in

ಗುಪ್ತ ಸಾಮ್ರಾಜ್ಯದ ಅತ್ಯಂತ ಶಕ್ತಿಶಾಲಿ ಚಕ್ರವರ್ತಿ : ಚಂದ್ರಗುಪ್ತ ವಿಕ್ರಮಾದಿತ್ಯ

ಚಂದ್ರಗುಪ್ತ ವಿಕ್ರಮಾದಿತ್ಯ
ಚಂದ್ರಗುಪ್ತ ವಿಕ್ರಮಾದಿತ್ಯ

ಸುವಿಖ್ಯಾತನಾದ ಎರಡನೇ ಚಂದ್ರಗುಪ್ತನು, ಇವನನ್ನು ವಿಕ್ರಮಾದಿತ್ಯ ಅಥವಾ ಚಂದ್ರಗುಪ್ತ ವಿಕ್ರಮಾದಿತ್ಯ ಎಂದು ಕರೆಯುತ್ತಾರೆ. ಗುಪ್ತ ಸಾಮ್ರಾಜ್ಯದ ಅತ್ಯಂತ ಶಕ್ತಿಶಾಲಿ ಚಕ್ರವರ್ತಿಗಳಲ್ಲಿ ಒಬ್ಬನು. ಇವನು ಕ್ರಿಶ್ತಶಕ ೩೭೫ ರಿಂದ ೪೧೩ ಅಥವಾ ೪೧೫ ರವರೆಗೆ ರಾಜ್ಯಭಾರ ಮಾಡಿದನು. ಈ ಅವಧಿಯಲ್ಲಿ ಗುಪ್ತ ಸಾಮ್ರಾಜ್ಯದ ವೈಭವವು ಅತ್ಯಂತ ಎತ್ತರದ ಮಟ್ಟ ಮುಟ್ಟಿತ್ತು. ಈ ಅವಧಿಯನ್ನು ಭಾರತದ ಸುವರ್ಣಯುಗ ಎಂದು ಕರೆಯುತ್ತಾರೆ. ಇವನು ಇವನಿಗಿಂತ ಮೊದಲು ರಾಜ್ಯವಾಳಿದ ಸಮುದ್ರಗುಪ್ತನ ಮಗನು. ಇವನು ಆಕ್ರಮಣ ಕಾರಿ ರಾಜ್ಯವಿಸ್ತರಣಾ ನೀತಿ ಮತ್ತು ಅನುಕೂಲಕರ ವಿವಾಹ ಸಂಬಂಧಗಳನ್ನು ಬೆಳೆಸುವ ಮೂಲಕ ಯಶಸ್ಸನ್ನು ಸಾಧಿಸಿದನು. ಇದರಲ್ಲಿ ಇವನಿಗೆ ತಂದೆ ಮತ್ತು ಅಜ್ಜ ಮಾದರಿ ಯಾಗಿದ್ದರು.

ಈತನ ವೈಯುಕ್ತಿಕ ಜೀವನದ ಬಗ್ಗೆ ಹೆಚ್ಚು ತಿಳಿದಿಲ್ಲವಾದರೂ, ತಾಯಿ ದತ್ತದೇವಿ ಸಮುದ್ರಗುಪ್ತನ ಪಟ್ಟದ ರಾಣಿಯಾಗಿದ್ದಳು. ಸಮುದ್ರಗುಪ್ತನ ಮರಣದ ಬಳಿಕ, ಚಂದ್ರಗುಪ್ತನ ಸೋದರ ರಾಮ ಗುಪ್ತನು ಸಿಂಹಾಸನವನ್ನೇರಿ ಚಂದ್ರಗುಪ್ತನ ವಧು ಧ್ರುವಸ್ವಾಮಿನಿಯನ್ನು ಬಲವಂತದಿಂದ ಮದುವೆಯಾದನು. ವಿಶಾಖದತ್ತನ ನಾಟಕ ದೇವಿ-ಚಂದ್ರಗುಪ್ತಂ ಆಧರಿಸಿ ಈ ಬಗೆಗಿನ ವಿವರಗಳನ್ನು ಬಹುತೇಕ ಒಪ್ಪಲಾಗಿದೆ. ಈ ನಾಟಕವು ಕಳೆದು ಹೋಗಿದ್ದು ಕೆಲವು ಭಾಗಗಳು ಬೇರೆ ಕೃತಿಗಳಲ್ಲಿ ಲಭ್ಯವಾಗಿವೆ.

