in

ಹಿಂದೂ ಧರ್ಮದಲ್ಲಿ ಅಡಗಿರುವ ಕೆಲವೊಂದು ವೈಜ್ಞಾನಿಕ ಸತ್ಯಗಳು

ಹಿಂದೂ ಧರ್ಮ
ಹಿಂದೂ ಧರ್ಮ

1. ಬೆಳ್ಳಿ ಕಾಲುಂಗುರ ಹಾಕುವ ವೈಜ್ಞಾನಿಕ ಕಾರಣ

ಹೆಂಗಸರು ಕಾಲುಂಗುರವನ್ನು ಹಾಕುವುದರ ಹಿಂದೆ ವೈಜ್ಞಾನಿಕ ಕಾರಣವು ಸಹ ಇದೆ. ಅದೇನೆಂದರೆ ಸಾಮಾನ್ಯವಾಗಿ ಹೆಂಗಸರು ತಮ್ಮ ಕಾಲಿನ ಎರಡನೆ ಬೆರಳಿಗೆ ಈ ಕಾಲುಂಗುರವನ್ನು ಹಾಕಿಕೊಳ್ಳುತ್ತಾರೆ. ಇದರಲ್ಲಿರುವ ನರವು ನೇರವಾಗಿ ಗರ್ಭಾಶಯ ಮತ್ತು ಹೃದಯವನ್ನು ಸಂಪರ್ಕಿಸುತ್ತದೆ. ಇದಕ್ಕೆ ಕಾಲುಂಗುರವನ್ನು ಹಾಕಿಕೊಳ್ಳುವುದರಿಂದ ಗರ್ಭಾಶಯವು ಸದೃಢಗೊಳ್ಳುತ್ತದೆ. ಇದರಿಂದ ಗರ್ಭಕೋಶಕ್ಕೆನಿರಂತರವಾಗಿ ರಕ್ತ ಪೂರೈಕೆಯು ಸರಾಗವಾಗಿ ಸಾಗುತ್ತದೆ ಮತ್ತು ಋತು ಚಕ್ರವು ಯಾವುದೇ ದೋಷಗಳಿಲ್ಲದೆ ನಡೆಯುತ್ತದೆ. ಬೆಳ್ಳಿಯು ಅತ್ಯುತ್ತಮವಾದ ವಾಹಕವಾಗಿದ್ದು, ಇದು ಭೂಮಿಯಲ್ಲಿನ ಧೃವೀಯ ಶಕ್ತಿಗಳನ್ನು ಎಳೆದುಕೊಂಡು ಅದನ್ನು ದೇಹಕ್ಕೆ ರವಾನಿಸುತ್ತದೆ.

2. ಉತ್ತರಕ್ಕೆ ತಲೆ ಇಟ್ಟುಮಲಗಬಾರದು

ಉತ್ತರಕ್ಕೆ ತಲೆ ಇಟ್ಟು ಮಲಗುವುದರಿಂದ ವಿಜ್ಞಾನವು ಹೇಳುವುದೇನೆಂದರೆ ಮಾನವ ದೇಹಕ್ಕೆ ತನ್ನದೇ ಆದ ಕಾಂತ ಕ್ಷೇತ್ರವು ಇರುತ್ತದೆ. ಇದನ್ನು ಹೃದಯದ ಕಾಂತ ಅಥವಾ ಮ್ಯಾಗ್ನೆಟಿಕ್ ಕ್ಷೇತ್ರ ಎಂದು ಸಹ ಕರೆಯುತ್ತಾರೆ. ಏಕೆಂದರೆರಕ್ತ ಪರಿಚಲನೆಯ ಕಾರಣವಾಗಿ ಮತ್ತು ಭೂಮಿಯೇ ಒಂದು ದೊಡ್ಡ ಸೂಜಿಗಲ್ಲು ಅಥವಾ ಮ್ಯಾಗ್ನೆಟ್. ಯಾವಾಗ ನಾವು ಉತ್ತರಕ್ಕೆ ತಲೆ ಇಟ್ಟು ಮಲಗುತ್ತೇವೆಯೋ, ಆಗ ನಮ್ಮ ದೇಹದಲ್ಲಿನ ಕಾಂತ ಕ್ಷೇತ್ರವು ಸಮತೋಲನವನ್ನು ಕಳೆದುಕೊಳ್ಳುತ್ತದೆ. ಇದರಿಂದ ಮುಂದೆ ರಕ್ತದ ಒತ್ತಡ ಮತ್ತು ಹೃದ್ರೋಗದಂತಹ ಸಮಸ್ಯೆಗಳು ಕಂಡು ಬರುತ್ತವೆ. ಆದ್ದರಿಂದ ಈ ಕಾಂತ ಕ್ಷೇತ್ರದ ಸಮತೋಲವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ. ಇದರ ಜೊತೆಗೆ ನಮ್ಮ ದೇಹದಲ್ಲಿ ಹರಿಯುವ ರಕ್ತದಲ್ಲಿ ಕಬ್ಬಿಣಾಂಶವಿರುತ್ತದೆ. ನಾವು ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಆ ಕಾಂತ ಕ್ಷೇತ್ರದಿಂದ ಆಕರ್ಷಣೆಯಾಗುವ ನಮ್ಮ ದೇಹದ ಕಬ್ಬಿಣಾಂಶವು ತಲೆಯಲ್ಲಿ ಶೇಖರಗೊಳ್ಳುತ್ತದೆ. ಇದರಿಂದ ತಲೆನೋವುl, ಅಲ್ಜೀಮರ್ ಕಾಯಿಲೆ, ಪ್ರಜ್ಞಾಶೂನ್ಯತೆ ಅರಿವಿನ ಕೊರತೆ, ಪಾರ್ಕಿನ್ಸನ್ ಕಾಯಿಲೆ ಮತ್ತು ಮೆದುಳಿನ ಕಾರ್ಯ ಕ್ಷೀಣಿಸುವ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

