in

ಭೂತಾರಾಧನೆ ತುಳುನಾಡಿನ ಸಂಸ್ಕೃತಿ

ಭೂತಾರಾಧನೆ
ಭೂತಾರಾಧನೆ

ಭೂತಾರಾಧನೆ ತುಳುನಾಡಿನ ಆರಾಧನೆಗಳಲ್ಲಿ ಪ್ರಮುಖವಾದದ್ದು, ಇದನ್ನು ‘ದೈವಾರಾಧನೆ’ ಎಂದೂ ಕರೆಯುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಕೇರಳ ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ವಿಶೇಷವಾಗಿ ಕಂಡುಬರುವ ಒಂದು ರೀತಿಯ ಆರಾಧಾನೆ.

ಸಾಮಾನ್ಯವಾಗಿ ಆರಾಧನೆಗೊಳ್ಳುವ ಭೂತಗಳನ್ನು ಸ್ಥೂಲವಾಗಿ ಮೂರು ರೀತಿಯಲ್ಲಿ ವರ್ಗೀಕರಿಸಬಹುದು. ಪ್ರಾಣಿರೂಪದಲ್ಲಿರುವ ಭೂತ, ಮನುಷ್ಯನ ಮರಣಾನಂತರ ದೈವೀಕೃತವಾದ ಭೂತ, ಪುರಾಣದಿಂದ ಆಯ್ದುಕೊಂಡ ವ್ಯಕ್ತಿಗಳ ಭೂತ.

ಹುಲಿ, ಹಂದಿ, ನಂದಿ, ಕೋಣ ಇತ್ಯಾದಿ(ಪಿಲಿಚಂಡಿ, ಪಂಜುರ್ಲಿ, ಮೈಸಂದಾಯ) ಪ್ರಾಣಿಗಳು ಮೊದಲನೆಯ ವರ್ಗದ ರೂಪದಲ್ಲಿ ಆರಾಧನೆಗೊಳ್ಳುತ್ತವೆ. ಜುಮಾಧಿ, ಕಲ್ಕುಡ-ಕಲ್ಕುರ್ಚಿ, ಕುಜುಂಬ-ಕಂಜ, ಕಾಂತಾಬಾರೆ-ಬೂದಾ ಬಾರೆ ಮೊದಲಾದ ವ್ಯಕ್ತಿಗಳು ಮಾನವರಾಗಿದ್ದಾಗ ವೀರ ಕೆಲಸ ಮಾಡಿ ಅಕಾಲ ಮರಣಕ್ಕೆ ತುತ್ತಾಗಿ ಅನಂತರ ಭೂತಗಳಾಗಿ ದೈವತ್ವ ಹೊಂದಿ ಆರಾಧನೆಗೊಳ್ಳುತ್ತವೆ. ಇವು ಎರಡನೆಯ ವರ್ಗಕ್ಕೆ ಸೇರುತ್ತವೆ. ಕೊಡಮಣಿತ್ತಾಯ, ಕಿಕ್ಕುಣಂತಾಯ, ಶಿವತ್ತಾಯ, ಅಣ್ಣಪ್ಪ, ಅಡ್ಕತ್ತಾಯ ಮೊದಲಾದ ದೈವಗಳನ್ನೂ ಈ ಗುಂಪಿಗೇ ಸೇರಿಸಬಹುದು. ತುಳುನಾಡಿನಲ್ಲಿ ಬೆರ್ಮೆ ಎಂಬ ದೈವ ಬ್ರಹ್ಮನ ಪ್ರತಿರೂಪವೇ ಆಗಿದೆ. ವೇದಬ್ರಹ್ಮನ ನಿರ್ದೇಶನ ಒಂದು ಕ್ರಮದಲ್ಲಿದ್ದರೆ ಬೆರ್ಮೆ ಎಂಬ ದೈವ ಭೂತಬ್ರಹ್ಮವಾಗಿ ಇನ್ನೊಂದು ರೀತಿಯಲ್ಲಿ ಆರಾಧನೆಗೊಳ್ಳುತ್ತದೆ. ಇವನಿಗೆ ನಾಲ್ಕು ಮುಖ ಮತ್ತು ನಾಲ್ಕು ಕೈಗಳು, ಕೈಗಳಲ್ಲಿ ಖಡ್ಗ, ಡಮರು ಕಪಾಲ ಮತ್ತು ಕಠಾರಿ ಮೊದಲಾದ ಆಯುಧಗಳಿವೆ. ತುಳುವರ ಮೂಲ ದೇವರು “ಬೆಮ್ಮೆರ್”

