in

ಚಾಮುಂಡೇಶ್ವರಿ ಬೆಟ್ಟದ ಮೇಲೆ ನೆಲೆಯಾದ ಕಥೆ

ಚಾಮುಂಡೇಶ್ವರಿ
ಚಾಮುಂಡೇಶ್ವರಿ

ಚಾಮುಂಡೇಶ್ವರಿ ಹಿಂದೂಧರ್ಮದಲ್ಲಿ, ಚಾಮುಂಡಿ ಎಂದೂ ಪರಿಚಿತವಾಗಿರುವ ಹಿಂದೂ ದೇವಿಮಾತೆಯಾದ ದೇವಿಯ ಭಯಾನಕ ರೂಪ ಮತ್ತು ಸಪ್ತ ಮಾತೃಕೆಯರ ಪೈಕಿ ಒಬ್ಬಳು. ಅವಳು ಯೋಧೆ ದುರ್ಗಾ ದೇವಿಯ ಪರಿಚಾರಕಿಯರಾದ ಅರವತ್ತ ನಾಲ್ಕು ಅಥವಾ ಎಂಬತ್ತೊಂದು ತಾಂತ್ರಿಕ ದೇವತೆಗಳಾದ, ಮುಖ್ಯ ಯೋಗಿನಿಗಳ ಪೈಕಿ ಕೂಡ ಒಬ್ಬಳು. ಈ ಹೆಸರು ಚಾಮುಂಡಿಯು ಕೊಂದ ಇಬ್ಬರು ಅಸುರರಾದ ಚಂಡ ಮತ್ತು ಮುಂಡರ ಸಂಯೋಗವಾಗಿದೆ.

ಈಕೆಯು ಮೈಸೂರಿನ ಅಧಿದೇವತೆ, ಸಪ್ತಮಾತೃಕೆಯರಲ್ಲಿ ಏಳನೆಯವಳು. ಹಿಂದೂ ಧರ್ಮದಲ್ಲಿ, ಚಾಮುಂಡೇಶ್ವರಿ ಪ್ರಬಲವಾದ ದೇವತೆ. “ಚಾಮುಂಡಿ” ಎಂದೊಡನೆ ಈಕೆ ಶಿಷ್ಟ ಪುರಾಣದ ವಿಶಿಷ್ಟ ಶಕ್ತಿದೇವತೆ. ಆದಿಶಕ್ತಿಯಾಗಿ ಹುಟ್ಟಿ ದುಷ್ಟ ಶಿಕ್ಷಕಿ-ಶಿಷ್ಟರಕ್ಷಕಿಯಾಗಿ ಮಹಿಷೂರಿನ ಮಹಿಷನನ್ನು ಕೊಂದು, ಲೋಕ ಕಂಟಕರಾಗಿದ್ದ ಚಂಡ-ಮುಂಡರೆಂಬ ರಕ್ಕಸರನ್ನು ಸಂಹರಿಸಿ ‘ಚಾಮುಂಡಿ’ಯಾಗಿದ್ದಾಳೆಂಬುದು ತಿಳಿಯುತ್ತದೆ.
ಈಕೆ- ಷೋಡಶಿ, ಅಂಬೆ, ಈಶ್ವರಿ, ಚಂಡಿ, ಕಾಳಿ, ಭಗವತೀ, ಮಹೇಶ್ವರಿ, ಮಹಾದೇವಿ, ತ್ರಿಪುರ ಸುಂದರಿ, ದುರ್ಗೆ ಮುಂತಾದ ಹಲವು ಹೆಸರುಗಳಿಂದ ಕರೆಯಲ್ಪಡುತ್ತಾಳೆ. ಚಾಮುಂಡಿ ಮಹಿಷಮಂಡಲವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡು ಮಹಾಬಲಗಿರಿಯ ಮೇಲೆ ನೆಲೆಗೊಂಡಿ ದ್ದಾಳೆ. ಚಾಮುಂಡಿ ಬೆಟ್ಟವು ಸಮುದ್ರಮಟ್ಟಕ್ಕಿಂತ ಸುಮಾರು-೩೪೮೯ಅಡಿ ಎತ್ತರದಲ್ಲಿದೆ.