3. ತುಳಸಿ ಗಿಡಗಳನ್ನು ಪೂಜಿಸುವುದು

ಹಿಂದೂ ಧರ್ಮವು “ತುಳಸಿ” ಗಿಡಕ್ಕೆ ಮಾತೃ ಸ್ಥಾನವನ್ನು ನೀಡಿ ಗೌರವಿಸಿದೆ. ” ಪವಿತ್ರ ತುಳಸಿ” ಎಂದು ಸಹ ಕರೆಯಲ್ಪಡುವ ತುಳಸಿಯು ಭಾರತದಲ್ಲಿಯಷ್ಟೇ ಅಲ್ಲದೆ ಪ್ರಪಂಚದ ಇತರ ಭಾಗಗಳಲ್ಲು ಸಹ ಪೂಜ್ಯನೀಯ ಸ್ಥಾನವನ್ನು ಪಡೆದು, ಧಾರ್ಮಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಪರಿಗಣಿಸಲ್ಪಡುತ್ತಿದೆ. ವೇದ ಕಾಲದ ಋಷಿ ಮುನಿಗಳಿಗೆ ಇದರ ಪ್ರಯೋಜನಗಳು ಚೆನ್ನಾಗಿ ತಿಳಿದಿದ್ದವು. ಆದ್ದರಿಂದಲೇ ಅವರು ಇದಕ್ಕೆ ಮಾತೃ ಸ್ಥಾನವನ್ನು ನೀಡಿ, ಪ್ರತಿಯೊಬ್ಬರ ಮನೆಯಲ್ಲಿ ಇದನ್ನು ಬೆಳೆಯಬೇಕೆಂಬ ಸಂದೇಶವನ್ನು ರವಾನಿಸಿದರು. ಹೀಗಾಗಿ ಇಂದು ಅಕ್ಷರಸ್ಥರು ಮತ್ತು ಅನಕ್ಷರಸ್ಥರು ಎಂಬ ಬೇಧ ಭಾವವಿಲ್ಲದೆ ಎಲ್ಲರ ಮನೆಯಲ್ಲೂ ತುಳಸಿಯನ್ನು ನಾವು ಕಾಣಬಹುದು. ಇದೊಂದು ಅದ್ಭುತವಾದ ಆಂಟಿ ಬಯೋಟಿಕ್. ಪ್ರತಿದಿನಚಹಾ ಜೊತೆಗೆ ತುಳಸಿಯನ್ನು ಸೇವಿಸುವುದರಿಂದ ರೋಗ ನಿರೋಧಕಶಕ್ತಿಯು ಹೆಚ್ಚಾಗುತ್ತದೆ ಹಾಗು ಕುಡಿಯುವವರಿಗೆ ರೋಗಗಳು ಕಾಡುವ ಅಪಾಯವಿರುವುದಿಲ್ಲ. ಆತನ ಆರೋಗ್ಯ ಸ್ಥಿತಿ ಸಮತೋಲನದಲ್ಲಿರುವುದರ ಜೊತೆಗೆ, ಆತನ ಆಯುಸ್ಸು ಸಹ ಹೆಚ್ಚಾಗುತ್ತದೆ. ತುಳಸಿ ಸಸ್ಯಗಳನ್ನು ಮನೆಯಲ್ಲಿ ಇರಿಸಿಕೊಳ್ಳುವುದರಿಂದ ಮನೆಯೊಳಗೆ ಸೊಳ್ಳೆ ಮುಂತಾದ ಕೀಟಗಳು ಪ್ರವೇಶಿಸುವುದನ್ನು ತಡೆಗಟ್ಟಬಹುದು. ನಂಬಿಕೆಗಳ ಪ್ರಕಾರ ಹಾವುಗಳು ಸಹ ತುಳಸಿ ಗಿಡದ ಬಳಿಗೆ ಹೋಗುವ ಧೈರ್ಯವನ್ನುಮಾಡುವುದಿಲ್ಲವಂತೆ. ಬಹುಶಃ ಅದಕ್ಕೆ ಇರಬೇಕು ಪ್ರಾಚೀನ ಕಾಲದ ಜನರು ತುಳಸಿಯನ್ನು ತಮ್ಮ ಮನೆಯ ಸಮೀಪದಲ್ಲಿ ಬೆಳೆಸುತ್ತಿದ್ದುದು.

