in

ಕೊಡಗಿನಲ್ಲಿ ಇರುವ ಅಬ್ಬೀ ಜಲಪಾತ

ಅಬ್ಬೀ ಜಲಪಾತ
ಅಬ್ಬೀ ಜಲಪಾತ

ಕೊಡಗು ಜಿಲ್ಲೆಯಲ್ಲಿ ಪ್ರಮುಖವಾಗಿ 3 ಜಲಪಾತವನ್ನು ನೋಡಬಹುದು ಸೋಮವರಪೇಟ್ ನಲ್ಲಿ ಮಳಲಿ ಜಲಪಾತ ಮಡಿಕೇರಿಯ ಆಬ್ಬಿಫಾಲ್ಸ್ ವಿರಾಜಪೇಟೆ ಯಲ್ಲಿ ಚೇಲವರ ಫಾಲ್ಸ್. ಫಾಲ್ಸ್ ತನ್ನದೇ ಆದ ವಿಶೇಷ ಪ್ರಾಮುಖ್ಯತೆ ಹೊಂದಿದೆ. ಅಭಿ ಫಾಲ್ಸ್ ಹಾಗೂ ಮಾಡಿಕೇರಿಯನ್ನು ನೋಡಬೇಕಾದರೆ ಮಳೆಗಾಲ ಹಾಗೂ ಚಳಿಗಾಲದಲ್ಲಿ ನೋಡಬೇಕು ತಂಪದ ಗಾಳಿ ಮಂಜಿನ ಹನಿ ವೈವಿಧ್ಯಮಯ ಪ್ರಕೃತಿಯಿಂದ ಕುಡಿರುತಡೆ ಅಭಿ ಫಾಲ್ಸ್ ನೋಡಲು ಪ್ರತಿನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದುಹೋಗುತ್ತಾರೆ.