ಭೂತಾರಾಧನೆ ತುಳುನಾಡಿನ ಸಂಸ್ಕೃತಿ
ಮೂಲ ದೇವರು

ಭೂತನೆಲೆಯ ಸ್ಥಳವನ್ನು ಭೂತಸ್ಥಾನ, ಭೂಸ್ಥಾನ ಎಂದು ಕರೆಯುತ್ತಾರೆ. ಭೂತಸ್ಥಾನಕ್ಕೆ ಅಲೆಡೆ, ಗರಡಿ, ಕಟ್ಟೆ, ತಾನೊ, ಚಾವಡಿ ಎಂಬ ಹೆಸರುಗಳೂ ಇವೆ. ಇವಕ್ಕೆ ಕಿಟಕಿಗಳಿರುವುದಿಲ್ಲ. ರಾಜನ್ ದೈವಗಳಿಗೆ ಭೂತಗಳಿಗೆ ಇದಕ್ಕೂ ದೊಡ್ಡದಾದ ಭೂತಸ್ಥಾನಗಳಿರುವುದುಂಟು. ಸ್ಥಾನದ ಒಳಗೆ ಮನುಷ್ಯರಂತೆ, ಪ್ರಾಣಿಗಳಂತೆ ರೂಪವಿರುವ ಹಿತ್ತಾಳೆಯ ಹಲವಾರು ಉರುಗಳಿರುತ್ತವೆ, ಜೊತೆಗೆ ಮಣೆಮಂಚ(ತೂಗುಮಂಚ) ಅಥವಾ ಕಾಲುಳ್ಳ ಮಂಚವಿರುತ್ತದೆ. ಇದನ್ನು ಉಜ್ಜಾಲ್ ಮಣೆಮಂಚ ಎನ್ನುತ್ತಾರೆ. ಇದರ ಮೇಲೆ ಭೂತದ ಖಡ್ಗ ಹಾಗೂ ಗುಂಟೆ ಇರುತ್ತವೆ. ಭೂತಸ್ಥಾನದಲ್ಲಿ ಕಂಡುಬರುವ ಹುಲಿ, ಹಂದಿ, ಕೋಣ, ಎತ್ತು ಮೊದಲಾದವುಗಳು ವಿಗ್ರಹಗಳನ್ನು ಭೂತವಾಹನಗಳಾಗಿ ಉಪಯೋಗಿಸುವುದರ ಜೊತೆಗೆ, ಅವನ್ನೂ ಭೂತಗಳ ಪರಿವಾರವೆಂದು ಕರೆದು ವಿಶೇಷ ಸಂದರ್ಭಗಳಲ್ಲಿ ಪೂಜಿಸುವುದೂ ಉಂಟು. ಹೀಗೆ ಪೂಜಿಸುವಾಗ ಭೂತದ ಬಳಿ ಒಂದು ಕತ್ತಿ, ಕಂಚಿನ ಕಳಸದಲ್ಲಿ ನೀರು ದೀಪ ಇಟ್ಟಿರುತ್ತಾರೆ.

ತುಳುನಾಡ ಸಾಂಸ್ಕೃತಿಕ ಪದಕೋಶದಲ್ಲಿ ಸಾಮಾಜಿಕ ಬದುಕಿನಲ್ಲಿ ಮುಖ್ಯವಾಗಿ ತಿಳಿಯುವ ಪದ ಭೂತ. ಕನ್ನಡ ಭಾಷೆಯ ಸಾಂಸ್ಕೃತಿಕ ಪದಕೋಶದಲ್ಲಿ ಭೂತ ಪದ ಬಳಕೆಯಲ್ಲಿಲ್ಲ. ಸಂಸ್ಕೃತ ಭಾಷೆಯಲ್ಲೂ ಇಲ್ಲ. ಮಲಯಾಳಿಗಳು ತೆಯ್ಯಂ ಎಂದು ಕರೆಯುವ ತುಳುವರ ಭೂತವು ದೈವ, ದೈವಂಕುಲು ಆಗಿ ಬಳಕೆಯಲ್ಲಿದೆ.

