in

ಅಂಬೇಡ್ಕರ್‍ ಅವರು ರಚಿಸಿದ “ಹಿಂದೂ ಕೋಡ್ ಬಿಲ್” ಮುಖ್ಯವಾಗಿ 7 ಅಂಶಗಳನ್ನು ಒಳಗೊಂಡಿತ್ತು

ಅಂಬೇಡ್ಕರ್‍ ಅವರು ರಚಿಸಿದ "ಹಿಂದೂ ಕೋಡ್ ಬಿಲ್''
ಅಂಬೇಡ್ಕರ್‍ ಅವರು ರಚಿಸಿದ "ಹಿಂದೂ ಕೋಡ್ ಬಿಲ್''


ಬ್ರಿಟೀಷರಿಂದ ಆರಂಭಿಸಲ್ಪಪಟ್ಟ ಹಿಂದೂ ‘ವೈಯಕ್ತಿಕ ಕಾನೂನಿನ ಸುಧಾರಣೆ ಮತ್ತು ಕ್ರೂಢೀಕರಣ’ ಪ್ರಕ್ರಿಯೆಯು,೧೯೪೭ರಲ್ಲಿ ಭಾರತ ಸ್ವಾತಂತ್ರವಾದ ಮೇಲೆ ವಸಾಹತುಶಾಹಿನಂತರದ ಸರ್ಕಾರದ ಪ್ರಧಾನ ಮಂತ್ರಿಯಾದ ಜವಹರಲಾಲ್ ನೆಹರು ನೇತ್ರುತ್ವದಲ್ಲಿ ಸಂಪೂರ್ಣಗೊಂಡಿತು. ಹಸ್ತಕ್ಷೇಪ ಮಾಡದಿರುವ ಬ್ರಿಟಿಷ್ ನೀತಿಯ ಪ್ರಕಾರ, ವೈಯಕ್ತಿಕ ಕಾನೂನಿನ ಸುಧಾರಣೆಯು ಹಿಂದೂ ಸಮುದಾಯದಲ್ಲಿ ಹುಟ್ಟಿದಂತಹ ಬೇಡಿಕೆಯಾಗಿತ್ತು.

”ಹಿಂದೂ ಕೋಡ್ ಬಿಲ್” ಮುಖ್ಯವಾಗಿ 7 ಅಂಶಗಳನ್ನು ಒಳಗೊಂಡಿತ್ತು.
*ಆಸ್ತಿಯ ಹಂಚಿಕೆ.
*ಆಸ್ತಿಗೆ ವಾರಸುದಾರರನ್ನು ಪಟ್ಟಿಮಾಡುವುದು.
*ಜೀವನಾಂಶ.
*ಮದುವೆ.
*ವಿಚ್ಛೇಧನ.
*ದತ್ತು ಸ್ವೀಕಾರ.
*ಅಪ್ರಾಪ್ತ ವಯಸ್ಕರ ಮದುವೆ.

ಅಂಬೇಡ್ಕರ್‍ ಅವರು ರಚಿಸಿದ "ಹಿಂದೂ ಕೋಡ್ ಬಿಲ್'' ಮುಖ್ಯವಾಗಿ 7 ಅಂಶಗಳನ್ನು ಒಳಗೊಂಡಿತ್ತು
ಅಂಬೇಡ್ಕರ್

