in

ಉದ್ಧವಗೀತೆಯಲ್ಲಿ ದತ್ತಾತ್ರೇಯ ಸ್ವಾಮಿಯ 24ಮಾತುಗಳು

ಉದ್ಧವನಿಗೆ ಉಪದೇಶಿಸಿದ ಉದ್ಧವಗೀತೆ
ಉದ್ಧವನಿಗೆ ಉಪದೇಶಿಸಿದ ಉದ್ಧವಗೀತೆ

ಭಾಗವತದಲ್ಲಿ ಶ್ರೀಕೃಷ್ಣ ತನ್ನ ಸ್ನೇಹಿತನಾದ ಉದ್ಧವನಿಗೆ ಉಪದೇಶಿಸಿದ ಉದ್ಧವಗೀತೆಯಲ್ಲಿ ದತ್ತಾತ್ರೇಯನ 24 ಮಾತುಗಳು ಬರುತ್ತವೆ. ಅವುಗಳು ಹೀಗಿವೆ.

1. ಪೃಥ್ವಿ:
ಪೃಥ್ವಿಯಿಂದ ಸಹನಶೀಲತೆ, ಕ್ಷಮೆ, ತಾಳ್ಮೆ ಹಾಗೂ ಎಲ್ಲಾ ಜೀವಿಗಳ ಒಳಿತಿಗಾಗಿ ಬಾಳುವುದನ್ನು ಕಲಿಯಬಹುದು.

2. ವಾಯು :
ಯಾವ ಸಂದರ್ಭದಲ್ಲಿಯು ವಾಯು ಹೇಗೆ ತನ್ನ ಗುಣಾದರ್ಶಗಳನ್ನು ಕಳೆದುಕೊಳ್ಳುವುದಿಲ್ಲವೋ ಹಾಗೆ ನಾವು ಯಾವ ವಿಷಯಗಳಿಂದಲೂ ವಿಚಲಿತರಾಗದೆ ಮಾರ್ಗಕ್ರಮಣವನ್ನು ಮಾಡಬೇಕು.

3. ಆಕಾಶ :
ಆಕಾಶಕ್ಕೆ ಯಾವುದೆ ಎಲ್ಲೆಗಳಿಲ್ಲ, ಅಂತೆಯೆ ನಮ್ಮ ಆತ್ಮವೂ ಕೂಡ ಇರಬೇಕು. ಹಾಗೆಯೆ ಎಲ್ಲವನ್ನು ಮೀರಿ ಅನಂತವಾಗಿರುವುದಲ್ಲದೆ ನಮ್ಮ ಮನಸ್ಸಿನ ಪ್ರಕ್ಷುಬ್ಧತೆಗಳಿಗೆ ಅತೀತವಾಗಿ ನಿರ್ಮಲವಾಗಿರ ಬೇಕೆಂದು ತಿಳಿಸತ್ತದೆ.

4. ನೀರು :
ನೀರಿನಂತೆಯೆ ಉತ್ತಮ ವ್ಯಕ್ತಿ ಸಹ ತನ್ನ ಬಳಿ ಇರುವ ಪ್ರತಿಯೊಬ್ಬರ ಆರೊಗ್ಯ, ಶಾಂತಿಗಳಿಗೆ ಅಗತ್ಯವಾಗುವಂತೆ ಬದುಕಬೇಕು. ನೀರು ಯಾವುದೆ ಅಹಮಿಕೆ ತೋರದಿರುವಂತೆ ಪರಮಾತ್ಮನ ಶ್ರೇಷ್ಠ ಸೃಷ್ಟಿಯ ತೆರೆದು ಬಾಳಬೇಕು.