ಇದೇ ತರಹದ ಕಥೆಯನ್ನು ವಿಕ್ರಮಾದಿತ್ಯ ಶಬ್ದದ ಅಪಭ್ರಂಶವನ್ನು ರಾಜನ ಹೆಸರಾಗಿ ಉಳ್ಳ ಅರೇಬಿಕ್ ಕೃತಿಯೂ ಒಂದಿದೆ. ವಿಕ್ರಮಾದಿತ್ಯನ ಹೆಸರು ಭಾರತದಲ್ಲಿ ದಂತಕಥೆ ಆಗಿದೆ. ಇಲ್ಲಿಯ ಜನಪ್ರಿಯ ಪಂಚಾಂಗವು ಚಾಂದ್ರಮಾನ ಪಂಚಾಂಗವಾಗಿದ್ದು ಈ ವಿಕ್ರಮನ ಹೆಸರಲ್ಲಿ ಇದೆ. ಭಾರತದ ಶ್ರೇಷ್ಠ ಕವಿ ಕಾಳಿದಾಸನು ಇವನ ಆಸ್ಥಾನದಲ್ಲಿ ಇದ್ದನು ಎಂದು ನಂಬಲಾಗಿದೆ.

ನಾಟ್ಯದರ್ಪಣದ ಒಂದು ಭಾಗವು ಚಂದ್ರಗುಪ್ತನ ಅಣ್ಣ ರಾಮಗುಪ್ತನು ಧ್ರುವಸ್ವಾಮಿನಿಯನ್ನು ಶಕ ರಾಜ ಮೂರನೇ ರುದ್ರಸಿಂಹನಿಂದ ಸೋತು ಅವನಿಗೆ ಒಪ್ಪಿಸಿದ್ದನ್ನು ಉಲ್ಲೇಖಿಸುತ್ತದೆ. ಕಳಂಕವನ್ನು ತೊಡೆದುಹಾಕಲು ಗುಪ್ತರು ಮಾಧವಸೇನ ಎಂಬ ಚಂದ್ರಗುಪ್ತನ ಆಪ್ತ ಹಾಗೂ ಆಸ್ಥಾನಿಕನನ್ನು ರಾಣಿಯ ವೇಷದಲ್ಲಿ ಕಳಿಸಲು ತೀರ್ಮಾನಿಸಿದರು. ಚಂದ್ರಗುಪ್ತನು ಯೋಜನೆಯನ್ನು ಬದಲಿಸಿ ತಾನೇ ರಾಣಿಯ ವೇಷದಲ್ಲಿ ಶಕರಾಜ ರುದ್ರಸಿಂಹನ ಬಳಿಗೆ ಹೋಗಿ ಅವನನ್ನು, ನಂತರ ಸೋದರ ರಾಮಗುಪ್ತನನ್ನು ಕೊಂದನು. ಧ್ರುವ ಸ್ವಾಮಿನಿಯು ನಂತರ ಚಂದ್ರಗುಪ್ತನನ್ನು ಮದುವೆಯಾದಳು.

ಗುಪ್ತ ಸಾಮ್ರಾಜ್ಯದ ಅತ್ಯಂತ ಶಕ್ತಿಶಾಲಿ ಚಕ್ರವರ್ತಿ : ಚಂದ್ರಗುಪ್ತ ವಿಕ್ರಮಾದಿತ್ಯ
ಎರಡನೇ ಚಂದ್ರಗುಪ್ತ

ಈ ಘಟನೆಗಳನ್ನು ಚಿತ್ರಿಸುವಾಗ ವಿಶಾಖದತ್ತನು ಎಷ್ಟು ಸ್ವಾತಂತ್ರ್ಯ ವಹಿಸಿದನು ಎಂಬುದು ನಮಗೆ ಗೊತ್ತಿಲ್ಲ. ಆದರೆ ಧ್ರುವಸ್ವಾಮಿನಿ ರಾಜನ ಪಟ್ಟ ಮಹಿಷಿ ಇದ್ದ ಬಗ್ಗೆ ಮತ್ತು, ಮಹಾದೇವಿ ಧ್ರುವದೇವಿ ಎಂಬ ಉಲ್ಲೇಖಗಳು ಶಾಸನಗಳಲ್ಲಿ, ಮುದ್ರೆಗಳಲ್ಲಿ ನಮಗೆ ಸಿಕ್ಕಿವೆ. ರಾಮಗುಪ್ತನ ಹೆಸರೂ ಕೆಲವು ಶಾಸನಗಳಲ್ಲಿ ಮತ್ತು ನಾಣ್ಯಗಳಲ್ಲಿ ಇವೆ.