ಹಿಂದೂ ಧರ್ಮದಲ್ಲಿ ಅಡಗಿರುವ ಕೆಲವೊಂದು ವೈಜ್ಞಾನಿಕ ಸತ್ಯಗಳು
ತುಳಸಿ ಗಿಡಗಳನ್ನು ಪೂಜಿಸುವುದು

4. ಕೈಗಳಿಗೆ ಮೆಹಂದಿ ಹಚ್ಚಿಕೊಳ್ಳುವುದು

ಕೈಗಳಿಗೆ ಅಲಂಕಾರವನ್ನು ನೀಡುವುದರ ಜೊತೆಗೆ ಮೆಹಂದಿಯು ತನ್ನಲ್ಲಿರುವ ಔಷಧೀಯ ಗುಣಗಳಿಂದಖ್ಯಾತಿ ಪಡೆದಿದೆ. ಮದುವೆಯು ಅತ್ಯಂತ ಒತ್ತಡಕಾರಿಯಾಗಿರುವ ಸಂಗತಿ ಎಲ್ಲರಿಗು ತಿಳಿದ ವಿಚಾರವೇ. ಈ ಒತ್ತಡವು ತಲೆನೋವು ಮತ್ತು ಜ್ವರವನ್ನು ತರಬಹುದು. ಆದ್ದರಿಂದ ಮದುವೆ ದಿನ ಹತ್ತಿರ ಬಂದಾಗ ವಧುವಿಗೆ ಮೆಹಂದಿಯನ್ನು ಹಚ್ಚುತ್ತಾರೆ. ಇದರಿಂದ ವಧುವಿಗೆ ಒತ್ತಡವು ಕಡಿಮೆಯಾಗುತ್ತದೆ ಮತ್ತು ಆಕೆಯ ದೇಹಕ್ಕೆ ಇದು ತಂಪನ್ನು ನೀಡಿ, ನರಗಳು ಒತ್ತಡಕ್ಕೆ ಒಳಗಾಗುವುದನ್ನು ತಡೆಯುತ್ತದೆ. ಆದ್ದರಿಂದಲೇ ಮೆಹಂದಿಯನ್ನು ನರಗಳು ಕೊನೆಗೊಳ್ಳುವ ಭಾಗದಲ್ಲಿ ಅಂದರೆ, ಅಂಗೈ ಮತ್ತು ಅಂಗಾಲುಗಳಿಗೆ ಹಚ್ಚುತ್ತಾರೆ.

5. ಹಣೆಗೆ ತಿಲಕ ಹಚ್ಚುವುದು

ಪುರಾತನ ಕಾಲದಿಂದಲು ಹಣೆಯ ಮೇಲೆ ಎರಡು ಹುಬ್ಬುಗಳ ನಡುವಿನ ಭಾಗದಲ್ಲಿ ನೆಲೆಸಿರುವ ಸ್ಥಳವನ್ನು ಮಾನವ ದೇಹದ ಪ್ರಧಾನ ನರಕೇಂದ್ರವೆಂದು ಪರಿಗಣಿಸಲಾಗಿದೆ. ತಿಲಕವು ದೇಹದಲ್ಲಿನ ಶಕ್ತಿಯು ಪೋಲಾಗುವುದುನ್ನು ತಡೆಯುತ್ತದೆ. ಎರಡುಹುಬ್ಬುಗಳ ನಡುವೆ ಇಡುವ ಕೆಂಪು “ಕುಂಕುಮ”ವು ದೇಹದಲ್ಲಿನ ಶಕ್ತಿಯನ್ನು ಮರು ಸಂಚಯಗೊಳಿಸುತ್ತದೆ ಮತ್ತು ಏಕಾಗ್ರತೆಯ ವಿವಿಧ ಘಟ್ಟಗಳನ್ನು ನಿಯಂತ್ರಿಸುತ್ತದೆ.