ಉದ್ಧವಗೀತೆಯಲ್ಲಿ ದತ್ತಾತ್ರೇಯ ಸ್ವಾಮಿಯ 24ಮಾತುಗಳು
ಶ್ರೀಕೃಷ್ಣ ತನ್ನ ಸ್ನೇಹಿತನಾದ ಉದ್ಧವನಿಗೆ ಉಪದೇಶಿಸಿದ ಉದ್ಧವಗೀತೆ

5. ಅಗ್ನಿ :
ಬೆಂಕಿಗೆ ಯಾವುದೇ ಸ್ವರೂಪವಿಲ್ಲದಿದ್ದಾಗಿಯೂ ತಾನು ಸುಡುತ್ತಿರುವ ಕಟ್ಟಿಗೆ ರೂಪದಲ್ಲಿ ತನ್ನನ್ನು ಅಭಿವ್ಯಕ್ತಿಗೊಳಿಸಿಕೊಳ್ಳುತ್ತೆದೆ. ಅಂತೆಯೇ ತಾನು ಪಡೆದ ದೇಹದ ರೂಪದ ಮುಖಾಂತರವೆ ಆತ್ಮವೂ ತನ್ನನ್ನು ತೋರ್ಪಡಿಸಿಕೂಳ್ಳುತ್ತದೆ.

6. ಚಂದ್ರ :
ಚಂದ್ರ ಕುಗ್ಗುತ್ತಾನೆ ಹಿಗ್ಗುತ್ತಾನೆ. ಹೀಗೆ ನಿರಂತರ ಪ್ರಕ್ರಿಯೆಗಳಿಗೆ ಒಳಗಾದರು ಶಾಂತನಾಗಿರುತ್ತಾನೆ. ಹಾಗೆ ವ್ಯಕ್ತಿಯು ಜನನದಿಂದ ಮರಣದವರೆಗಿನ ನಿರಂತರ ಬದಲಾವಣೆಗಳಿಂದ ಬಾಧಿಸಲ್ಪಡುವುದಿಲ್ಲ.

7. ಸೂರ್ಯ :
ಸೂರ್ಯನ ಪ್ರತಿಫಲನಗಳು ಪರಮಾತ್ಮನು ಒಬ್ಬನೆ ಒಬ್ಬನಾಗಿದ್ದು ವಿವಿಧ ಜೀವಿಗಳ ಮೇಲೆ ತನ್ನನ್ನು ಪ್ರತಿಫಲಿಸಿದ್ದಾನೆ ಎಂಬುದನ್ನು ಸೂಚಿಸುತ್ತದೆ. ಹೀಗೆ ಆತ್ಮವು ದೇಹವಲ್ಲ ಎಂಬುದನ್ನು ಅರಿಯಬಹುದಾಗಿದೆ.

8. ಪಾರಿವಾಳ :
ಪಾರಿವಾಳವು ತನ್ನ ಮಕ್ಕಳಿಂದ ದೂರವಿರುವುದು ಅಸಾಧ್ಯವೆನಿಸಿ ತಾನೂ ಮೂರ್ಖತನದಿಂದ ಬಲೆಯಲ್ಲಿ ಬಂಧಿತಗೊಳ್ಳುತ್ತದೆ. ಪ್ರಾಜ್ಙನು ಅತಿಯಾದ ವ್ಯಾಮೋಹಗಳಿಂದ ಬಂಧಿತನಾಗುವುದಿಲ್ಲ.

9. ಹೆಬ್ಬಾವು :
ಕೆಲವೊಂದು ಸಮಯದಲ್ಲಿ ಹೆಬ್ಬಾವು ತಿನ್ನುವುದಕ್ಕೆ ಏನು ಸಿಗದಿದ್ದರೂ ಹೆದರುವುದಿಲ್ಲ ಪ್ರಾಜ್ಙನೂ ಸುಖದ ಆಮಿಷಗಳ ಅರಸುವಿಕೆಯಲ್ಲಿ ಎಂದೂ ಕಳೆದು ಹೋಗುವುದಿಲ್ಲ.