ಆರಾಧನೆಯ ಪರಂಪರೆಯ ತುಳುನಾಡಿನಲ್ಲಿ ದೈವ(ಭೂತೊ) ಮತ್ತು ದೇವರು ಬೇರೆಬೇರೆ ಎಂದು ನೋಡುವುದಿಲ್ಲ. ದೈವ ಮತ್ತು ದೇವರು ಎರಡನ್ನು ಭಿನ್ನ ನೆಲೆಯಲ್ಲಿ ನಂಬಿ ಬದುಕುತ್ತಿದ್ದಾರೆ. ೧೪ನೆಯ ಶತಮಾನದಿಂದ ಈಚೆಗೆ ದೈವೊ ಪದದ ಬಳಕೆ ಆಗುತ್ತಿದೆ.

ಭೂತ+ಆರಾಧನೆ=ಭೂತಾರಾಧನೆ. ಭೂತವನ್ನು ನಂಬಿದವರಿಗೆ ಜಯ ಕೊಡುತ್ತದೆ, ನಂಬದವನಿಗೆ ಅಪಜಯವಾಗುತ್ತದೆ(ಭೂತೊ ನಂಬಿನಕ್ಲೆಗ್ ಇಂಬು ಕೊರ್ಪುಂಡು ನಂಬಂದ್‍ನಕ್ಲೆಗ್ ಅಂಬು ಕೊರ್ಪುಂಡು) ಎಂಬ ನಂಬಿಕೆಯಿದೆ. ತುಳುವಿನ ಅಂಬು’ ಎಂಬ ಪದಕ್ಕೆ ಶಿಕ್ಷೆ ಎಂಬ ಅರ್ಥವಿರುವುದರಿಂದ ಶಿಕ್ಷೆ ಆಗದೆ ರಕ್ಷೆಗಾಗಿ ಭೂತವನ್ನು ನಂಬಿದರೆ ತಮಗೆ ಏನಾದರೂ ಒಳಿತಾಗಬಹುದೆಂದು ತುಳುನಾಡಿನ ಜನರು ನಂಬಿದ್ದಾರೆ. ನಂಬುವವರಿಗೆ ಭೂತ ಮೈಸೇರುತ್ತದೆಂದು ನಂಬಿಕೆಯಿದೆ. ಅಂದರೆ ಭೂತ ನಂಬಿಕೆಯಿರುವವರಿಗೆ ವಶವಾಗುತ್ತದೆ. ಹೀಗೆ ವಶವಾಗುವ ಭೂತ ನಂಬಿದವನಿಗೆ ಒಳ್ಳೆಯ ಮದಿಪು ನೀಡುತ್ತದೆ. ನಂಬುವವರು ದೇವರಿಗೆ ಹರಕೆ ನೀಡುವಂತೆ ಭೂತಕ್ಕೂ ಹರಕೆ ನೀಡುತ್ತಾರೆ. ಕೋಲ ಕೊಡುವ, ನೇಮೊ ಮಾಡುವ, ತಂಬಿಲ, ಅಗೆಲ್ ಬಡಿಸುವ ಕ್ರಮ ಇಂದಿಗೂ ನಡೆದುಕೊಂಡು ಬಂದಿದೆ. ಭೂತಾರಾಧನೆ ಸಮಯದಲ್ಲಿ ಭೂತದ ವೇಷ ಹಾಕುವವನು ಮೈಗೆ ಅಲಂಕಾರಯುಕ್ತವಾದ ವೇಷಭೂಷಣ ತೊಡುತ್ತಾರೆ. ಸ್ತ್ರೀ ಪುರುಷ ಭೂತಗಳಿಗೆ ಪ್ರತ್ಯೇಕವಾದ ವೇಷಭೂಷಣಗಳಿರುತ್ತವೆ. ಅಣಿ ಕಟ್ಟಿಕೊಂಡು ಮುಗೊಕಟ್ಟಿಕೊಂಡು, ಕೈಯಲ್ಲಿ ಸುರಿಯೆ(ಕತ್ತಿ) ಹಿಡಿದುಕೊಂಡು, ಬಿಲ್ಲ್‌ ಪಗರಿ(ಬಲ್ಲುಬಾಣ) ಹಿಡಿದುಕೊಂಡು,ಕಾಲಿಗೆಗಗ್ಗರೊ ಕಟ್ಟಿಕೊಂಡು ಕುಣಿಯುವ ಕಾರ್ಯಕ್ರಮಕ್ಕೆ ಭೂತಾರಾಧನೆ ಎಂದು ಕರೆಯುತ್ತಾರೆ.
ಭೂತಾರಾಧನೆ ಎಂಬ ಪದ ಆರಾಧನಾ ಪರಂಪರೆಯಿಂದ ಹುಟ್ಟಿದ ಪದವಲ್ಲ. ಅದು ತೌಳವ ಸಂಸ್ಕೃತಿಯನ್ನು ಒಟ್ಟಾಗಿ ಸೂಚಿಸುವ ಪದ.