6. ಚರಣ ಸ್ಪರ್ಶದ ಹಿಂದಿನ ವೈಜ್ಞಾನಿಕ ಕಾರಣ

ಸಾಮಾನ್ಯವಾಗಿ ನಾವು ಚರಣ ಸ್ಪರ್ಶಮಾಡುವ ವ್ಯಕ್ತಿಯು ನಮಗಿಂತ ವಯಸ್ಸಾದವರು ಅಥವಾ ಧಾರ್ಮಿಕ ಹಿನ್ನಲೆಯ ವ್ಯಕ್ತಿಗಳು ಆಗಿರುತ್ತಾರೆ. ಯಾವಾಗ ಅವರು ನಿಮ್ಮ ನಮಸ್ಕಾರವನ್ನು ಸ್ವೀಕರಿಸುತ್ತಾರೋ, ಈ ಕ್ರಿಯೆಯು ನಿಮ್ಮ ಅಹಂ ಅನ್ನು ದಾಟಿಕೊಂಡು ಬಂದಿರುತ್ತದೆ . ನಿಮ್ಮ ಚರಣ ಸ್ಪರ್ಶವನ್ನು ಸ್ವೀಕರಿಸುವ ಅವರ ಹೃದಯವು ಧನಾತ್ಮಕ ಆಲೋಚನೆಗಳಿಂದ ಮತ್ತು ಶಕ್ತಿಯಿಂದ ನಿಮ್ಮನ್ನು ಹರಸುತ್ತದೆ. ಇದು ನಿಮ್ಮನ್ನು ಅವರ ಕೈ ಮತ್ತು ಕಾಲ್ಬೆರಳುಗಳ ಮೂಲಕ ತಲುಪುತ್ತದೆ. ಈ ಒಂದು ಪ್ರಕ್ರಿಯೆಯು ಆ ಸ್ಥಳದಲ್ಲಿ ಶಕ್ತಿ ಸಂಚಯವನ್ನು ಹೆಚ್ಚಿಸುತ್ತದೆ ಮತ್ತು ಲೌಕಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗು ಎರಡು ಮನಸ್ಸು, ಹೃದಯಗಳನ್ನು ಬೆಸೆಯುತ್ತದೆ. ಇದೇ ಕ್ರಿಯೆಯನ್ನು ಹಸ್ತ ಲಾಘವ ಮಾಡುವ ಮೂಲಕ ಹಾಗು ಅಪ್ಪಿಕೊಳ್ಳುವ ಮೂಲಕ ಸಹ ಮಾಡಬಹುದು. ಮೆದುಳಿನಿಂದ ಆರಂಭವಾಗುವ ನರಗಳು ನಿಮ್ಮ ಇಡೀ ದೇಹದ ತುಂಬಾ ಹರಡಿಕೊಂಡಿರುತ್ತವೆ. ಈ ನರಗಳು ಕೈಬೆರಳು ಮತ್ತು ಕಾಲು ಬೆರಳುಗಳಲ್ಲಿ ಅಂತ್ಯವಾಗಿರುತ್ತದೆ. ಯಾವಾಗ ಕೈಬೆರುಳಿನ ತುದಿಯನ್ನು ಇತರರ ಪಾದದ ಮೇಲೆ ಸ್ಪರ್ಶಿಸುತ್ತೀರೋ, ಆಗ ಎರಡು ದೇಹದ ನಡುವೆ ಒಂದು ಬಗೆಯ ವಿದ್ಯುತ್ಪ್ರವಾಹವು ಹರಿಯುತ್ತದೆ. ಆಗ ಬೆರಳು ಮತ್ತು ಹಸ್ತಗಳು ಈ ವಿದ್ಯುತ್ ಶಕ್ತಿಯ ” ಧಾರಕಗಳಾಗಿ” ಕಾರ್ಯನಿರ್ವಹಿಸುತ್ತವೆ. ಚರಣ ಸ್ಪರ್ಶಕ್ಕೆ ಒಳಗಾಗುವ ವ್ಯಕ್ತಿಯ ಕಾಲುಗಳು ಆಗ ಶಕ್ತಿಯನ್ನು ” ನೀಡುವ” ಅಂಶವಾಗಿ ಗುರುತಿಸಲ್ಪಡುತ್ತದೆ.

7. ದೇವಾಲಯಗಳಲ್ಲಿ ಘಂಟೆಗಳು ಇರುವ ಕಾರಣ

ದೇವಾಲಯಗಳಿಗೆ ಭೇಟಿ ನೀಡಿದಾಗ ಗರ್ಭಗುಡಿಯನ್ನು ಪ್ರವೇಶಿಸುವ ಮೊದಲು ಘಂಟೆಯನ್ನು ಬಾರಿಸುತ್ತಾರೆ. ಕಾರಣವೇನೆಂದರೆ ಶಾಸ್ತ್ರದ ಪ್ರಕಾರ ಘಂಟೆಯ ಸದ್ದು ಎಲ್ಲಾ ರೀತಿಯ ದುಷ್ಟ ಶಕ್ತಿಗಳಿಂದ ನಮ್ಮನ್ನು ಕಾಪಾಡುತ್ತದೆಯಂತೆ. ಜೊತೆಗೆ ಇದು ದೇವರಿಗೆ ಅಪ್ಯಾಯಮಾನಕರವಾದ ಸದ್ದಾಗಿರುತ್ತದೆ. ವೈಜ್ಞಾನಿಕವಾಗಿ ಇದನ್ನು ವಿವರಿಸಬೇಕೆಂದರೆ ಇದು ನಮ್ಮ ಏಕಾಗ್ರತೆಯನ್ನು ದೇವರ ಕ್ರಿಯೆಯಲ್ಲಿ ತಲ್ಲೀನಗೊಳ್ಳುವಂತೆ ಮಾಡುತ್ತದೆ. ಈ ಘಂಟೆಯನ್ನು ಯಾವ ಪ್ರಕಾರ ಮಾಡಿರುತ್ತಾರೆ ಎಂದರೆ ಇದು ನಮ್ಮ ಬಲ ಮತ್ತು ಎಡ ಮೆದುಳಿನ ನಡುವೆ ಅನ್ಯೋನ್ಯತೆಯನ್ನು ತರಲು ಸಾಧ್ಯವಾಗುತ್ತದೆ. ನಾವು ಯಾವಾಗ ಘಂಟೆಯನ್ನು ಹೊಡೆಯುತ್ತೇವೆಯೋ, ಆಗ ಅದು ಕನಿಷ್ಟ 7 ಸೆಕೆಂಡ್ಗಳ ಕಾಲಪ್ರತಿ ಧ್ವನಿಸುತ್ತದೆ.