ಮೈಸೂರಿನ ದೊಡ್ಡದೇವರಾಜ ಒಡೆಯರ್ ಅವರು ಬೆಟ್ಟವನ್ನೇರಲು ಬರುವ ಭಕ್ತಾದಿಗಳಿಗೆ ಅನುಕೂಲ ವಾಗಲೆಂದು ೧೧೦೧ ಮೆಟ್ಟಿಲುಗಳನ್ನು ಕಟ್ಟಿಸಿ, ೭೦೦ನೇ ಮೆಟ್ಟಿಲ ಬಳಿ ಬೃಹತ್ ನಂದಿ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಆಶ್ವಯುಜ ಶುಕ್ಲಪಕ್ಷದ ನವರಾತ್ರಿಯ ಸಮಯದಲ್ಲಿ ಭಾರತಾದಾದ್ಯಂತ ಚಾಮುಂಡಿ ಆರಾಧನೆ “ದುರ್ಗೆ”ಯ ಹೆಸರಿನಲ್ಲಿ ಬಹಳ ವೈಭವಯುತವಾಗಿ ನಡೆಯುತ್ತದೆ.
ನವರಾತ್ರಿ ದಿನಗಳಲ್ಲಿ ಅಷ್ಟಲಕ್ಷ್ಮೀಯರ, ಅಷ್ಟದುರ್ಗೆಯರ ಆರಾಧನೆಯನ್ನು ಚಾಮುಂಡಿ ಬೆಟ್ಟದಲ್ಲಿರುವ ದೇಗುಲದಲ್ಲಿ ಮಾಡಲಾಗುತ್ತದೆ. ನವ ದಿನವು ದೇವಿಗೆ ವಿಶಿಷ್ಟವಾದ ಅಲಂಕಾರಗಳನ್ನು, ಉಡುಗೆ-ತೊಡುಗೆ, ಆಭರಣಗಳಿಂದ ಚಾಮುಂಡೇಶ್ವರಿಯನ್ನು ಸಿಂಗರಿಸಿ ಭಕ್ತವೃಂದಕ್ಕೆ ಸಂತಸವನ್ನು ನೀಡುತ್ತಾರೆ.