ದಕ್ಷಿಣ ಕನ್ನಡ ಜಿಲ್ಲೆಯ ತುಳು ಮಾತನಾಡುವ ಪ್ರದೇಶದ ಭೂತಾರಾಧನೆಗೂ ಕನ್ನಡ ಮಾತನಾಡುವ ಪ್ರದೇಶದ ಭೂತಾರಾಧನೆಗೂ ಕೆಲವು ವೈಶಿಷ್ಟ್ಯಗಳೂ ವ್ಯತ್ಯಾಸಗಳೂ ಕಂಡುಬರುತ್ತವೆ. ತುಳು ಮಾತನಾಡುವಲ್ಲಿ ಕೆಲವೇ ನಿಶ್ಚಿತ ಜಾತಿಗೆ ಸೇರಿದ—ಮುಖ್ಯವಾಗಿ ಬೈದ್ಯ, ನಲಿಕೆ, ಪರವ, ಪಂಬರ, ಪಾಣಾರ—ಜನ ಮಾತ್ರ ಭೂತಾರಾಧನೆಯಲ್ಲಿ ಭಾಗವಹಿಸುತ್ತಾರೆ. ಇಲ್ಲಿ ಒಂದು ಭೂತವನ್ನು ಇಂಥವನೇ ಪೂಜಿಸಬೇಕೆಂಬ ನಿಯಮವಿದೆ ಅದಕ್ಕೆ ಅಜಲು ಎನ್ನುವರು. ಒಂದೇ ಗುಡಿಯಲ್ಲಿ ಅನೇಕ ದೈವಗಳ ಉರು, ಮುಗೊಗಳಿರುತ್ತವೆ. ಈ ಭೂತಗಳಿಗೆ ಪಾಡ್ಡನಗಳಿಲ್ಲ; ಸರಿಯಾದ ಕಥೆಯಿಲ್ಲ. ಈ ದೈವಗಳಿಗೆ ವರ್ಷಕ್ಕೊಂದು ಸಲ ಎಥವಾ ವಿಶಿಷ್ಟ ಸಂದರ್ಭಗಳಲ್ಲಿ ಕೋಲ, ನೇಮ, ಬಲಿ, ಅಗಲು, ತಂಬಿಲ. ಬಂಡಿ ಮೊದಲಾದ ವಿವಿಧ ರೀತಿಯ ಉತ್ಸವ ಹಾಗೂ ಸೇವೆ ಜರುಗುತ್ತವೆ. ಕೋಲ ಮತ್ತು ನೇಮ ದೈವದ ನೃತ್ಯಸಹಿತ ಉತ್ಸವದ ರೂಪದಲ್ಲಿ ನಡೆಯುತ್ತವೆ. ನೇಮ ಹೆಚ್ಚಾಗಿ ರಾತ್ರಿ ನಡೆಯತ್ತದೆ. ಅಗಲು ಸಾಮಾನ್ಯವಾಗಿ ಕೋಲದ ಹಿಂದಿನ ರಾತ್ರಿ ನಡೆಯುತ್ತದೆ. ಕೋಲವನ್ನು ಹೆಚ್ಚಾಗಿ ಪಂಬರರು, ಪರವರು, ನಲಿಕೆಯವರು ಕಟ್ಟುತ್ತಾರೆ. ‘ಪರ್ವ ಭೂತಗಳಿಗೆ ಇನ್ನೊಂದು ರೀತಿಯಲ್ಲಿ ನಡೆಯುವ ಪೂಜೆ. ನೇಮ, ಊರವರೆಲ್ಲ ಸೇರಿ ನಡೆಸುವ, ಸ್ವಲ್ಪ ಹಿರಿಯ ಪ್ರಮಾಣದ ಉತ್ಸವ. ಎರಡೋ ಮೂರೋ ದಿನ ನಡೆಯಬಹುದು