*ಆಸ್ತಿಯ ಹಂಚಿಕೆ
ಆ ಕಾಲದಲ್ಲಿ ಹಿಂದೂಗಳಲ್ಲಿ ಆಸ್ತಿಯ ಹಂಚಿಕೆ ಬಗ್ಗೆ ಎರಡು ವಿಧಾನಗಳಿತ್ತು. ಒಂದನೆಯದು ಮಿತಾಕ್ಷರ, ಎರಡನೆಯದು ದಯಾಭಾಗ. ಇದರಲ್ಲಿ ಹಿಂದೂಗಳು ಪ್ರಮುಖವಾಗಿ ಮಿತಾಕ್ಷರ ಪದ್ಧತಿಯನ್ನು ಅನುಸರಿಸುತ್ತಿದ್ದರು. ಮಿತಾಕ್ಷರದ ಈ ಪದ್ಧತಿಯಲ್ಲಿ ಆಸ್ತಿಯು ವ್ಯಕ್ತಿಯು ಬದುಕಿದ್ದಾಗ ಅದು ಆತನ ಸ್ವಂತ ಆಸ್ತಿಯಾಗಿರುತ್ತಿರಲಿಲ್ಲ. ಬದಲಿಗೆ ಅದು ತಂದೆ, ಮಗ, ಮೊಮ್ಮಗ ಮತ್ತು ಮರಿಮೊಮ್ಮಗ ಹೀಗೆ ನಾಲ್ವರು ಸಮಾನ ಪಾಲುದಾರರಿಗೆ ಸೇರಿರುತ್ತಿತ್ತು.

ತಂದೆ, ಮಗ, ಮೊಮ್ಮಗ, ಮರಿಮೊಮ್ಮಗ ಈ ಸರಣಿಯಲ್ಲಿ ಹೆಣ್ಣು ಮಕ್ಕಳಿಗೆ ಅವಕಾಶವೇ ಇಲ್ಲ ಎಂಬುದನ್ನು ಓದುಗರು ಗಮನಿಸಬೇಕು!. ಆದರೆ ಅಂಬೇಡ್ಕರರು ಮಿತಾಕ್ಷರದ ಈ ಪದ್ಧತಿಯ ಬದಲಿಗೆ ದಯಾಭಾಗ ಪದ್ಧತಿಯನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದರು. ದಯಾಭಾಗ ಈ ಪದ್ಧತಿಯ ಪ್ರಕಾರ ವ್ಯಕ್ತಿಯು ಬದುಕಿದ್ದಾಗ ಆಸ್ತಿಯು ಆತನ ಸ್ವಂತದ್ದಾಗಿದ್ದು ಸತ್ತ ನಂತರ ಅದು ಆತನ ಉತ್ತರಾಧಿಕಾರಿಗೆ ಸೇರುತ್ತಿತ್ತು. ಆ ಉತ್ತರಾಧಿಕಾರಿ ಅದನ್ನು ಮಾರಬಹುದಿತ್ತು, ಕೊಡುಗೆ ಅಥವ ವಿಲ್ ಮೂಲಕ ತನಗೆ ಬೇಕಾದವರಿಗೆ ಕೊಡಬಹುದಿತ್ತು.

ಮುಂದುವರಿದು ಅಂಬೇಡ್ಕರರು ಹೇಳಿದ್ದು ಆಸ್ತಿಯ ವಾರಸುದಾರಿಕೆ ಅಥವ ವ್ಯಕ್ತಿ ಸತ್ತ ನಂತರ ಆಸ್ತಿ ಯಾರಿಗೆ ಸೇರುತ್ತದೆ ಎಂಬುದನ್ನು. ಅಂದು ಜಾರಿಯಲ್ಲಿದ್ದ ಮಿತಾಕ್ಷರ ಪದ್ಧತಿ ಪ್ರಕಾರ ವ್ಯಕ್ತಿ ಸತ್ತ ನಂತರ ಆತನ ಆಸ್ತಿ ಆತನ ಸಹಜಾತರು ಅಂದರೆ ಅಣ್ಣತಮ್ಮಂದರಿಗಿಂತ ಆತನ ಪಿತೃ ಸಂಬಂಧಿಗಳಿಗೆ ಹೋಗುತ್ತಿತ್ತು. ಅಂದರೆ ತಂದೆಯ ಸಂಬಂಧಿಗಳಿಗೆ ಹೋಗುತ್ತಿತ್ತು. ಆದರೆ ಅಂಬೇಡ್ಕರರು ದಯಾಭಾಗ ಪದ್ಧತಿ ಶಿಫಾರಸು ಮಾಡಲಾಗಿ ಆಸ್ತಿ ಆತನ ರಕ್ತ ಸಂಬಂಧಿಗಳಿಗೇ ಹೋಗುವಂತಾಯಿತು.