ಚಾಮುಂಡೇಶ್ವರಿ ಬೆಟ್ಟದ ಮೇಲೆ ನೆಲೆಯಾದ ಕಥೆ
ಮಹಿಷಾಸುರನ ಸಂಹಾರ

ಪುರಾಣವೊಂದರ ಪ್ರಕಾರ-ಬ್ರಹ್ಮನ ವರಬಲದಿಂದ ಮದೋನ್ಮತ್ತನಾಗಿದ್ದ “ಮಹಿಷಾಸುರ”ನ ಸಂಹಾರ ಮಾಡಲು, ದೇವತೆಗಳೆಲ್ಲ ತಮ್ಮ ಶರೀರದ ಒಂದೊಂದು ಅಂಶವನ್ನು ತೆಗೆದು ಆದಿಶಕ್ತಿಯನ್ನು ಸೃಷ್ಟಿ ಮಾಡಿ, ಮಹಿಷನ ಮೇಲೆ ಯುದ್ದಕ್ಕೆ ಕಳುಹಿಸಿ ಅವನನ್ನು ಸಂಹಾರ ಮಾಡಲು ನೆರವಾಗುತ್ತಾರೆ.
ಹತ್ತು ದಿನಗಳಲ್ಲಿ ಸಪ್ತಮಾತೃಕೆಯರ ನೆರವಿನಿಂದ ಮಹಿಷನನ್ನು ಶಕ್ತಿ ಮತ್ತು ಯುಕ್ತಿಯಿಂದ ಕೊಲ್ಲುತ್ತಾಳೆ. ಆದುದರಿಂದಲೇ ಹತ್ತನೇಯ ದಿನ ವಿಜಯದಶಮಿಯನ್ನು ಆಚರಿಸುವುದು ರೂಢಿಯಾಗಿದೆ.
ಮಹಿಷನನ್ನು ಕೊಂದ ನಂತರ ಚಾಮುಂಡಿ ಯುದ್ದದಿಂದಾದ ಶರೀರದ ಆಯಾಸವನ್ನು ನೀಗಿಸಿ ಕೊಳ್ಳಲು, ನಂಜನಗೂಡಿನ ಕಪಿಲಾ ನದಿ ತಟಕ್ಕೆ ಬಂದು, ಮಧ್ಯರಾತ್ರಿಯಲ್ಲಿ ಸ್ನಾನ ಮಾಡಿ, ತನ್ನ ತಲೆಗೂದಲನ್ನು ಹರವಿ ಒಣಗಿಸುತ್ತಾ ಇರಬೇಕಾದರೆ, ರಾತ್ರಿ ಸಂಚಾರಕ್ಕೆ ಬಂದ ಶಿವನಂಜುಂಡೇಶ್ವರ, ಈಕೆಯಲ್ಲಿ ಅನುರಕ್ತನಾಗುತ್ತಾನೆ. ಶಿವನಿಗೆ ವಿವಾಹವಾಗಿರುವುದರ ಅರಿವಿರದ ಚಾಮುಂಡಿ ತಾನೂ ಕೂಡ ಶಿವನಲ್ಲಿ ಅನುರಕ್ತಳಾಗುತ್ತಾಳೆ. ತದ ನಂತರ ಈ ಸುದ್ದಿ ಶಿವನ ಧರ್ಮಪತ್ನಿಯಾದ ಪಾರ್ವತಿಗೆ ಗೊತ್ತಾಗಿ ಅವಳು ಚಾಮುಂಡಿಯೊಂದಿಗೆ ಜಗಳವಾಡುತ್ತಾಳೆ. ಚಾಮುಂಡಿ-ಗೌರಿಯರ ಜಗಳ ಜನಪದ ಸಾಹಿತ್ಯದಲ್ಲಿ ನಿಚ್ಚಳವಾಗಿ ದಾಖಲಾಗಿದೆ. ಪಾರ್ವತಿಯ ಮಾತಿನಿಂದ ಮುಖಭಂಗಗೊಂಡ ಚಾಮುಂಡಿ ಮೈಸೂರಿಗೆ ಬರುವ ಹಾದಿಯಲ್ಲಿ ಆಕಸ್ಮಿಕವಾಗಿ ಸುತ್ತೂರಿನೆಡೆಗೆ ಸಾಗುತ್ತಿದ್ದ ಮಹದೇಶ್ವರನ ಬಳಿ ಹೋಗಿ ಪ್ರೇಮಭಿಕ್ಷೆ ಬೇಡುತ್ತಾಳೆ.
ಇದರಿಂದ ಕಂಗಾಲಾದಮಹದೇಶ್ವರ ಏನೊಂದು ಮಾತನಾಡದೆ ಚಾಮುಂಡಿಯಿಂದ ತಪ್ಪಿಸಿಕೊಳ್ಳಲು ಬಿರ ಬಿರನೆ ನಡೆದು ಹೋಗುತ್ತಾನೆ. ಪಟ್ಟು ಬಿಡದ ಚಾಮುಂಡಿಯು ಆತನನ್ನು ಹಿಂಬಾಲಿಸಿದಾಗ, ಮಹದೇಶ್ವರ ಆಕೆಯಿಂದ ತಪ್ಪಿಸಿಕೊಳ್ಳಲು ಎಪ್ಪತ್ತೇಳು ಮಲೆಯಲ್ಲಿ ನೆಲೆಸಿದನಂತೆ. ನಂತರ ಚಾಮುಂಡಿ ಬೆಟ್ಟದ ಮೇಲೆ ನೆಲೆಸಿದಳಂತೆ. ಇವಳನ್ನು ಸಿಂಹವಾಹಿನಿಯೆಂದು ಪುರಾಣಗಳಲ್ಲಿ ಬಣ್ಣಿಸಲಾಗಿದೆ.