8. ನೆಲದ ಮೇಲೆ ಕುಳಿತು ಊಟಮಾಡುವುದು

ಹಿಂದೂ ಧರ್ಮದಲ್ಲಿ ಅಡಗಿರುವ ಕೆಲವೊಂದು ವೈಜ್ಞಾನಿಕ ಸತ್ಯಗಳು
ನೆಲದ ಮೇಲೆ ಕುಳಿತು ಊಟಮಾಡುವುದು

ನೆಲದ ಮೇಲೆ ಕುಳಿತು ಊಟ ಮಾಡುವುದು ಕೇವಲ ಸಂಪ್ರದಾಯವಷ್ಟೇ ಅಲ್ಲ. ಅದು ಯೋಗ ಸಾಧನೆಯ ಒಂದು ಆಸನವೆನ್ನುವುದು ಬಹುತೇಕ ಮಂದಿಗೆ ತಿಳಿದಿಲ್ಲ. ಯೋಗದಲ್ಲಿ ಸುಖಾಸನ ಎಂಬ ಒಂದು ಆಸನವಿದೆ. ಹೆಸರೇ ಹೇಳುವಂತೆ ಇದು ಸುಖವಾಗಿ ಅಂದರೆ ಯಾವುದೇ ನೋವಿಲ್ಲದೆ ಕೂರಬಹುದಾದ ಆಸನ. ಈ ಆಸನದಲ್ಲಿ ಕೂರುವುದರಿಂದ ರಕ್ತ ಪರಿಚಲನೆಯು ಯಾವುದೇ ಅಡೆತಡೆಗಳಿಲ್ಲದೆ ನಡೆದು, ಜೀರ್ಣಾಂಗ ವ್ಯೂಹವು ಸರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದನ್ನೇ ನಾವು ಕುರ್ಚಿಯ ಮೇಲೆ ಕುಳಿತು ಅಥವಾ ನಿಂತು ಊಟ ಮಾಡುವುದರಿಂದ ನಮಗೆ ಈ ಪ್ರಯೋಜನಗಳು ಸಿಗುವುದಿಲ್ಲ.

9. ಅರಳಿ ಮರವನ್ನು ಪೂಜಿಸುವುದು

“ಅರಳಿ ಮರ” ಅಥವಾ “ಅಶ್ವತ್ಥ ವೃಕ್ಷ” ಎಂದು ಕರೆಯಲ್ಪಡುವ ಮರವನ್ನು ನಾವು ಸಾಮಾನ್ಯವಾಗಿ ಎಲ್ಲಾ ಊರುಗಳ ನಾಗರ ಕಟ್ಟೆ, ಅಶ್ವತ್ಥ ಕಟ್ಟೆ,ದೇವಾಲಯಗಳ ಬಳಿಯಲ್ಲಿ ಕಾಣುತ್ತೇವೆ. ಈ ಮರವು ರಾತ್ರಿ ಸಮಯದಲ್ಲಿ ಸಹ ಆಮ್ಲಜನಕವನ್ನು ಬಿಡುಗಡೆ ಮಾಡುವ ಗುಣವನ್ನು ಹೊಂದಿದೆ. ಇಂತಹ ಮರವು ಮನುಕುಲಕ್ಕೆ ಅತ್ಯಾವಶ್ಯಕ ಎಂದು ಪರಿಗಣಿಸಿಯೇ, ಅಶ್ವತ್ಥ ವೃಕ್ಷಕ್ಕೆ ಇದಕ್ಕೆತ್ರಿಮೂರ್ತಿಗಳ ಆವಾಸ ಸ್ಥಾನವೆಂದು ಕರೆದು ಇದನ್ನು ಪೂಜಿಸಲು ತಿಳಿಸಿದ್ದಾರೆ.

10. ಮಕ್ಕಳಿಗೆ ಕಿವಿ ಚುಚ್ಚುವ ಸಂಪ್ರದಾಯ

ಮಕ್ಕಳಿಗೆ ಕಿವಿ ಚುಚ್ಚುವುದು ಭಾರತದಲ್ಲಿ ಅತ್ಯಂತ ಪ್ರಮುಖವಾದ ಸಂಪ್ರದಾಯವಾಗಿದೆ. ಕಿವಿ ಚುಚ್ಚಿಸಿಕೊಳ್ಳುವುದರಿಂದ ಕಿವಿಯ ನಾಳಗಳ ಕಾಯಿಲೆಗಳಿಂದ ಮುಕ್ತವಾಗುವುದರ ಜೊತೆಗೆ ಮಾತನಾಡುವುದರಲ್ಲಿ ಇರುವ ಸಮಸ್ಯೆಗಳು ಸಹ ದೂರವಾಗುತ್ತದೆ. ಇದನ್ನು ಪಾಶ್ಚಿಮಾತ್ಯ ದೇಶದವರು ಸಹ ಅನುಸರಿಸುತ್ತಿದ್ದಾರೆ. ಅದಕ್ಕಾಗಿಯೇ ಅವರು ತಮ್ಮ ಕಿವಿಗಳಿಗೆ ಫ್ಯಾಶನ್ ಆಗಿ ತೋರುವ ಕಿವಿಯೋಲೆಗಳನ್ನು ಧರಿಸುತ್ತಾರೆ.