ಅಂಬೇಡ್ಕರ್‍ ಅವರು ರಚಿಸಿದ "ಹಿಂದೂ ಕೋಡ್ ಬಿಲ್'' ಮುಖ್ಯವಾಗಿ 7 ಅಂಶಗಳನ್ನು ಒಳಗೊಂಡಿತ್ತು
ಬಾಬಾಸಾಹೇಬ್ ಅಂಬೇಡ್ಕರ್ : ಜೀವನಚರಿತ್ರೆಗಳ ಕತೆ

ಈ ಸಂದರ್ಭದಲ್ಲಿ ಅಂಬೇಡ್ಕರರು ಆಸ್ತಿಯ ವಾರಸುದಾರಿಕೆಗೆ ಸಂಬಂಧಿಸಿದಂತೆ ಮಹಿಳೆಯರ ಪರವಾಗಿ ಒಂದು ಬದಲಾವಣೆ ತಂದರು. ಅದೆಂದರೆ ಅದುವರೆಗಿನ ನಿಯಮದಲ್ಲಿ ಕೇವಲ ಮಗನಷ್ಟೆ ವಾರಸುದಾರನಾಗಿರುತ್ತಿದ್ದ. ಆದರೆ ಅಂಬೇಡ್ಕರರು ಅಂತಹ ವಾರಸುದಾರಿಕೆಗೆ ಮಗಳು, ವಿಧವೆ, ಈಗಾಗಲೇ ಮರಣ ಹೊಂದಿರುವಂತಹ ಮಗನ ವಿಧವಾ ಪತ್ನಿ ಇವರೆಲ್ಲರನ್ನು ಮಗನಷ್ಟೆ ಸಮಾನ ವಾರಸುದಾರಿಕೆಗೆ ತಂದರು. ಆ ಮೂಲಕ ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಪಾಲು ನೀಡಿದರು.

ಅಂದರೆ ತಂದೆಯ ಆಸ್ತಿಯಲ್ಲಿ ಮಗನಿಗೆ ಎಷ್ಟು ಸಿಗುತ್ತದೆಯೋ ಅದರ ಅರ್ಧದಷ್ಟು ಮಗಳಿಗೆ. ಈ ಸಂದರ್ಭದಲ್ಲಿ ಆ ಹೆಣ್ಣು ಮಗಳು ಮದುವೆಯಾಗಿದ್ದರೆ ಅಥವ ಮದುವೆಯಾಗದಿದ್ದರೆ? ಖಂಡಿತ, ಅದ್ಯಾವುದೂ ಅಡ್ಡಿ ಬರದಂತೆ ಮಗನ ಅರ್ಧದಷ್ಟು ಆಕೆ ಪಡೆಯುವಂತಾಯಿತು.

*ಆಸ್ತಿಗೆ ವಾರಸುದಾರರನ್ನು ಪಟ್ಟಿಮಾಡುವುದು
ಇನ್ನು ಈ ವಾರಸುದಾರಿಕೆಯಲ್ಲಿ, ಮೊದಲು ತಂದೆ ನಂತರ ತಾಯಿ ಎಂದಿತ್ತು. ಆದರೆ ಅಂಬೇಡ್ಕರರು ಮೊದಲು ತಾಯಿ ನಂತರ ತಂದೆ ಎಂದು ಬದಲಿಸಿದರು. ಈ ಸಂದರ್ಭದಲ್ಲಿ ಮಹಿಳೆಯರದೇ ಹೆಸರಿನಲ್ಲಿರುವ ಆಸ್ತಿ ಅಥವ ಸ್ತ್ರೀಧನಕ್ಕೆ ಸಂಬಂಧಿಸಿ ಅನೇಕ ವಾರಸುದಾರಿಕೆಯ ನಿಯಮಗಳಿದ್ದವು. ಅಂಬೇಡ್ಕರರು ಅವೆಲ್ಲವನ್ನು ಒಂದೇ ನಿಯಮದಡಿ ತಂದರು. ಹಾಗೆಯೇ ಹೇಗೆ ತಂದೆಯ ಆಸ್ತಿಯಲ್ಲಿ ಮಗಳಿಗೆ ಅರ್ಧದಷ್ಟು ಎಂದರೋ ಹಾಗೆಯೇ ಸ್ತ್ರೀಧನದಲ್ಲಿ ಮಗನಿಗೂ ಮಗಳ ಅರ್ಧದಷ್ಟು ಎಂದು ಬದಲಾವಣೆ ತಂದರು. ಅದುವರೆವಿಗೆ ಇದ್ದ ನಿಯಮವೆಂದರೆ ಗಂಡ ತೀರಿಹೋದರೆ ಆಸ್ತಿ ಆಕೆಯ ಗಂಡನ ಸಂಬಂಧಿಕರಿಗೆ ಹೋಗುತ್ತಿತ್ತು.