ಕೊಡಗಿನಲ್ಲಿ ಇರುವ ಅಬ್ಬೀ ಜಲಪಾತ
ಕಾವೇರಿ ತೀರ್ಥೋದ್ಭವ

ಕಾವೇರಿ ಹುಟ್ಟುವುದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬ್ರಹ್ಮಗಿರಿ ಬೆಟ್ಟಶ್ರೇಣಿಯಲ್ಲಿ. ಈ ಪವಿತ್ರ ಪುಣ್ಯಕ್ಷೇತ್ರಕ್ಕೆ ತಲಕಾವೇರಿ ಎಂಬ ನಾಮಧೇಯ. ಇಲ್ಲಿ ಅಗಸ್ತ್ಯೇಶ್ವರ ದೇವಾಲಯ, ಗಣಪತಿ ದೇವಾಲಯ ಇದೆ. ಅಗಸ್ತ್ಯ ಮಹಾಮುನಿಗಳು ಈ ಲಿಂಗವನ್ನು ಸ್ಥಾಪಿಸಿದರು ಎಂಬುದು ಪ್ರತೀತಿ. ತಲಕಾವೇರಿಯ ಈ ದೇಗುಲಗಳ ತಗ್ಗಿನಲ್ಲಿ ಕಾವೇರಿ ಉಗಮವಾಗುವ ಚಚ್ಚೌಕದ ಚಿಕ್ಕ ಕೊಳವಿದೆ. ಅದರ ಮುಂದೆ ಸ್ನಾನಘಟ್ಟ. ಇಲ್ಲಿಯೇ ಕಾವೇರಿ ಹುಟ್ಟುವುದು. ಈ ಸ್ಥಳಕ್ಕೆ ಕುಂಡಿಗೆ ಎನ್ನುತ್ತಾರೆ. ತುಲಾಸಂಕ್ರಮಣದ ನಿಶ್ಚಿತವಾದ ದಿನ ಇಲ್ಲಿ ಕಾವೇರಿ ತೀರ್ಥೋದ್ಭವವಾಗುತ್ತದೆ. ಪ್ರತಿ ವರ್ಷ ತುಲಾ ಮಾಸದ ಸಂಕ್ರಮಣದಿಂದ ವೃಶ್ಚಿಕ ಮಾಸದ ಸಂಕ್ರಮದವರೆಗೆ ಇಲ್ಲಿ ಕಾವೇರಿ ಜಾತ್ರೆ ನಡೆಯುತ್ತದೆ. ತಮಿಳುನಾಡು, ಕೇರಳ, ಪಾಂಡಿಚೇರಿ, ಕರ್ನಾಟಕದ ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳಿಂದ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಕೊಳದಲ್ಲಿ ಮಿಂದು ಕುಂಡಿಗೆಯ ತೀರ್ಥ ಕುಡಿದು, ಪ್ಲಾಸ್ಟಿಕ್ ಕ್ಯಾನ್‌ಗಳಲ್ಲಿ ತುಂಬಿಕೊಂಡು ಮನೆಗೆ ಹೋಗುತ್ತಾರೆ. ಇದು ಪೌರಾಣಿಕ ಸ್ಥಳ, ಜೀವ ನದಿ ಹುಟ್ಟುವ ಜನ್ಮಸ್ಥಳ ಹೀಗಾಗಿ ಇದು ಭಕ್ತರಿಗೆ ಪುಣ್ಯ ಕ್ಷೇತ್ರ. ಪ್ರವಾಸಿಗರಿಗೆ ರಮ್ಯಕ್ಷೇತ್ರ. ಶೀತ ಮಾರುತಗಳಿಂದ, ಶೀತಹವೆಯಿಂದ ಕೂಡಿರುವ ಈ ಸ್ಥಳ ರಮಣೀಯ. ಬ್ರಹ್ಮಗಿರಿಯ ಶಿಖರವೇರಿದಾಗ ಕಾಣುವ ಆಕಾಶಶುಭ್ರವಾಗಿರುವ ಬೆಟ್ಟದಪುರದ ನೋಟ ಮನೋಹರ. ಇಲ್ಲಿ ನಿಂತು ನೋಡಿದರೆ, ಹಾವಿನಂತೆ ಹರಿಯುವ ನದಿಗಳನ್ನೂ, ದೂರದಲ್ಲಿ ಅರಬ್ಬಿ ಸಮುದ್ರದ ರುದ್ರರಮಣೀಯ ಪ್ರಕೃತಿ ಸಿರಿಯನ್ನೂ ಕಣ್ತುಂಬಿಕೊಳ್ಳಬಹುದು. ಹತ್ತಿರದಲ್ಲೇ ಇರುವ ಅಬ್ಬಿ ಜಲಪಾತಕ್ಕೆ ಹೋಗಿ ಆನಂದಿಸಬಹುದು.