ಜನಪದ ಕಥೆಯ ಪ್ರಕಾರ ಚಾಮುಂಡಿ ಉಜ್ಜಯಿನಿ ದೇಶದ ಬಿಜ್ಜಳರಾಯನ ಕಿರಿಯ ಮಗಳು. ಚಾಮುಂಡಿಯ ಅಕ್ಕ ಉರಿಮಸಣಿ ಸೇರಿದಂತೆ ಒಟ್ಟು ಏಳುಜನ ಅಕ್ಕ-ತಂಗಿಯರು. ಇವರು ಕಾರಣಾಂತರಗಳಿಂದ ಪರಸ್ಪರ ಜಗಳ ಕಾದು, ಮನೆಬಿಟ್ಟು ಪರಿತ್ಯಕ್ತೆಯರಾಗುತ್ತಾರೆ. ಇವರೆಲ್ಲ ಉತ್ತರ ಪ್ರದೇಶದಿಂದ ಹೊರಟು, ದಕ್ಷಿಣ ಪ್ರಾಂತ್ಯದ ಭಿನ್ನ ಭಿನ್ನ ಸ್ಥಳಗಳಲ್ಲಿ ನೆಲೆ ಕಂಡು ಕೊಳ್ಳುತ್ತಾರೆ. ಚಾಮುಂಡಿಯ ಹಿನ್ನೆಲೆಗೆ ಸಂಬಂಧಿಸಿದಂತೆ ಹಲವಾರು ಪಾಠಾಂತರಗಳು ಇರುವುದನ್ನು ಕಾಣಬಹುದಾಗಿದೆ.

ಚಾಮುಂಡೇಶ್ವರಿ ಬೆಟ್ಟದ ಮೇಲೆ ನೆಲೆಯಾದ ಕಥೆ
ಚಾಮುಂಡೇಶ್ವರಿ

ಮತ್ತೊಂದು ಕಥೆಯ ಪ್ರಕಾರ ಚಾಮುಂಡಿ ಚಾಮರಾಯನ ಮಗಳು. ಈಕೆಗೆ ಕಿಚುಕುಚು ಮಾರಿ ಎಂಬ ಸೋದರಿ, ಮಹದೇಶ್ವರ ಮತ್ತು ಬ್ರಹ್ಮೇಶ್ವರ ಎಂಬ ಸೋದರರಿರುತ್ತಾರೆ. ಅನ್ಯ ಕಾರಣ ನಿಮಿತ್ತ ಈ ನಾಲ್ವರು ಮನೆ ಬಿಟ್ಟು ಹೊರಬರುವಾಗ, ಮಾರ್ಟಳ್ಳಿಯ ಹತ್ತಿರವಿರುವ ಸುಳ್ವಾಡಿ ಎಂಬ ಊರಲ್ಲಿ ಲಂಬಾಣಿ ಜನಾಂಗದವರು ಮಾಂಸದಡುಗೆ ಮಾಡುತ್ತಿರುವುದನ್ನು ಕಂಡ ಕಿಚುಕುಚು ಮಾರಿಯ ಬಾಯಲ್ಲಿ ನೀರೂರಿ ಬಿಡುತ್ತದೆ. ಆಗ ಆಕೆ ತನ್ನ ಅಕ್ಕ ಮತ್ತು ಅಣ್ಣಂದಿರಿಗೆ ತಾನಿಲ್ಲೆ ಉಳಿಯುವುದಾಗಿ ಹೇಳುತ್ತಾಳೆ. ಅದಕ್ಕವರು ಸಮ್ಮತಿಸುತ್ತಾರೆ. ಸುಮಾರು ಒಂದು ಮೈಲಿ ದೂರ ಬಂದಾಗ ಮಹದೇಶ್ವರ, ತಮ್ಮನಾದ ಬ್ರಹ್ಮೇಶ್ವರನಿಗೆ ನೀನು ತಂಗಿಯ ರಕ್ಷಣೆಗಾಗಿ ಇಲ್ಲೇ ಉಳಿವಂತೆ ಆದೇಶಿಸುತ್ತಾನೆ. ನಂತರ ತಾನು ಮಹದೇಶ್ವರ ಬೆಟ್ಟದೆಡೆಗೆ ಸಾಗಿ ಏಳುಮಲೆಯಲ್ಲಿ ನೆಲೆಸುತ್ತಾನೆ. ಚಾಮುಂಡಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ರಕ್ಷಣಾ ದೇವತೆಯಾಗಿ ನೆಲೆ ನಿಲ್ಲುತ್ತಾಳೆ.

