಗೆ ಒಲಿದಿದ್ದಳು. ವಿಷ್ಣುವರ್ಧನ್, ಏಕಾಏಕಿ ಸಿನಿಮಾಗಳಿಗೆ ಹಾಡಲಿಲ್ಲ. ಮೊದ ಮೊದಲು ಅವರು ಭಕ್ತಿ ಗೀತೆಗಳನ್ನ ಹಾಡೋದಿಕ್ಕೆ ಶುರು ಮಾಡ್ತಾರೆ. ನಟನಾಗಿದ್ದ ವಿಷ್ಣುದಾದ ಮೊದಲು ಹಾಡಿದ ಹಾಡು ಅಂದರೆ, ತಾಯಿ ಬನಶಂಕರಿ ದೇವಿಯ ಭಕ್ತಿ ಗೀತೆಯನ್ನ. ಅಲ್ಲಿಂದ ಅಯ್ಯಪ್ಪಸ್ವಾಮಿ, ಧರ್ಮಸ್ಥಳ ಮಂಜುನಾಥಸ್ವಾಮಿ, ಮಲೆಮಹದೇಶ್ವರ ಸ್ವಾಮಿಯ ಗೀತೆಗಳನ್ನ ಹಾಡಿ ಸೈ ಎನಿಸಿಕೊಳ್ಳುತ್ತಾರೆ.
ಹಾಡಿನಲ್ಲಿ ಮಗ್ನರಾಗಿರುವ ಡಾ. ವಿಷ್ಣುವರ್ಧನ್ ವಿಭಿನ್ನ ಪಾತ್ರಗಳ ಮೂಲಕ ಬೆಳ್ಳಿತೆರೆ ಮೇಲೆ ವಿಜೃಂಭಿಸಿದ ಸಾಹಸ ಸಿಂಹ ವಿಷ್ಣುವರ್ಧನ್, ಅದ್ಭುತ ನಟ ಅನ್ನೋದಕ್ಕೆ ಅವರು ಅಭಿನಯಿಸಿರೋ ಚಿತ್ರಗಳೇ ಸಾಕ್ಷಿ. ನಾಗರಹಾವು ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ವಿಷ್ಣುವರ್ಧನ್ ಸೋತಿದ್ದು ಮಾತ್ರ ಸ್ನೇಹಕ್ಕೆ. ತನ್ನ ಸ್ನೇಹಮಯಿ ಗುಣದಿಂದಲೇ ಸಿನಿಮಾ ನಿರ್ಮಾಪಕರ ಅಚ್ಚುಮೆಚ್ಚಿನ ನಟನಾಗಿದ್ದ ಅವರು, ಅದ್ಭುತ ಹಾಡುಗಾರ ಅನ್ನೋದು ಅದೆಷ್ಟೋ ಜನಕ್ಕೆ ಗೊತ್ತಿಲ್ಲ. ನಟನೆ ಜೊತೆಗೆ ಹಾಡುವುದು ಅಂದ್ರೆ ಸಾಹಸ ಸಿಂಹನಿಗೆ ಅಚ್ಚುಮೆಚ್ಚು.
ಎಡಗೈ ಬಳಸಿದರೆ ಅಸಹ್ಯ ಅನ್ನುವ ಜನರ ಮಧ್ಯ, ತನ್ನ ಎಡಗೈ ಯಿಂದಲೇ ಮಾಡುವ ಒಂದು ಸನ್ನೆ ಪ್ರೇಕ್ಷಕರಿಗೆ ಇಷ್ಟವಾಗುವಂತೆ ಮಾಡಿದರು. ಈಗಲೂ ವಿಷ್ಣುವರ್ಧನ್ ಅಂತ ಹೆಸರು ಹೇಳಬೇಕಾಗಿಲ್ಲ ಅವರ ಆ ಒಂದು ಸ್ಟೈಲ್ ಮಾಡಿದರೆ ಸಾಕು, ಅದು ನಮ್ಮ ವಿಷ್ಣು ದಾದ ಅಂತ ಗೊತ್ತಾಗುತ್ತೆ.
ಧನ್ಯವಾದಗಳು.
GIPHY App Key not set. Please check settings