ಅಬ್ಬೆ ಜಲಪಾತ : ಕಾವೇರಿ ಜಲಾನಯನ ಪ್ರದೇಶಗಳಲ್ಲಿ, ಭಾಗಮಂಡಲದ ಸುತ್ತ ಮುತ್ತ ಮಳೆ ಸುರಿಯುತ್ತಿದ್ದಾಗ ಕನ್ನಡ ನಾಡಿನ ಜೀವನದಿ ಕಾವೇರಿ ಉಕ್ಕಿ ಹರಿಯುತ್ತದೆ. ಕೊಡಗಿನ ರಮಣೀಯ ಹಸಿರು ರಾಶಿಯ ಮೇಲೆ ಮಳೆಯ ಹನಿಗಳು ಬೀಳುತ್ತಿದ್ದಂತೆಯೇ ಇಲ್ಲಿನ ವಿಖ್ಯಾತ ಜಲಪಾತ ‘ಅಬ್ಬೆ’ ಮೈದುಂಬಿ ಧುಮ್ಮುಕ್ಕುತ್ತದೆ. ಹಾಲು ನೊರೆಯಂತೆ ಆಕರ್ಷಕವಾಗಿ ಧುಮ್ಮಿಕ್ಕುವ ಅಬ್ಬಿ, ತನ್ನ ಪೂರ್ಣ ಸೊಬಗನ್ನು ಪಡೆಯುವುದೇ ಮಳೆಗಾಲದಲ್ಲಿ. ಹೀಗಾಗೆ ಅಬ್ಬಿಗೆ ಮಳೆಗಾಲದ ಮದುಮಗಳು ಎಂಬ ಹೆಸರೂ ಇದೆ. ರಭಸದಿಂದ ಭೋರ್ಗರೆವ ಅಬ್ಬಿಯ ಆರ್ಭಟ ಮಳೆಗಾಲದಲ್ಲಿ ಅರ್ಧ ಕಿಲೋ ಮೀಟರ್ ದೂರ ಕೇಳುತ್ತದೆ. ಬಂಡೆಗಳ ಮೇಲಿಂದ ಧುಮ್ಮಿಕ್ಕುವ ಅಬ್ಬಿಯ ಜಲಪಾತ ಹಾಲು ನೊರೆಯಂತಹ ರಮಣೀಯ ದೃಶ್ಯದೊಂದಿಗೆ ಮತ್ತಷ್ಟು ಕಳೆಗಟ್ಟುತ್ತದೆ. ನೋಡುಗರಿಗೆ ಅಮಿತಾನಂದವನ್ನು ನೀಡುತ್ತದೆ. ಇಲ್ಲಿರುವ ತೂಗುಯ್ಯಾಲೆಯ ಮೇಲೆ ಮಳೆಯಲ್ಲಿ ತೋಯುತ್ತಾ, ಅತ್ತಿಂದಿತ್ತ, ಇತ್ತಿಂದತ್ತ ಓಲಾಡುತ್ತಾ ಸಾಗಿದರೆ, ಧುಮ್ಮಿಕ್ಕುವ ಭೋರ್ಗರೆಯುತ್ತಾ ಧುಮ್ಮಿಕ್ಕುವ ಅಬ್ಬಿಯ ಜಲಹನಿಗಳೂ ನಿಮಗೆ ಪನ್ನೀರ ಎರಚುತ್ತಾ ಸ್ವಾಗತ ಕೋರುತ್ತವೆ. ಬೇಸಿಗೆಯಲ್ಲಿ ಒಣಗಿ ತನ್ನ ಸೊಬಗನ್ನು ಕಳೆದುಕೊಳ್ಳುವ ಮನೋಹರವಾದ ಅಬ್ಬಿ ಜಲಪಾತದ ಸೊಬಗನ್ನು ಸವಿಯಲು ಮಳೆಗಾಲವೇ ಸೂಕ್ತ.