ಆದರೆ ಅಂಬೇಡ್ಕರರು ಅದನ್ನು ಆತನ ವಿಧವಾ ಪತ್ನಿಗಷ್ಟೆ ಎಂಬಂತೆ ಬದಲಾವಣೆ ತಂದರು. ಪತಿಯ ಸಂಬಂಧಿಕರಿಗೆ ಅದರಲ್ಲಿ ಯಾವುದೇ ಪಾಲೂ ಇಲ್ಲವೆಂಬ ನಿಯಮ ರೂಪಿಸಿದರು. ಈ ಸಮಯದಲ್ಲಿ ವರದಕ್ಷಿಣೆ ಬಗ್ಗೆಯೂ ಅಂಬೇಡ್ಕರರು ಒಂದು ನಿಯಮ ತಂದರು. ಅಂದರೆ ಅದನ್ನು ನಿಷೇಧಿಸಿದರು. ಆದರೂ ವರದಕ್ಷಿಣೆ, ಅದು ವಧುವಿನ ಆಸ್ತಿ. ಅದನ್ನು ಆಕೆಯ ಗಂಡನಾಗಲೀ ಆತನ ಸಂಬಂಧಿಕರಾಗಲೀ ಬಳಸುವಂತಿಲ್ಲ. ಬದಲಿಗೆ ಆಕೆಗೆ 18 ವರ್ಷ ತುಂಬಿದ ನಂತರ ಅದು ಆಕೆಯ ವಯಕ್ತಿಕ ಆಸ್ತಿಯಾಗುತ್ತದೆ ಎಂದರು.

*ಮಹಿಳೆಯರಿಗೆ ಜೀವನಾಂಶ
ಇನ್ನು ಜೀವನಾಂಶ; ಅದುವರೆಗೆ ಅಕಸ್ಮಾತ್ ಹೆಂಡತಿ ಗಂಡನಿಂದ ದೂರವಾಗಿ ಬದುಕುವಂತಾದರೆ ಆಕೆಗೆ ಜೀವನಾಂಶ ಸಿಗುತ್ತಿರಲಿಲ್ಲ. ಆದರೆ ಅಂಬೇಡ್ಕರರು ಜೀವನಾಂಶ ಸಿಗುವಂತೆ ಮಾಡಿದರು. ಅಲ್ಲದೆ ಅಂತಹ ಜೀವನಾಂಶದ ಸಂದರ್ಭವನ್ನು ಕೂಡ ಅವರು ಮಹಿಳೆಯ ಹಿತದೃಷ್ಟಿಯಿಂದ ಪಟ್ಟಿಮಾಡಿದರು.