ಭೂತಾರಾಧನೆ ತುಳುನಾಡಿನ ಸಂಸ್ಕೃತಿ
ಭೂತ ವೇಷಧಾರಿ

ಕೋಲ ಎಂದರೆ ಅಲಂಕಾರ ಎಂದರ್ಥ. ಭೂತ ವೇಷಧಾರಿಗೆ ತೊಡಿಸುವ ವಿಶೇಷ ವೇಷ ಪರಿಕರಗಳ ಬೆಡಗಿನಿಂದಾಗಿ ಸಂಬಂಧಪಟ್ಟ ಉತ್ಸವಕ್ಕೂ ಅದೇ ಹೆಸರು ಬಂದಿದೆ. ಕೋಲವನ್ನು ವಾಡಿಕೆಯಂತೆ ವರ್ಷಕ್ಕೊಂದು ಬಾರಿ ನಿರ್ದಿಷ್ಟ ಸ್ಥಳದಲ್ಲಿ ನಿಶ್ಚಿತ ದಿನಗಳಲ್ಲಿ ಜರಗಿಸಬಹುದು; ಅಥವಾ ವಿಶೇಷ ಸೇವೆಯಾಗಿ ಬೇರೆಯೇ ಸಂದರ್ಭಗಳಲ್ಲಿಯೂ ನಡೆಯಿಸಬಹುದು. ಕೋಲದ ಚಪ್ಪರಕ್ಕೆ ಪತಾಕೆಯ ರೂಪದಲ್ಲಿ ಮಡಿವಾಳನು ಬಿಳಿ ಅಥವಾ ಕೆಂಪು ಬಟ್ಟೆ ಕಟ್ಟುವುದಿದೆ. ಎಳನೀರು, ಸೌತೆ, ಕುಂಬಳ ಮುಂತಾದವನ್ನು ಚಪ್ಪರದಲ್ಲಿ ತೂಗಿಸುತ್ತಾರೆ. ಕೋಲಕ್ಕೆ ಮೊದಲು ಮಣ್ಣು ಮುಹೂರ್ತ ಎಂಬ ವಿಧಿ ಜರುಗುವುದಿದೆ. ಕೋಲ ಜರಗಬೇಕಾದ ಸ್ಥಳದ ತುಸು ಮಣ್ಣನ್ನು ಆಯಾಸ್ಥಾನದ ಪೂಜಾರಿ ತಂದು, ಗಂಧಿ ಪ್ರಸಾದ ಸ್ವೀಕರಿಸಿ ಒಳಗೆ ಹೊರಗೆ ತುಲಸಿಕಟ್ಟೆ, ಪಾಗಾರ ಮುಂತಾದ ಎಡೆಗಳಲ್ಲಿ ಎಲ್ಲೆಲ್ಲಿ ಬಿರುಕುಗಳಿವೆಯೋ ಅಲ್ಲಿಗೆ ಮಣ್ಣನ್ನು ಮೆತ್ತಿ ಜಾಗವನ್ನು ಪ್ರಶಸ್ತಗೊಳಿಸುವನು. ಕೋಲದ ಚಪ್ಪರದ ನಡುವೆ ಗರಡಿಯ ಒಳಗೆ ನೆಲದಲ್ಲಿ ವಿವಿಧ ರೀತಿಯ ಮಂಡಲಗಳನ್ನು ಬಣ್ಣದ ಪುಡಿಗಳಿಂದ ಬರೆಯುವುದುಂಟು. ಮಂಡಲದ ಮೇಲಕ್ಕೆ ನೇರವಾಗಿ ಒಂದು ತೆಂಗಿನಕಾಯನ್ನು ವಿಧಿಪೂರ್ವಕವಾಗಿ ತೂಗಿಸುತ್ತಾರೆ. ಇದಕ್ಕೆ ಕುಕ್ಯಾಲಿ ಎಂದು ಹೆಸರು.