ಮೈಸೂರಿನ ಚರಿತ್ರೆಯ ಪ್ರಕಾರ ಈಕೆ ಐತಿಹಾಸಿಕ ವೀರವನಿತೆ. ಅಪಾರ ಧೈರ್ಯಶಾಲಿನಿ. ಮೈಸೂರು ಒಡೆಯರ ಕುಲದೇವತೆ, ರಕ್ಷಣಾದೇವತೆ, ಅಧಿದೇವತೆಯಾಗಿದ್ದಾಳೆ. ಈಕೆಯ ಕಾಲ ಸುಮಾರು-೧೬ನೇ ಶತಮಾನವೆಂದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. ಮಹಿಷ ಮಂಡಲ/ಮಹಾಬಲ ಬೆಟ್ಟ/ ಚಾಮುಂಡಿಬೆಟ್ಟವಾಗಲು ಹಲವು ಕಾಲಾಂತರಗಳಾಗಿವೆ.ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ಯದು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ ದೇವಸ್ಥಾನ ಸೇರಿದಂತೆ ನಗರದಲ್ಲಿ ನಿರ್ಮಿಸಿದ ಸುಂದರ ದೇವಾಲಯಗಳು ಅತ್ಯಂತ ವಿಸ್ತೃತವಾಗಿವೆ. ನಂತರ ಬೆಟ್ಟದ ಚಾಮರಾಜ ಒಡೆಯರ್ ಎಂದು ಕರೆಯಲ್ಪಡುವ ಪ್ರಸಿದ್ಧ ರಾಜ ತಮ್ಮ ಆಳ್ವಿಕೆಯಲ್ಲಿ ಕೋಟೆಯನ್ನು, ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿದ್ದರು. ನಂತರ ಮಹಿಷೂರು, ಅಂತಿಮವಾಗಿ ಮೈಸೂರಾಗಿ ಬದಲಾಯಿತು.

ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣವನ್ನು ಮೈಸೂರಿಗೆ ಸ್ಥಳಾಂತರಿಸಲಾಯಿತು. ಹೀಗೆ ರಾಜ ಒಡೆಯರ್ ಆಳ್ವಿಕೆಯಲ್ಲಿ ಮೈಸೂರು ತನ್ನ ವೈಭವವನ್ನು ಮರಳಿ ಪಡೆಯಿತು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

6 Comments

  1. 十字架3

    ゴア カジノ

    ビジュアルとサウンドが迫力満点で、プレイ中に没入感が増します。特に恐怖演出が楽しい。

    八代将军 天国の戦い

    https://www.online-casino.city/?NewsID=919593818.html
    演出が華やかで、視覚的にも楽しめるのが魅力。アートとしての側面もあります。

    沖ドキ! 25

    [url=https://www.xn--k8-9g4a3b4f.store/?WatchID=928164818.html]電王 ジーク
    [/url]
    CR麻雀物語麗しのテンパイ乙女 Ver.297

    CR牙狼闇を照らす者

    黃金守護神(特殊大賞燈);

    黄門ちゃま喝

    https://jahromblog.com/?SitesID=920243818.html
    戦略的な要素もあり、運だけでなく技術が試されるのが面白いです。