ಅವುಗಳೆಂದರೆ :
*ಆತ ಅಸಹನೀಯ ರೋಗದಿಂದ ನರಳುತ್ತಿದ್ದರೆ.
*ಆತ ಇನ್ನೊಬ್ಬಳನ್ನು ಇಟ್ಟುಕೊಂಡಿದ್ದರೆ.
*ಆತ ಅತಿ ಕ್ರೂರನಾಗಿದ್ದರೆ.
*ಆತ ಅವಳನ್ನು ಬಿಟ್ಟು ಎರಡು ವರ್ಷಗಳು ಮೀರಿ ದೂರ ಇದ್ದರೆ.
*ಆತ ಬೇರೆ ಯಾವುದಾದರೂ ಧರ್ಮಕ್ಕೆ ಮತಾಂತರ ಹೊಂದಿದ್ದರೆ. ಅಥವಾ ಇನ್ನಾವುದಾದರೂ ನ್ಯಾಯಬದ್ಧ ಕಾರಣಗಳು.
*ಒಟ್ಟಾರೆ ಹೀಗೆ ಅಂಬೇಡ್ಕರರು ಮಹಿಳೆಗೆ ಕಾನೂನಾತ್ಮಕವಾಗಿ ಸ್ವಾತಂತ್ರ್ಯ ನೀಡಿದ್ದರು.

*ಮದುವೆ ಮತ್ತು ವಿಚ್ಛೇದನದ ಹಕ್ಕು
ಮುಂದುವರೆದು ಮದುವೆ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಅದುವರೆವಿಗೂ ಹಿಂದೂ ಕಾನೂನಿನಲ್ಲಿ ಸಾಕ್ರಮೆಂಟ್ ಅಥವ ಧಾರ್ಮಿಕ ಮದುವೆಗಷ್ಟೆ ಮಾನ್ಯತೆ ಇತ್ತು. ಸಿವಿಲ್ ಮ್ಯಾರೇಜ್ ಅಥವ ನಾಗರಿಕ ಮದುವೆಗೆ ಯಾವುದೇ ಮಾನ್ಯತೆ ಇರಲಿಲ್ಲ. ಹಾಗೆಯೇ ಧಾರ್ಮಿಕ ಮದುವೆಯಲ್ಲಿ ಜಾತಿ, ಉಪಜಾತಿ ನಮೂದಿಸುವುದು ಕಡ್ಡಾಯವಾಗಿತ್ತು. ಆದರೆ ಅಂಬೇಡ್ಕರರು ರೂಪಿಸಿದ ಮದುವೆಯ ಆ ನಿಯಮದಲ್ಲಿ ಜಾತಿ ಮತ್ತು ಉಪಜಾತಿ ಕಡ್ಡಾಯ ನಮೂದಿಸುವುದನ್ನು ಕೈಬಿಟ್ಟರು. ಪ್ರಾಪ್ತ ವಯಸ್ಕರಿದ್ದರೆ ಸಾಕು ಅವರು ಯಾವುದೇ ಜಾತಿ ಉಪಜಾತಿ ಇರಲಿ ಮದುವೆ ಸಿಂಧು ಎಂಬ ನಿಯಮ ರೂಪಿಸಿದರು.

ಅಂಬೇಡ್ಕರ್‍ ಅವರು ರಚಿಸಿದ "ಹಿಂದೂ ಕೋಡ್ ಬಿಲ್'' ಮುಖ್ಯವಾಗಿ 7 ಅಂಶಗಳನ್ನು ಒಳಗೊಂಡಿತ್ತು
ಸಂವಿಧಾನ ರಚನಾಸಭೆ, 1950ರಲ್ಲಿ

ಅಂದಹಾಗೆ ಅದುವರೆವಿಗೂ ಇದ್ದ ಧಾರ್ಮಿಕ ಮದುವೆ ಪದ್ಧತಿಯಲ್ಲಿ ವಿಚ್ಛೇದನಕ್ಕೆ ಅವಕಾಶ ಇರಲಿಲ್ಲ. ಆದರೆ ಅಂಬೇಡ್ಕರರು ವಿಚ್ಛೇದನಕ್ಕೆ ಅವಕಾಶ ನೀಡಿದರು. ಅದಕ್ಕೆ ಅವರು ಏಳು ಕಾರಣಗಳನ್ನು ನೀಡಿದರು.