ಕುಬೇರನಾಗ ಎಂಬ ನಾಗಕುಲದ ರಾಜಕುಮಾರಿಯೊಂದಿಗೆ ಎರಡನೇ ಚಂದ್ರಗುಪ್ತನ ಮದುವೆ ಆದ ಬಗ್ಗೆ ಅಲಹಾಬಾದ್ ನಲ್ಲಿರುವ ಕಂಬದಲ್ಲಿ ಬರೆಯಲಾಗಿದೆ. ಇವನ ಬಗ್ಗೆ ಮಥುರಾ ದಲ್ಲಿರುವ ಕಂಬವೊಂದನ್ನು ಕ್ರಿ.ಶ.೩೨೮ ರದ್ದು ಎಂದು ತೀರ್ಮಾನಿಸಲಾಗಿದೆ. ಕುಬೇರನಾಗ ಮತ್ತು ಚಂದ್ರಗುಪ್ತರ ಮಗಳು ಪ್ರಭಾವತಿ ವಾಕಾಟಕದ ಬಲಿಷ್ಠ ರಾಜ ಎರಡನೇ ರುದ್ರಸೇನನನ್ನು ಮದುವೆ ಆದಳು.

ಗುಜರಾತ್ ನಲ್ಲಿನ ರಾಜ ಶಕ-ಕ್ಷತ್ರಪ ವಂಶದ ಮೂರನೇ ರುದ್ರಸೇನ ನನ್ನು ಸೋಲಿಸಿ ಅವರ ರಾಜ್ಯವನ್ನು ವಶಪಡಿಸಿಕೊಂಡದ್ದು ಇವನ ಮಹತ್ವದ ಸಾಧನೆ ಯಾಗಿದೆ. ಅವನ ಅಳಿಯ ಎರಡನೇ ರುದ್ರಸೇನ ಆಕಸ್ಮಿಕವಾಗಿ ಸತ್ತು ಪ್ರಭಾವತಿಗುಪ್ತನು ತನ್ನ ಎರಡು ಮಕ್ಕಳ ಪರವಾಗಿ ರಾಜ್ಯ ಆಳಿದನು. ಈ ಇಪ್ಪತ್ತೆರಡು ವರ್ಷದ ಆಳಿಕೆಯಲ್ಲಿ ವಾಕಾಟಕವು ಬಹುಮಟ್ಟಿಗೆ ಗುಪ್ತ ಸಾಮ್ರಾಜ್ಯದ ಭಾಗವಾಗಿತ್ತು.

ವಾಕಾಟಕದ ಭೌಗೋಳಿಕ ಸ್ಥಾನವನ್ನು ಬಳಸಿಕೊಂಡು ಪಶ್ಚಿಮದ ಕ್ಷತ್ರಪರನ್ನು ಶಾಸ್ವತವಾಗಿ ಸೋಲಿಸಿದನು. ಅನೇಕ ಇತಿಹಾಸಕಾರರು ಈ ಅವಧಿಯನ್ನು ವಾಕಾಟಕ-ಗುಪ್ತ ಯುಗ ಎಂದು ಕರೆಯುತ್ತಾರೆ. ಗಂಗಾ ನದೀಮುಖದಿಂದ ಸಿಂಧೂ ನದೀಮುಖದವರೆಗೆ ಮತ್ತು ಇವತ್ತಿನ ಉತ್ತರ ಪಾಕಿಸ್ತಾನದಿಂದ ನರ್ಮದಾ ನದಿಯವರೆಗಿನ ವಿಶಾಲವಾದ ಭೂಭಾಗವನ್ನು ಚಂದ್ರಗುಪ್ತನು ತನ್ನ ಹಿಡಿತದಲ್ಲಿರಿಸಿಕೊಂಡಿದ್ದನು.