11. ನದಿನೀರಿನಲ್ಲಿ ನಾಣ್ಯಗಳನ್ನು ಎಸೆಯುವುದು

ಸಾಮಾನ್ಯವಾಗಿ ನದಿ ನೀರಿನಲ್ಲಿ ನಾಣ್ಯಗಳನ್ನು ಎಸೆಯುವುದರಿಂದಾಗಿ ಅದೃಷ್ಟವು ನಮಗೆ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಆದರೆ ವೈಜ್ಞಾನಿಕವಾಗಿ ಹೇಳುವುದಾದರೆ ಹಿಂದಿನ ಕಾಲದಲ್ಲಿ ನಾಣ್ಯಗಳನ್ನು ಬಹುತೇಕ ತಾಮ್ರದಲ್ಲಿಯೇ ಮಾಡಲಾಗುತ್ತಿತ್ತು. ಆದರೆ ಇಂದು ಸ್ಟೇನ್ಲೆಸ್ ಸ್ಟೀಲ್ನಲ್ಲಿ ಮಾಡಲಾಗುತ್ತಿದೆ. ತಾಮ್ರವು ಒಂದು ಅದ್ಭುತವಾದ ಲೋಹವಾಗಿದ್ದು, ಮಾನವನ ದೇಹಕ್ಕೆಅತ್ಯಂತ ಪ್ರಯೋಜನಕಾರಿಯಾಗಿದೆ. ಇಂತಹ ಪ್ರಯೋಜನಕಾರಿಯಾದ ತಾಮ್ರದ ನಾಣ್ಯಗಳನ್ನು ನದಿಯಲ್ಲಿ ಎಸೆಯುವುದರಿಂದ ನದಿಯ ನೀರು ಶುದ್ಧವಾಗುವುದರ ಜೊತೆಗೆ ಆ ಮೂಲಕ ಸ್ವಲ್ಪ ತಾಮ್ರವು ನಮ್ಮ ದೇಹವನ್ನು ಸೇರುವ ವ್ಯವಸ್ಥೆಯನ್ನು ನಮ್ಮ ಪೂರ್ವಜರು ಮಾಡಿದ್ದರು. ಇದು ಒಂದು ಸಂಪ್ರದಾಯವಾಗಿ ಇಂದಿಗೂ ನಡೆದುಕೊಂಡು ಬಂದಿದೆ.

12. ಮಹಿಳೆಯರು ಬಳೆಗಳನ್ನು ಧರಿಸುವುದು

ಸಾಮಾನ್ಯವಾಗಿ ಮನುಷ್ಯರಲ್ಲಿ ಮೊಣಕೈ ಭಾಗವು ಅತಿ ಹೆಚ್ಚು ಸಕ್ರಿಯವಾಗಿರುವ ಭಾಗವಾಗಿದೆ. ಇದರ ಜೊತೆಗೆ ಇದೇ ಭಾಗದಲ್ಲಿನ ನಾಡಿಯನ್ನು ಪರೀಕ್ಷಿಸಿಯೇ ಜನರಿಗೆ ಬರುವ ವಿವಿಧ ಕಾಯಿಲೆಗಳನ್ನು ಗುರುತಿಸಬಹುದು. ಮಹಿಳೆಯರು ಬಳೆಗಳನ್ನು ತಮ್ಮ ಅಂಗೈಗೆ ಧರಿಸಿಕೊಳ್ಳುವುದುತಿಳಿದ ವಿಚಾರವೇ. ಇದರಿಂದ ಬಳೆಗಳ ನಿರಂತರ ಘರ್ಷಣೆಯು ಈ ಭಾಗದ ಮೇಲೆ ಆಗುತ್ತಿರುತ್ತದೆ.ಆಗ ಇದು ದೇಹದಲ್ಲಿನ ರಕ್ತ ಪರಿಚಲನೆಯು ಅಧಿಕಗೊಳ್ಳುತ್ತದೆ. ಕೆಲವೊಮ್ಮೆ ನಮ್ಮ ದೇಹದಲ್ಲಿ ಸೃಷ್ಟಿಯಾಗುವ ವಿದ್ಯುತ್ ನಮ್ಮ ತ್ವಚೆಯ ಮೂಲಕ ಹೊರ ಬರುತ್ತದೆ, ಆಗ ಬಳೆಗಳು ಅದನ್ನು ಎಳೆದುಕೊಂಡು ಪುನಃ ನಮ್ಮ ದೇಹಕ್ಕೆ ರವಾನಿಸುತ್ತವೆ. ಏಕೆಂದರೆ ಬಳೆಗಳು ದುಂಡಗೆ ವೃತ್ತಾಕಾರವಾಗಿ ಇರುವುದರಿಂದ ವಿದ್ಯುತ್ ಇತರ ಕಡೆ ಪ್ರವಾಹಿಸಲು ಸಾಧ್ಯವಾಗದೆ ಮರಳಿ ದೇಹಕ್ಕೆ ರವಾನೆಯಾಗುತ್ತದೆ.