10. ಸಮುದ್ರ :
ನದಿಗಳು ಎಷ್ಟೇ ನೀರನ್ನು ತಂದರೂ, ತರದಿದ್ದರೂ ಸುಖ ಪಡುವುದು ಇಲ್ಲ, ದುಃಖ ಪಡುವುದಿಲ್ಲ. ಅಂತೆಯೆ ಮನುಷ್ಯನೂ ಭೋಗಗಳು ಲಭಿಸಿದಾಗ ಸುಖ ಪಟ್ಟು, ನೋವುಗಳು ಬಂದಾಗ ದುಃಖಿಸಲೂ ಬಾರದು ಎನ್ನುವುದನ್ನು ತಿಳಿಸಿದೆ.

11. ದೀಪದ ಹುಳ :
ದೀಪದ ಹುಳು ಹೇಗೆ ಉರಿವ ದೀಪಕ್ಕೆ ಸಿಲುಕಿ ಸಾಯುತ್ತದೆಯೊ ಹಾಗೆಯೇ ಯಾವ ಮನುಷ್ಯನು ಮೋಹಿತನಾಗುತ್ತಾನೋ ಅವನು ದೀಪದ ಹುಳದಂತೆ ಅದರಲ್ಲಿಯೆ ನಾಶನಾಗುತ್ತಾನೆ.

12. ಜೇನುನೊಣ :
ಜೇನುನೊಣದಂತೆ ಧನವನ್ನು( ಜೇನು ತುಪ್ಪವನ್ನು) ಸಂಗ್ರಹಿಸುವುದರಿಂದ ಹಠಾತ್ತಾಗಿ ಮರಣ ಬರುತ್ತದೆ. ಈ ಉಪದೇಶವನ್ನು ಪಡೆದುಕೊಂಡು ದ್ರವ್ಯಸಂಗ್ರಹವನ್ನು ಮಾಡುವುದನ್ನು ಬಿಡಬೇಕು.

13. ಆನೆ :
ಆನೆಯು ಸ್ತ್ರೀ ವ್ಯಾಮೋಹಕ್ಕೆ ಒಳಗಾಗಿ ಹೇಗೆ ಗುಂಡಿಯಲ್ಲಿ ಸಿಲುಕಿಕೊಳ್ಳುತ್ತದೆಯೋ ಹಾಗೆಯೆ ಯಾವ ಪುರುಷನು ಸ್ತ್ರೀ ಸುಖಕ್ಕೆ ಮರುಳಾಗುತ್ತಾನೆಯೋ ಅವನು ಬಂಧನದಲ್ಲಿ ಸಿಲುಕಿಕೊಳ್ಳುತ್ತಾನೆ.

14. ಭ್ರಮರ :
ಭ್ರಮರವು ಒಂದೇಭ್ರಮರವು ಒಂದೇ ಕಮಲದ ಸುಗಂಧವನ್ನು ಸೇವಿಸದೆ ಬಹಳಷ್ಟು ಕಮಲಗಳ ಸುವಾಸನೆಯ ಆನಂದವನ್ನು ಪಡೆಯುತ್ತಿರುತ್ತದೆ. ಹಾಗೆಯೆ ನಾವು ಪ್ರತಿಯೊಂದನ್ನು ಕಲಿಯಲು ಪ್ರಯತ್ನಿಸಬೇಕು.

15. ಕಸ್ತೂರಿ ಮೃಗ :
ಕಸ್ತೂರಿ ಮೃಗಕ್ಕೆ ಸಂಗೀತದ ವ್ಯಾಮೋಹವು ಇರುವುದರಿಂದ ಬೇಟೆಗಾರ ಸಂಗೀತ ಕೇಳಿಸಿ ಸುಲಭವಾಗಿ ಭೇಟೆಯಾಡುತ್ತಾನೆ. ಇದರಂತೆಯೆ ನಾವು ಯಾವುದೆ ಮೋಹದಲ್ಲಿ ಸಿಲಿಕಿಕೊಳ್ಳಬಾರದು.