ಕೆಲವು ಕೋಲಗಳಿಗೆ ಭಂಡಾರ ಹೋಗುವ ಕ್ರಮವಿದೆ, ಭೂತದ ಮೊಗ, ಬೆಳ್ಳಿ ಒಂಗಾರದ ನಗನಾಣ್ಯಗಳೇ ಮುಂತಾದ ವೇಷ ಸಾಮಗ್ರಿಗಳೂಸುರಿಗೆ ಮುಂತಾದ ಆಯುಧಗಳೂ ನಿಶಾನಿ, ಗಣಿ, ದೀವಟಿಗೆ, ಸತ್ತಿಗೆ ಮುಂತಾದ ಬಿರ್ದಿನಿಂದ ಕೊಂಬುವಾಲಗದೊಂದಿಗೆ ಕೋಲದ ಚಪ್ಪರದದೆಡೆಗೆ ಸಾಗುವುವು. ಭೂತದ ವೇಷಕ್ಕೆ ತೆಂಗಿನ ಎಳೆಯಗರಿ, ಕೇಪಳದಹೂ, ಅರದಾಳ, ಮಸಿ, ಇಂಗಳಿಕ, ಕೆಂಪುವಸ್ತ್ರ, ದಗಲೆ, ಗೆಜ್ಜೆ, ಗಗ್ಗರ, ಕೈದಂಡೆ, ನೆತ್ತಿಪಟ್ಟ, ಚಪ್ಪರಕೊಂಬು, ಮಾಲೆಗಳು, ಅಣಿ ಮೊದಲಾದವನ್ನು ಉಪಯೋಗಿಸುತ್ತಾರೆ. ಆಯಾ ಭೂತದ ಸ್ವರೂಪ, ಸ್ವಭಾವಗಳಿಂದ ತಕ್ಕ ಅಣಿಯನ್ನೂ ಮಖವರ್ಣಿಕೆಯನ್ನೂ ಇತರ ಪರಿಕರಗಳನ್ನೂ ಬಳಸುತ್ತಾರೆ.

ಪೂಜೆ ರೀತಿಯಲ್ಲಿ ಆಯಾ ಭೂತದ ರೌದ್ರಭಾವನೆಗೆ ಅನುಗುಣವಾಗಿ ಕುಣಿತದ ಮೂಲಕ ಪೂಜೆಯಾಗುತ್ತದೆ. ಭೂತವನ್ನು ಪ್ರತಿನಿಧಿಸುವ ವ್ಯಕ್ತಿಯನ್ನು ಬೂತ ಕಟ್ಟುನಾಯೆ(ಪಾತ್ರಿ) ಎನ್ನುತ್ತಾರೆ. ಒಂದೊಂದು ಭೂತಕ್ಕೂ ಅದಕ್ಕೊಪ್ಪುವ ಅರದಳವಿರುತ್ತದೆ. ಅಲಂಕಾರ, ವೇಷ, ಮುಖ ವರ್ಣಿಕೆ ಇರುತ್ತವೆ. ಮೈಗೆ ಕೆಂಪುಬಟ್ಟೆ, ನಡುವಿಗೆ ನೆರಿಗೆಯುಳ್ಳ ಲಂಗ, ತಲೆಗೆ ಕಿರೀಟ (ಅಣಿ), ಕಾಲಿಗೆ ಗಗ್ಗರ, ಸೊಂಟಕ್ಕೆ ದಟ್ಟಿ, ತೋಳಿಗೆ ವಂಕಿ, ಕೈಗೆ ಬಳೆ, ಎದೆಗೆ ಕಂಚಿನ ರಕ್ಷೆ, ಕಿವಿಗೆ ಮತ್ತು ಹಣೆಗೆ ಅಲಂಕಾರ ಇರುತ್ತದೆ. ಒಮ್ಮೊಮ್ಮೆ ಆಯಾ ಭೂತದ ಮುಖವಾಡ ಧರಿಸಿ ಕುಣಿಯುವುದೂ ಉಂಟು. ಭೂತಾರಾಧನೆ ಕೆಲವೊಮ್ಮೆ ಸಾರ್ವಜನಿಕವಾಗಿಯೂ ಒಂದೊಂದೆ ಮನೆಯಲ್ಲಿಯೂ ನಡೆಯುತ್ತದೆ. ಬತ್ತ, ಅಕ್ಕಿ, ಬತ್ತದ ಅರಳು, ಎಳನೀರು, ತೆಂಗಿನಕಾಯಿ, ಅಡಿಕೆ, ಹೊಂಬಾಳೆ, ತೆಂಗಿನ ಗರಿ—ಇವು ಭೂತಾರಾಧನೆಯ ಮುಖ್ಯ ವಸ್ತುಗಳು. ಎಲ್ಲ ರೀತಿಯ ಭೂತ ಕಟ್ಟುವಾಗಲೂ ಕೈಯಲ್ಲಿ ದೀವಟಿಗೆಯಿರುತ್ತದೆ