ಪಾಟಲೀಪುತ್ರವು ಅವನ ಸಾಮ್ರಾಜ್ಯದ ರಾಜಧಾನಿಯಾಗಿ ಮುಂದುವರೆಯಿತು. ಉಜ್ಜಯಿನಿ ಎರಡನೇ ರಾಜಧಾನಿಯಂತಿತ್ತು. ಗುಪ್ತ ವಂಶದ ಸುಂದರ ಬಂಗಾರದ ನಾಣ್ಯಗಳ ಬಾಹುಳ್ಯವು ಆ ಯುಗದ ವೈಭವಕ್ಕೆ ಸಾಕ್ಷಿಯಾಗಿದೆ. ಎರಡನೇ ಚಂದ್ರಗುಪ್ತನು ಶಕಪದ್ಧತಿಯಂತೆ ಬೆಳ್ಳಿಯ ನಾಣ್ಯಗಳನ್ನು ಹೊರತರಲು ಆರಂಭಿಸಿದನು.

ಗುಪ್ತ ಸಾಮ್ರಾಜ್ಯದ ಅತ್ಯಂತ ಶಕ್ತಿಶಾಲಿ ಚಕ್ರವರ್ತಿ : ಚಂದ್ರಗುಪ್ತ ವಿಕ್ರಮಾದಿತ್ಯ
ಬೆಳ್ಳಿಯ ನಾಣ್ಯ

ಫಾಹಿಯಾನ್ ನು ಭಾರತವನ್ನು ಕ್ರಿ.ಶ. ಐದನೇ ಮತ್ತು ಏಳನೇ ಶತಮಾನಗಳ ನಡುವೆ ಜ್ಞಾನವನ್ನರಸಿ ಭಾರತಕ್ಕೆ ಭೇಟಿ ನೀಡಿದ ಮೂವರು ಯಾತ್ರಿಗಳಲ್ಲಿ ಒಬ್ಬನು. ಅವನು ಭಾರತಕ್ಕೆ ಬಂದಾಗ ಎರಡನೇ ಚಂದ್ರಗುಪ್ತನು ಉತ್ತರ ಭಾರತವನ್ನು ಆಳುತ್ತಿದ್ದನು. ಮರಣದಂಡನೆಯ ಶಿಕ್ಷೆ, ಭೂಕಂದಾಯ ಇಲ್ಲದೆ ಇರುವುದರ ಬಗ್ಗೆ ಮತ್ತು ಇನ್ನೂ ಕೆಲ ವಿಷಯಗಳ ಬಗ್ಗೆ ಅವನು ವರದಿ ಮಾಡಿದ್ದಾನೆ. ಬಹುತೇಕ ನಾಗರಿಕರು ಈರುಳ್ಳಿ, ಬೆಳ್ಳುಳ್ಳಿ, ಮದ್ಯ ಮಾಂಸ ಸೇವಿಸುತ್ತಿರಲಿಲ್ಲ.

ಸಾಂಸ್ಕೃತಿಕವಾಗಿ ಎರಡನೇ ಚಂದ್ರಗುಪ್ತನ ಆಳ್ವಿಕೆಯ ಕಾಲವು ಸುವರ್ಣಯುಗವಾಗಿತ್ತು. ಅವನ ಆಸ್ಥಾನದಲ್ಲಿ ನವರತ್ನಗಳು ಎಂದು ಹೆಸರಾದ ಒಂಬತ್ತು ಜನರು ಇದ್ದರು ಎಂದು ಹೇಳಲಾಗಿದೆ. ಅವರಲ್ಲಿ ಕಾಳಿದಾಸನು ಅವರಲ್ಲಿ ಶ್ರೇಷ್ಠನಾದವನು. ‘ಅಭಿಜ್ಞಾನ ಶಾಕುಂತಲ’ ಸೇರಿದಂತೆ ಅನೇಕ ಅಮರ ಕೃತಿಗಳನ್ನು ಅವನು ರಚಿಸಿ ದ್ದಾನೆ. ಸುಪ್ರಸಿದ್ಧ ಖಗೋಲಶಾಸ್ತ್ರಜ್ಞ ಮತ್ತು ಗಣಿತಜ್ಞನಾದ ವರಾಹಮಿಹಿರನು ನವರತ್ನಗಳಲ್ಲಿ ಇನ್ನೊಬ್ಬನು.

ದೀಪಾವಳಿಯ ಮರುದಿನವಾದ ಪ್ರತಿಪದೆಯ ದಿನ ವಿಕ್ರಮಾದಿತ್ಯನು ಪಟ್ಟಕ್ಕೆ ಏರಿದನು. ಆ ದಿನವನ್ನು ವರ್ಷಪ್ರತಿಪದೆ ಎಂದೂ ಕರೆಯುತ್ತಾರೆ. ವಿಕ್ರಮಶಕೆಯು ಈ ದಿನ ಆರಂಭವಾಯಿತು. ಈ ದಿನವನ್ನು ಹೊಸವರ್ಷದ ಆರಂಭ ಎಂದು ಕೆಲವು ಕಡೆ ಆಚರಿಸುವರು.