16.ಮೀನು :
ಮೀನು ತನ್ನ ಆಹಾರದ ರುಚಿಗೆ ಮೋಹಗೊಂಡು ಗಾಳಕ್ಕೆ ಸಿಲುಕುತ್ತದೆ. ಹಾಗೆಯೆ ಮನುಷ್ಯನು ನಾಲಿಗೆಯ ರುಚಿಯಲ್ಲಿ ಬದ್ಧನಾಗಿದ್ದು ಜನ್ಮ ಮರಣದ ಸುಳಿಯಲ್ಲಿ ಸಿಕ್ಕಿಕೊಳ್ಳುತ್ತಾನೆ.

17. ಪಿಂಗಲಾ ವೇಶ್ಯೆ :
ಎಲ್ಲಿಯವರೆಗೆ ಮನುಷ್ಯನಲ್ಲಿ ಆಸೆಯು ಪ್ರಬಲವಾಗಿರುತ್ತದೆಯೊ ಅಲ್ಲಿಯವರೆಗೆ ಅವನಿಗೆ ಸುಖ ನಿದ್ರೆ ಬರುವುದಿಲ್ಲ. ಯಾವ ಪುರುಷನು ಆಸೆಯನ್ನು ತ್ಯಜಿಸಿದ್ದಾನೆಯೊ ಅವನಿಗೆ ಈ ಸಂಸಾರದ ದುಃಖಗಳು ಬಂಧಿಸುವುದಿಲ್ಲ.

18. ಟಿಟ್ಟಿಭ :
ಟಿಟ್ಟಿಭ ಹಕ್ಕಿ ಮೀನನ್ನು ಕಚ್ಚಿಕೊಂಡು ಹೋಗುವಾಗ ಉಳಿದ ಹದ್ದು, ಕಾಗೆಗಳೆಲ್ಲಾ ಬೆನ್ನು ಹತ್ತಿದಾಗ ದಣಿದ ಟಿಟ್ಟಿಭ ಮೀನನ್ನು ಅಲ್ಲೆ ಬಿಡಲು, ಹದ್ದು ಅದನ್ನು ಕಚ್ಚಿಕೊಳ್ಳುವುದಕ್ಕೂ ಎಲ್ಲಾ ಕಾಗೆಗಳು ಅದನ್ನು ಬೆನ್ನು ಹತ್ತಿದವು. ಇದರಿಂದ ಆ ಟಿಟ್ಟಿಭವು ನಿಶ್ಚಿಂತವಾಗಿ ಕುಳಿತಿತು. ಈ ಸಂಸಾರದಲ್ಲಿ ಮೋಹವನ್ನು ಬಿಡುವುದರಲ್ಲಿಯೆ ಶಾಂತಿ ಇದೆ ಇಲ್ಲದಿದ್ದರೆ ಘೋರ ವಿಪತ್ತಿದೆ.

19. ಬಾಲಕ :
ಮನಾಪಮಾನಗಳ ಬಗ್ಗೆ ವಿಚಾರ ಮಾಡದೆ, ಎಲ್ಲ ಚಿಂತೆಗಳ ಪರಿಹಾರ ಮಾಡಿಕೊಂಡು ಬಾಲಕನಂತೆ ಆನಂದದಿಂದ ಇರಬೇಕು.

ಉದ್ಧವಗೀತೆಯಲ್ಲಿ ದತ್ತಾತ್ರೇಯ ಸ್ವಾಮಿಯ 24ಮಾತುಗಳು
ದತ್ತಾತ್ರೇಯ ಸ್ವಾಮಿಯ 24ಮಾತುಗಳು

20. ಕೈಬಳೆ :
ಎರಡು ಬಳೆಗಳಿದ್ದರೆ ತಗುಲಿ ಶಬ್ದವಾಗುತ್ತದೆ. ಬಳೆಗಳು ಹೆಚ್ಚಿಗೆ ಇದ್ದರೆ ಹೆಚ್ಚು ಶಬ್ಬವಾಗುತ್ತದೆ. ಹಾಗೆಯೇ ಇಬ್ಬರು ಸೇರಿದ್ದಲ್ಲಿ ಮಾತುಕತೆಗಳಾಗುತ್ತವೆ. ಅದೇ ಹೆಚ್ಚು ಜನ ಸೇರಿದ್ದಲ್ಲಿ ಕಲಹವಾಗುತ್ತದೆ. ಆದ್ದರಿಂದ ಸಾಧನೆ ಮಾಡುವಾಗ ಒಂಟಿಯಾಗಿರಬೇಕು.