    鬼浜爆走紅蓮隊友情挽歌編

    https://www.k8o.jp/?GameID=922940818.html
    明るいデザインと楽しげな演出が魅力。遊んでいるだけで元気が出ます。

    コードギアス反逆のルルーシュ

    https://www.k8.gives/?GameID=922178818.html
    友人と一緒にプレイすることで、楽しさが倍増します。共に喜ぶ瞬間が嬉しい。

  2. Deshalb arbeiten wir mit den hochkarätigsten Anbietern von Online
    Casino-Spielen zusammen, die die Industrie zu bieten hat –
    ohne Ausnahme. LeoVegas offeriert dir auch eine bahnbrechende Live Casino-Reise.
    Legacy of Dead von Play’n GO zum Anderen hat 5 Walzen à 3 Symbole und 10 feste Gewinnlinien, die von links nach rechts verlaufen. So
    hat beispielsweise Sweet Bonanza 6 Walzen à
    5 Symbole, die nach Gewinnen nachrutschen, und obendrein gewinnst du über die Anzahl der angezeigten Gewinnbilder unabhängig von ihrer Position zueinander.
    Es gibt natürlich auch Slots mit mehr als 5 Walzen, diese nutzen oft keine klassische
    Walzenmechanik, sondern setzen eher auf die oben angesprochene
    Mechanik mit nachrutschenden Symbolen. Ein viel-gespielter Vertreter dieser Art ist Reactoonz 2 von Play’n GO.

    Sie können die Spiele bequem von überall aus auf Ihrer Handfläche spielen, da sich das Casino nahtlos in iOS- und Android-Handys integrieren lässt.
    Halten Sie Ausschau nach kommenden Spielen und Freispielen.
    Glücklicherweise können Sie noch heute beitreten, um 100 % bis zu 100 €
    plus 50 Freispiele im Las Vegas Casino-Willkommensbonus zu erhalten. Ja, Sie können in den Online-Casinos in Las Vegas um echtes Geld spielen. Auch hier gilt jedoch, verantwortungsvoll mit
    dem Glücksspiel umzugehen und nur bei seriösen Anbietern zu spielen.
    Glücksspiele gibt es in den unterschiedlichsten Formen und Variationen. Spiele mit nachrutschenden Symbolen oder virtuelle Automatenspiele
    mit MEGAWAYS-Mechanik, die buchstäblich tausende Gewinnwege vorhanden sind.
    So verfügen manche Spielautomaten über lediglich
    3 Walzen, wie zum Beispiel Ultra Hold and Spin, während der Großteil der virtuellen Automatenspiele über 5 Walzen verfügt.
    Das Casino hat massiv in alle Arten von Spielen investiert, darunter Spielautomaten, Tischspiele, Jackpots, Casuals und
    neue Spiele. Konami aus Japan ist für Videospiele bekannt, entwickelt aber auch Glücksspiele und Slots.

    References:
    https://online-spielhallen.de/druckgluck-casino-auszahlung-alles-was-sie-wissen-mussen/

  3. But staffing customer service departments to meet unpredictable demand, day or night,
    is a costly and difficult endeavor. Naturally, timely
    or even urgent customer issues sometimes arise off-hours, over the weekend or during
    a holiday. And if a user is unhappy and needs to speak to a real person,
    the transfer can happen seamlessly. The terms chatbot,
    AI chatbot and virtual agent are often used interchangeably, which can cause confusion. Artificial intelligence can also be a powerful tool for developing conversational marketing strategies.
    Chatbots can handle real-time actions as routine as a
    password change, all the way through a complex multi-step workflow spanning multiple applications.

    Explore a wide range of movies, check movie ticket prices and avail
    exciting movie booking offers. Whether you’re looking to catch the latest blockbuster or an old classic, Ticketnew has got you covered with a wide selection of films available in various languages.
    Say goodbye to long queues and hello to hassle-free movie nights with your loved ones, all
    from the comfort of your own home.

    References:
    https://blackcoin.co/pure-casino-official-site-review/

ಭೈರವಿ ದೇವಿ

ಭೈರವಿ ದೇವಿ

ಕಮಲದ ಹೂವು

ಕಮಲದ ಹೂವು