13. ನಾವೇಕೆ ವಿಗ್ರಹಗಳನ್ನು ಪೂಜಿಸುತ್ತೇವೆ

ಹಿಂದೂ ಧರ್ಮವು ಇತರ ಧರ್ಮಗಳಿಗಿಂತ ಹೆಚ್ಚಾಗಿ ಮೂರ್ತಿ ಪೂಜೆಯನ್ನು ಬೆಂಬಲಿಸುತ್ತದೆ. ಇದರಿಂದ ಪೂಜೆಯಲ್ಲಿ ಏಕಾಗ್ರತೆಯು ಅಧಿಕವಾಗುತ್ತದೆ ಎಂದು ಅಧ್ಯಯನಕಾರರು ಸ್ಪಷ್ಟಪಡಿಸಿದ್ದಾರೆ. ಮನೋವಿಜ್ಞಾನಿಗಳ ಪ್ರಕಾರ ಮನುಷ್ಯನು ತಾನು ನೋಡುವುದರ ಆಧಾರದ ಮೇಲೆ ಆಲೋಚನೆಗಳನ್ನು ಹೊಂದುತ್ತಾನಂತೆ. ಒಂದು ವೇಳೆ ನಿಮ್ಮ ಮುಂದೆ ಮೂರು ವಸ್ತುಗಳು ಇದ್ದಲ್ಲಿ, ಅದರಲ್ಲಿ ಯಾವ ವಸ್ತುವನ್ನು ನೋಡುತ್ತೀರಿ ಎಂಬುದರ ಮೇಲೆ ನಿಮ್ಮ ಭಾವನೆಗಳು ಬದಲಾಗುತ್ತವೆಯಂತೆ. ಈ ಕಾರಣವಾಗಿಯೇ ಪ್ರಾಚೀನ ಕಾಲದಲ್ಲಿ ಮೂರ್ತಿ ಪೂಜೆಯು ಆರಂಭಗೊಂಡಿತು. ಯಾವಾಗ ಜನರು ದೇವರನ್ನು ಮೂರ್ತಿಯ ರೂಪದಲ್ಲಿ ನೋಡಲು ಆರಂಭಿಸಿದರೋ, ಆಗಲೇ ಅವರ ಮನಸ್ಸನ್ನು ಏಕ ಚಿತ್ತದಿಂದ ದೇವರ ಮೇಲೆ ನೆಲೆಗೊಳಿಸಲು ಸಾಧ್ಯವಾಗುತ್ತ ಹೋಯಿತು. ಇದರಿಂದ ಅವರ ಧ್ಯಾನಕ್ಕೆ ಯಾವುದೇ ಭಂಗ ಬರುತ್ತಿರಲಿಲ್ಲ ಮತ್ತು ಅವರಲ್ಲಿ ಆಧ್ಯಾತ್ಮಿಕ ಶಕ್ತಿಯು ಹೆಚ್ಚಾಗುತ್ತ ಹೋಗುತ್ತಿತ್ತು.

14. ಉಪವಾಸದ ಕಾರಣ

ಉಪವಾಸದ ಹಿಂದಿನ ತತ್ವವು ಆಯುರ್ವೇದದಲ್ಲಿ ಅಡಗಿದೆ. ಈ ಪ್ರಾಚೀನ ವೈಧ್ಯ ವಿಜ್ಞಾನವು ಹಲವಾರು ಕಾಯಿಲೆಗಳಿಗೆ ಮೂಲ ಕಾರಣವು ನಮ್ಮ ಜೀರ್ಣಾಂಗ ವ್ಯೂಹದಲ್ಲಿ ಬಿಡುಗಡೆಯಾಗುವ ಟಾಕ್ಸಿಕ್ ಪದಾರ್ಥಗಳೇ ಆಗಿರುತ್ತದೆ ಎಂದು ಹೇಳುತ್ತದೆ. ಈಟಾಕ್ಸಿಕ್ ಪದಾರ್ಥಗಳನ್ನು ನಿರಂತರವಾಗಿ ಸ್ವಚ್ಛ ಮಾಡುತ್ತ ಇರುವುದರಿಂದ ನಾವು ಆರೋಗ್ಯವಾಗಿರಬಹುದು. ಉಪವಾಸ ಮಾಡುವುದರಿಂದ ಜೀರ್ಣಾಂಗ ವ್ಯೂಹಕ್ಕೆ ಸ್ವಲ್ಪ ವಿಶ್ರಾಂತಿಯು ದೊರೆಯುತ್ತದೆ ಮತ್ತು ದೇಹದಲ್ಲಿರುವ ಅಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತವೆ.ಒಂದು ಉಪವಾಸವು ಆರೋಗ್ಯಕ್ಕೆ ಒಳ್ಳೆಯದು. ಈ ಅವಧಿಯಲ್ಲಿ ನಿಯಮಿತವಾಗಿ ನಿಂಬೆರಸವನ್ನು ಸೇವಿಸುವುದರಿಂದ ದೇಹದಲ್ಲಿ ವಾಯು ತುಂಬಿಕೊಳ್ಳುವ ಸಮಸ್ಯೆಯು ತಲೆದೋರುವುದಿಲ್ಲ.