ಕೊಡಗಿನಲ್ಲಿ ಇರುವ ಅಬ್ಬೀ ಜಲಪಾತ
ಅಬ್ಬೀ ಜಲಪಾತ

ಅಬ್ಬಿ ಜಲಪಾತವು ಕೊಡಗು ಜಿಲ್ಲೆಯ ಮುಖ್ಯ ಪಟ್ಟಣವಾದ ಮಡಿಕೇರಿಯಿಂದ ಕೇವಲ 7-8 ಕಿ.ಮೀ. ದೂರದಲ್ಲಿದೆ. ಮಡಿಕೇರಿಯವರೆಗೆ ಬಸ್ ಸೌಕರ್ಯವಿದ್ದು ಅಲ್ಲಿಂದ ೫ ಕಿ.ಮೀ. ಯಾವುದೇ ಸ್ಥಳೀಯ ಖಾಸಗಿ ವಾಹನವನ್ನು ಹಿಡಿದು ಹೋಗಬಹುದು. ನಂತರ ಸುಮಾರು ೫೦೦ ಮೀ ನಷ್ಟು ಕಾಫಿ ತೋಟದ ಮಧ್ಯೆ ನಡೆದುಕೊಂಡು ಹೋದರೆ ಈ ಸುಂದರವಾದ ಜಲಪಾತ ಕಾಣಸಿಗುತ್ತದೆ. ಮಳೆಗಾಲದ ನಂತರದ ಅವಧಿಯಲ್ಲಿ ಹೋದರೆ ೧೦೭ ಅಡಿ ಎತ್ತರದಿಂದ ಮೈದುಂಬಿಕೊಂಡು ಧುಮುಕುವ ಜಲಪಾತದ ವೈಭವವನ್ನು ಸವಿಯಬಹುದು. ಸುತ್ತಮುತ್ತಲು ದಟ್ಟವಾದ ಕಾಡು, ಕಾಫಿ ತೋಟದ ಮಧ್ಯೆ ಹಾಲಿನ ನೊರೆಯಂತೆ 30ರಿಂದ 40 ಅಡಿ ಎತ್ತರದ ಬೆಟ್ಟದಿಂದ ಧುಮ್ಮಿಕ್ಕುವ ನೀರನ್ನು ನೋಡುವುದೇ ಚೆಂದ. ನೋಡಿದಾಕ್ಷಣ.. ‘ಅಬ್ಬಾ’ ಎನ್ನುವಂತೆ ಉದ್ಘಾರ ತೆಗೆಯದವರೇ ಇಲ್ಲ ಎನ್ನಬಹುದು. ಇಷ್ಟೊಂದು ರಮಣೀಯವಾಗಿರುವ ಸ್ಥಳವು ಖಾಸಗಿ ಮಾಲೀಕರಿಗೆ ಸೇರಿದೆ ಎನ್ನುವುದು ಗಮನಾರ್ಹ. ನೆರವಂಡ ಇಂದಿರಾ ಅವರಿಗೆ ಸೇರಿದ ಜಾಗದಲ್ಲಿ ಅಬ್ಬಿ ಜಲಪಾತವಿದೆ.

ಬೆಂಗಳೂರಿನಿಂದ ೨೫೨ ಕಿಲೋಮೀಟರ್ ದೂರದಲ್ಲಿರುವ ಮಡಿಕೇರಿಗೆ ರಾಜ್ಯದ ಎಲ್ಲ ಪ್ರಮುಖ ಪಟ್ಟಣಗಳಿಂದ ನೇರ ಬಸ್ ಸೌಲಭ್ಯ ಇದೆ. ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ಕೇವಲ 10 ಕಿಲೋ ಮೀಟರ್. ಮಡಿಕೇರಿಯಲ್ಲಿ ಮೊದಲು ಮಡಿಕೇರಿ ಕೋಟೆ ನೋಡಿ, ಅಲ್ಲಿಂದ ಅಬ್ಬಿಗೆ ಬರಬಹುದು. ಮಡಿಕೇರಿಯಿಂದ ಭಾಗಮಂಡಲಕ್ಕೆ ೩೯ ಕಿ.ಮೀಟರ್. ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳು ಸೇರುವ ಈ ಸ್ಥಳದಲ್ಲಿ ಸುಂದರ ದೇವಾಲಯವಿದೆ. ಹತ್ತಿರದಲ್ಲೇ ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯೂ ಇದೆ. (ಮಡಿಕೇರಿಯಿಂದ ತಲಕಾವೇರಿಗೆ ೪೪ ಕಿ.ಮೀಟರ್). ಮಡಿಕೇರಿಯಿಂದ ನಿಸರ್ಗಧಾಮಕ್ಕೆ ೨೫ ಕಿ.ಮೀ ಹಾಗೂ ಹಾರಂಗಿ ಜಲಾಶಯಕ್ಕೆ ೩೬ ಕಿ.ಮೀ. ಮಾತ್ರ.