ಅವುಗಳೆಂದರೆ:
*ಪತ್ನಿಯನ್ನು ಪರಿತ್ಯಜಿಸಿ ದೂರ ಇರುವುದು.
*ಬೇರೆ ಧರ್ಮಕ್ಕೆ ಮತಾಂತರ ಹೊಂದಿರುವುದು.
*ಬೇರೊಬ್ಬರನ್ನು ಇಟ್ಟುಕೊಂಡಿರುವುದು.
*ಗುಣಪಡಿಸಲಾಗದ ರೋಗದಿಂದ ನರಳುತ್ತಿರುವುದು.
*ಕುಷ್ಟರೋಗದಿಂದ ನರಳುತ್ತಿರುವುದು.
*ಅಂಟುರೋಗದಿಂದ ನರಳುತ್ತಿರುವುದು.
*ಕ್ರೂರತೆ.

*ಈ ಸಂದರ್ಭದಲ್ಲಿ ಮಹಿಳೆಯರಿಗೆ ಮದುವೆಯನ್ನೇ ರದ್ದುಗೊಳಿಸಿಕೊಳ್ಳುವ ನಿಯಮ ಕೂಡ ಅಂಬೇಡ್ಕರರು ಸೇರಿಸಿದರು. ಆ ಸಂದರ್ಭಗಳೆಂದರೆ,
*ನಪುಂಸಕತ್ವ
*ಸಪಿಂಡ
*ಮಾನಸಿಕ ಅಸ್ವಸ್ಥತೆ
*ಪೋಷಕರ ಬಲವಂತ

ಹಾಗೆಯೇ ಅದುವರೆಗೆ ಬಹುಪತ್ನಿತ್ವ ಜಾರಿಯಲ್ಲಿತ್ತು. ಆದರೆ ಅಂಬೇಡ್ಕರರು ಏಕಪತ್ನಿತ್ವ ನಿಯಮವನ್ನು ವಿವಾಹ ಕಾನೂನಿಗೆ ಸೇರಿಸಿದರು.

ಒಟ್ಟಾರೆ ಹೀಗೆ ಮಹಿಳೆಯರ ರಕ್ಷಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆಗಳನ್ನೊಳಗೊಂಡ ಮಸೂದೆಯನ್ನು ಅಂಬೇಡ್ಕರರು ರೂಪಿಸಿ ಸಂಸತ್ತಿನಲ್ಲಿ ಮಂಡಿಸಿದರು.

ಈ ಕಾನೂನುಗಳು, ಅಂಬೇಡ್ಕರರು ತಮ್ಮ ಆ ಕಾನೂನು ಮಂತ್ರಿ ಪದವಿಗೇ ರಾಜೀನಾಮೆ ನೀಡುವಂತಹ ಪರಿಸ್ಥಿತಿ ತಂದೊಡ್ಡಿತು ಮತ್ತು ಅಂಬೇಡ್ಕರರು ರಾಜೀನಾಮೆ ನೀಡಿದರು ಕೂಡ! ಆದರೂ ಈ ನಿಟ್ಟಿನಲ್ಲಿ ಅಂತಿಮವಾಗಿ 1955-56 ಸಮಯದಲ್ಲಿ ಅಂಬೇಡ್ಕರರು ರಾಜೀನಾಮೆ ಕೊಟ್ಟ 4 ವರ್ಷಗಳ ನಂತರ ಮಹಿಳೆಯರ ಹಕ್ಕುಗಳ ರಕ್ಷಣೆಯ ಬಾಬಾಸಾಹೇಬರು ರೂಪಿಸಿದ ಆ ಮಸೂದೆ ಅಂಗೀಕಾರವಾಯಿತು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಕೊಬ್ಬು ಮತ್ತು ಕೊಲೆಸ್ಟ್ರಾಲ್ ನಡುವಿನ ವ್ಯತ್ಯಾಸ

ಕೊಬ್ಬು ಮತ್ತು ಕೊಲೆಸ್ಟ್ರಾಲ್ ನಡುವಿನ ವ್ಯತ್ಯಾಸ

ಬಾಲಾಜಿ ಬಾಜಿ ರಾವ್

ಬಾಲಾಜಿ ಬಾಜಿ ರಾವ್, 8 ಡಿಸೆಂಬರ್ 1720 ರಂದು ಜನಿಸಿದ್ದು