15. ಸೂರ್ಯ ನಮಸ್ಕಾರ

ಹಿಂದೂ ಧರ್ಮದಲ್ಲಿ ಅಡಗಿರುವ ಕೆಲವೊಂದು ವೈಜ್ಞಾನಿಕ ಸತ್ಯಗಳು
ಸೂರ್ಯ ನಮಸ್ಕಾರ

ಹಿಂದೂಗಳು ಸೂರ್ಯ ಭಗವಾನ್ಗೆ ನಮಸ್ಕಾರವನ್ನು ಸಲ್ಲಿಸುವ ವಾಡಿಕೆ ಅನಾದಿಕಾಲದಿಂದಲು ನಡೆದು ಬಂದಿದೆ. ಬೆಳಗ್ಗೆ ಸೂರ್ಯೋದಯವಾಗುವಾಗ ಸೂರ್ಯನಿಗೆ ನೀರನ್ನು ಅರ್ಪಿಸುತ್ತ ಇದನ್ನು ಮಾಡುತ್ತಾರೆ. ಏಕೆಂದರೆ ಬೆಳಗಿನ ಸೂರ್ಯ ಕಿರಣಗಳನ್ನು ನೀರಿನ ಮೂಲಕ ನೋಡುವುದು ಕಣ್ಣುಗಳಿಗೆ ಒಳ್ಳೆಯದು. ಜೊತೆಗೆ ಈ ಅನುಷ್ಟಾನವನ್ನು ಮಾಡಲು ನಾವು ಸೂರ್ಯೋದಯಕ್ಕಿಂತ ಮೊದಲೇ ಏಳಬೇಕಾಗುತ್ತದೆ. ಇದರಿಂದಾಗಿ ನಾವು ಬೆಳಗ್ಗೆ ಬೇಗ ಏಳುವ ಅಭ್ಯಾಸವನ್ನು ಇರಿಸಿಕೊಳ್ಳುತ್ತೇವೆ. ಹೀಗಾಗಿ ಮುಂಜಾನೆಯ ಒಳ್ಳೆಯ ಮತ್ತು ನಿರ್ಮಲವಾದ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ.

16. ಎರಡು ಕೈ ಜೋಡಿಸಿ ನಮಸ್ಕಾರ ಮಾಡುವುದು

ಹಿಂದೂ ಸಂಪ್ರದಾಯದಲ್ಲಿ ಅತಿಥಿಗಳನ್ನು ಅಥವಾ ಹಿರಿಯರನ್ನು ಕಂಡಾಗ ಅವರನ್ನು ಸ್ವಾಗತಿಸಲು “ನಮಸ್ಕಾರ” ಮುದ್ರೆ ಎಂದರೆ ಎರಡು ಅಂಗೈಗಳನ್ನು ಜೋಡಿಸುವ ಕ್ರಿಯೆಯನ್ನು ಮಾಡಲಾಗುತ್ತದೆ. ಇನ್ನು ಇದರ ಹಿಂದಿನ ವೈಜ್ಞಾನಿಕ ಸತ್ಯಾಂಶವನ್ನು ನೋಡುವುದಾದರೆ, ನಮಗೆ ತಿಳಿದು ಬರುವುದು ಇಷ್ಟು. ಎರಡು ಕೈಗಳ ಅಂಗೈಗಳನ್ನು ಪರಸ್ಪರ ಜೋಡಿಸುವುದರಿಂದ ಹತ್ತು ಬೆರಳುಗಳು ಪರಸ್ಪರ ಕೂಡುತ್ತವೆ. ಆಗ ಕಣ್ಣು, ಕಿವಿ ಮತ್ತು ಮನಸ್ಸಿನ ಒತ್ತಡ ಕೇಂದ್ರಗಳು ಒಂದನ್ನೊಂದು ತಾಕುತ್ತವೆ. ಇದರಿಂದ ನಮಗೆ ಪರಿಚಯವಾಗುವ ವ್ಯಕ್ತಿಯ ಹೆಸರನ್ನು ದೀರ್ಘಕಾಲ ನಾವು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ನಾವು ದೈಹಿಕವಾಗಿ ಆ ವ್ಯಕ್ತಿಯನ್ನು ಸ್ಪರ್ಶಿಸಲುಹೋಗದ ಕಾರಣ, ಯಾವುದೇ ಕೀಟಾಣುಗಳು ಸಹ ನಮ್ಮ ಸಂಪರ್ಕಕ್ಕೆ ಬರುವುದಿಲ್ಲ.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಅನ್ನನಾಳದ ರೋಗ

ಅನ್ನನಾಳದ ರೋಗಗಳು

ರಾಷ್ಟ್ರೀಯ ರಜಾದಿನ

ರಾಷ್ಟ್ರೀಯ ರಜಾದಿನ