ಸುಮಾರು ಮುನ್ನೂರ ಮೂವತ್ತು ವರ್ಷಗಳ ಹಿಂದೆ ಬೆಟ್ಟವೊಂದನ್ನು ಸಮತಟ್ಟು ಮಾಡಿ ಕೋಟೆಯನ್ನೂ ಹಾಗೂ ಅರಮನೆಯನ್ನು ನಿರ್ಮಿಸಿದ್ದು ಹಾಲೇರಿ ವಂಶದ ರಾಜ ಮುದ್ದುರಾಜ. ಹಾಗಾಗಿ ಇದು ಮುದ್ದುರಾಜಕೇರಿಯಾಗಿ ಆಮೇಲೆ ಮಡಿಕೇರಿಯಾಯಿತು. 1681ರಲ್ಲಿ ನಿರ್ಮಾಣವಾದಾಗ ಬರೀ ಮಣ್ಣಿನಿಂದ ನಿರ್ಮಿಸಿದ ಕೋಟೆಯಾಗಿತ್ತು.
ಮುದ್ದುರಾಜ ನಿರ್ಮಿಸಿದ ಕೋಟೆಯನ್ನು ನಂತರ ವಶಪಡಿಸಿಕೊಂಡ ಟಿಪ್ಪು ಸುಲ್ತಾನ್ ಮಣ್ಣಿನಕೋಟೆಯನ್ನು ಕಲ್ಲಿನ ಕೋಟೆಯಾಗಿ ಮಾರ್ಪಡಿಸಿದನಲ್ಲದೆ, “ಜಾಫರಾಬಾದ್” ಎಂಬ ಹೆಸರಿಟ್ಟನು. ಆ ಬಳಿಕ 1734ರಲ್ಲಿ ಇದು ಬ್ರ್ರಿಟಿಷರ ವಶವಾಯಿತು. ಮಡಿಕೇರಿ ಪಟ್ಟಣದ ನಿರ್ಮಾತೃ ಹಾಲೇರಿ ವಂಶದ ಮೂರನೇ ದೊರೆ ಮುದ್ದುರಾಜ. ಈತ ಕ್ರಿ.ಶ ೧೬೮೧ರಲ್ಲಿ ಹಾವೇರಿಯಿಂದ ತನ್ನ ರಾಜಧಾನಿಯನ್ನು ಇಲ್ಲಿಗೆ ಸ್ಥಳಾಂತರಿಸಿಕೊಂಡು ಕೊಡಗನ್ನು ಆಳತೊಡಗಿದ.
ಆಗ ‘ಮುದ್ದುರಾಜನ ಕೇರಿ’ ಎಂದು ಕರೆಯಲ್ಪಡುತ್ತಿದ್ದ ಈ ಸಥಳ ಕಾಲಾಂತರದಲ್ಲಿ ‘ಮಡಿಕೇರಿ’ ಎಂಬ ಹೆಸರನ್ನು ಪಡೆಯಿತು. ಅಲ್ಲದೆ ಇದು ಮೊರಡಿಯ(ಬೆಟ್ಟ) ಮೇಲೆ ನಿರ್ಮಾಣವಾದ ಪಟ್ಟಣವಾದುದರಿಂದ ಮೊದಲಿಗೆ ಇದು ‘ಮೊರಡಿಯ ಕೇರಿ’ ಎಂದು ಕರೆಯಲ್ಪಟ್ಟು ಆಮೇಲೆ ‘ಮಡಿಕೇರಿ’ ಎಂದಾಯಿತು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