21. ಶಸ್ತ್ರಕಾರ :
ಶಸ್ತ್ರಕಾರ ಬಾಣವನ್ನು ಮಾಡುವಾಗ ರಾಜನು ಹಾದು ಹೋದನು. ನಂತರ ಒಬ್ಬ ರಾಜನು ಹೀಗೆ ಹೋದನಾ ಎಂದು ಕೇಳಿದಾಗ ಆತ ನಾನು ನನ್ನ ಕೆಲಸದಲ್ಲಿ ಮಗ್ನನಾಗಿದ್ದು ನೋಡಲಿಲ್ಲ ಎಂದನು. ಹೀಗೆ ನಾವು ಪ್ರತಿಯೊಂದು ಕಾರ್ಯ ಮಾಡಬೇಕು.

22. ಸರ್ಪ:
ಸರ್ಪಗಳು ಅಪಕಾರ ಮಾಡಿದ ಹೊರತು, ಕೆಣಕದ ಹೊರತು ಯಾರನ್ನು ಕಚ್ಚುವುದಿಲ್ಲ. ಅದರಂತೆಯೆ ಮಿತವಾಗಿ ಮಾತನಾಡ ಬೇಕು, ಜಗಳ ಮಾಡಬಾರದು, ಸದಾ ವಿವೇಕದಿಂದ ವರ್ತಿಸಬೇಕು, ಯಾರಿಗೂ ನೋವುಂಟು ಮಾಡಬಾರದು.

23. ಜೇಡ :
ಜೇಡಗಳು ಹಗಲೂ ರಾತ್ರಿ ಎನ್ನದೆ ಬಲೆಯನ್ನು ಹಣೆಯುತ್ತವೆ. ಮುಂದೆ ಮನಸ್ಸಿಗೆ ಬಂದಾಗ ಆ ಮನೆಯನ್ನೆ ನುಂಗಿ ಸ್ವತಂತ್ರವಾಗುತ್ತದೆ. ಆದುದರಿಂದ ಜಗತ್ತಿನಲ್ಲಿನ ಘಟನೆಗಳಿಗೆ ಹೆಚ್ಚಿನ ಮಹತ್ವವನ್ನು ಕೊಡಬಾರದು.

24. ಕಣಜ :
ಕಣಜವು ಯಾವುದೋ ಒಂದು ಹುಳುವನ್ನು ತಂದಿಟ್ಟುಕೊಂಡು ಗಾಳಿ ಊದುತ್ತಾ ಆ ಕೀಟವನ್ನು ಕೊನೆಗೆ ಅದು ಕೂಡ ಕಣಜದ ಹುಳುವನ್ನೇ ಮಾಡುತ್ತದೆ. ಹಾಗೆಯೇ ನಾವು ಸತತ ನಮ್ಮ ಗುರಿಯ ಕಡೆಗೆ ಧ್ಯಾನ ಮಾಡಬೇಕು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಕೊನೆಗೂ ನಟಿಗೆ ಕೂಡಿಬಂತು ಕಂಕಣಭಾಗ್ಯ.

ಕೊನೆಗೂ ನಟಿಗೆ ಕೂಡಿಬಂತು ಕಂಕಣಭಾಗ್ಯ.

ಮೂರು ನದಿಗಳ ಸಂಗಮ ತ್ರಿವೇಣಿ ಸಂಗಮ

ಕಾವೇರಿ, ಕಪಿಲ, ಸ್ಪಟಿಕ ಮೂರು ನದಿಗಳ ಸಂಗಮ ತ್ರಿವೇಣಿ ಸಂಗಮ