ಧನ್ಯವಾದಗಳು.

What do you think?

-1 Points
Upvote Downvote

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

20 Comments

  1. Оформление кредита в максимально короткие сроки [url=]https://www.infokredit24.ru[/url].
    Быстро кредит можно оформить в том банке, где вы получаете зарплату. Тогда справка о доходах не потребуется и собрать документы будет гораздо проще. Либо, если у вас положительная кредитная история.

  2. Абузоустойчивый VPS
    Виртуальные серверы VPS/VDS: Путь к Успешному Бизнесу

    В мире современных технологий и онлайн-бизнеса важно иметь надежную инфраструктуру для развития проектов и обеспечения безопасности данных. В этой статье мы рассмотрим, почему виртуальные серверы VPS/VDS, предлагаемые по стартовой цене всего 13 рублей, являются ключом к успеху в современном бизнесе

  3. https://medium.com/@madilyn20810/бесплатный-vps-с-выделенным-сервером-6e99364b27b0
    VPS SERVER
    Высокоскоростной доступ в Интернет: до 1000 Мбит/с
    Скорость подключения к Интернету — еще один важный фактор для успеха вашего проекта. Наши VPS/VDS-серверы, адаптированные как под Windows, так и под Linux, обеспечивают доступ в Интернет со скоростью до 1000 Мбит/с, что гарантирует быструю загрузку веб-страниц и высокую производительность онлайн-приложений на обеих операционных системах.

  4. https://medium.com/@BNguyen27331/бесплатный-vps-выделенная-память-dc60151d7d2f
    https://medium.com/@DeniseHahn52987/бесплатный-сервер-4f0753027c3c
    https://medium.com/@TerryMolin7735/ubuntu-выделенный-сервер-веб-приложения-прокси-4137b6d9da2d
    https://medium.com/@kai_ford31163/vds-хостинг-высокопроизводительный-1cb005713820
    https://medium.com/@NikolaiTuc6497/абузоустойчивый-выделенный-сервер-49ea84a78ba8

    VPS SERVER
    Высокоскоростной доступ в Интернет: до 1000 Мбит/с
    Скорость подключения к Интернету — еще один важный фактор для успеха вашего проекта. Наши VPS/VDS-серверы, адаптированные как под Windows, так и под Linux, обеспечивают доступ в Интернет со скоростью до 1000 Мбит/с, что гарантирует быструю загрузку веб-страниц и высокую производительность онлайн-приложений на обеих операционных системах.

ಹಳೇಬೀಡು

ಹಳೇಬೀಡು ಇತಿಹಾಸ

ಹುಳುಕು ಹಲ್ಲು

ಹುಳುಕು ಹಲ್ಲಿನ ಸಮಸ್ಯೆಯೇ, ಹಲ್ಲಿನ ಆರೋಗ್ಯಕ್ಕೆ ಸರಳ ಪರಿಹಾರ