10 Comments

  1. Jede Haus Option verändert Multiplikatoren und Dynamik in den Freispielen. Microgaming verpackt die Serie in ein Slot
    Abenteuer mit Haus Auswahl in den Freispielen. Die überwiegende Mehrheit der Spiele, die Sie hier bei Casino Guru spielen können, fallen in die
    Kategorie der mobilen Casinospiele.
    Dazu wählst du einfach ein Spiel aus der Liste aus und folgst
    dem Link – das Gratisspiel wird direkt in deinem Browserfenster geladen. Download und Registrierung sind ebenso wenig erforderlich wie
    eine Echtgeld Einzahlung. Mit unserer Zusammenstellung lernen Sie monatlich neue Online Slots und
    Casino Spiele kostenlos kennen, ohne Anmeldung oder Einzahlung
    in einem Online Casino.
    Nein, mit gratis Casino Slots Spielautomaten kann man kein echtes Geld gewinnen. In den von uns empfohlenen Slot Casinos hast du jedoch die Möglichkeit, global anerkannte Spielautomaten in höchster Qualität gratis auszuprobieren. In der Schweiz kannst du in zahlreichen Casinos Spielautomaten kostenlos nutzen, wobei die Qualität
    und das Spielerlebnis von Plattform zu Plattform unterschiedlich sein können. An dieser
    Stelle möchten wir dir drei herausragende
    Anbieter vorstellen, die mit ihren kreativen Entwicklungen die
    Art und Weise, wie du spielst, unserer Meinung nach geradezu revolutionieren. Diese Studios
    sind nicht nur das Rückgrat der Casino-Industrie, sondern auch Innovatoren, die ständig neue Wege finden, um dein Spielerlebnis zu beflügeln und
    neu zu definieren. Dieses Symbol verkörpert perfekt das verspielte,
    aber leicht teuflische Thema des Spiels.

    References:
    https://online-spielhallen.de/lex-casino-top-spielportal-in-deutschland/

  2. If judges agree, the asylum cases could be wiped off the docket and the migrants
    deported abroad, even if they never set foot in their home countries again.
    The documents reviewed include requests to send asylum seekers to places like Guatemala, Honduras,
    Ecuador and Uganda. According to internal data obtained by CBS News, attorneys from US Immigration and Customs Enforcement (ICE) have filed more than 8,000 motions asking judges to dismiss asylum claims
    without ever hearing them on their merits.
    The Department of Homeland Security has defended the policy, saying it’s
    using “lawful tools” to address system backlogs and curb what it calls abuse of the asylum system.
    Inside the courts, lawyers say the filings are popping up with little
    notice, sometimes just days before hearings are scheduled to take place, leaving little time
    to mount a defence. Critics argue this approach sidesteps
    long-standing asylum protections and due process.

    References:
    https://blackcoin.co/best-online-pokies-for-real-money-in-australia/

ಇಂದು ಭಯಂಕರವಾದ ಭಾನುವಾರ ಇಂದಿನ ಮಧ್ಯರಾತ್ರಿಯಿಂದ ಈ 5 ರಾಶಿಯವರಿಗೆ ಬಾರಿ ಅದೃಷ್ಟ ಗುರುಬಲ ಶುಕ್ರದೆಸೆ ಮುಂದಿನ 20ವರ್ಷ

ಇಂದು ಭಯಂಕರವಾದ ಭಾನುವಾರ ಇಂದಿನ ಮಧ್ಯರಾತ್ರಿಯಿಂದ ಈ 5 ರಾಶಿಯವರಿಗೆ ಬಾರಿ ಅದೃಷ್ಟ ಗುರುಬಲ ಶುಕ್ರದೆಸೆ ಮುಂದಿನ 20ವರ್ಷ

ಮಾತನಾಡಲು ಬರದ ಕಿವಿಯೂ ಕೇಳಿಸದ ಈ ಕನ್ನಡದ ನಟಿ ಬಗ್ಗೆ ನಿಮಗೆಷ್ಟು ಗೊತ್ತು

ಮಾತನಾಡಲು ಬರದ ಕಿವಿಯೂ ಕೇಳಿಸದ ಈ ಕನ್ನಡದ ನಟಿ ಬಗ್ಗೆ ನಿಮಗೆಷ್ಟು ಗೊತ್ತು