ದೆಹಲಿಯ ಕುತುಬ್ ಮಿನಾರ್ ನ ಹತ್ತಿರವೇ ನಾಲ್ಕನೇ ಶತಮಾನದ ಒಂದು ಸ್ತಂಭವಿದೆ. ವಿಷ್ಣು ದೇವರ ಗೌರವಾರ್ಥ ಮತ್ತು ಎರಡನೇ ಚಂದ್ರಗುಪ್ತನ ನೆನಪಿನಲ್ಲಿ ಈ ಸ್ತಂಭವನ್ನು ನಿಲ್ಲಿಸಿದುದಾಗಿ ಅದರ ಮೇಲೆ ಬರೆದಿದೆ. ಲೋಹಶಾಸ್ತ್ರದಲ್ಲಿ ಪುರಾತನ ಭಾರತದ ಸಾಧನೆಯನ್ನು ಇದು ಮೆರೆಯಿಸುತ್ತದೆ. ಉಕ್ಕಿನ ಈ ಕಂಭವು ೧೬೦೦ ವರ್ಷಗಳಾದರೂ ತುಕ್ಕು ಹಿಡಿಯದೆ ಹಾಳಾಗದೆ ನಿಂತಿದೆ. ಇದು ಉತ್ತರಭಾರತದಲ್ಲಿ ಹಲವೆಡೆ ಕಾಣಸಿಗುವ ಅಶೋಕಸ್ತಂಭಗಳ ಹಾಗೆ ಇದೆ.

ವಿಕ್ರಮಾದಿತ್ಯ ರಾಜನ ಬಗ್ಗೆ ಅನೇಕ ಕುತೂಹಲಕರ ಕತೆಗಳು ಭಾರತದಲ್ಲಿವೆ.

ರಘು ಎಂದು ಹೆಸರಾದ ಚಂದ್ರಗುಪ್ತ ವಿಕ್ರಮಾದಿತ್ಯನು ಭಾರತದ ಒಳಗಿನ ಮತ್ತು ಹೊರಗಿನ ಇಪ್ಪತ್ತೊಂದು ರಾಜ್ಯಗಳನ್ನು ಗೆದ್ದನು ಎಂದು ಕಾಳಿದಾಸನು ಹೇಳಿದ್ದಾನೆ. ಪೂರ್ವ, ಪಶ್ಚಿಮ ಮತ್ತು ದಕ್ಷಿಣ ದಿಕ್ಕ್ಕುಗಳಲ್ಲಿನ ದಂಡಯಾತ್ರೆಯ ನಂತರ ಉತ್ತರಕ್ಕೆ ನಡೆದು ಪಾರಸಿಕರು, ಹೂಣರು ಮತ್ತು ಕಾಂಬೋಜ ರನ್ನು ಸೋಲಿಸಿದನು. ನಂತರ ಅವನು ಹಿಮಾಲಯವನ್ನು ದಾಟಿ ದಾಚೆ ಕಿನ್ನರ, ಕಿರಾತರ ರಾಜ್ಯಗಳನ್ನು ಭಾರತದೊಳಕ್ಕೆ ಸೇರಿಸಿದನು.

ಕಾಶ್ಮೀರದ ಪಂಡಿತ ಕ್ಷೇಮೇಂದ್ರನ “ಬೃಹತ್ ಕಥಾ ಮಂಜರಿ”ಯ ಪ್ರಕಾರ ಅವನು ” ಶಕ, ಮ್ಲೇಚ್ಛ, ಕಾಂಬೋಜ, ಯವನ, ತುಷಾರ, ಪಾರಸಿಕ ಮುಂತಾದ ಅನಾಗರಿಕರನ್ನು ನಿರ್ನಾಮ ಮಾಡಿ ಭೂಭಾರ ತಗ್ಗಿಸಿದನು”.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

4 Comments

  1. Regionale Persönlichkeiten aus Politik, Wirtschaft und
    Sport verkaufen Glückstaler, die zur Teilnahme an verschiedenen Attraktionen berechtigen. Das Casino bietet Werkzeuge für Selbstsperre und Limits sowie
    Partnerschaften mit Organisationen wie der BZgA für
    Unterstützung. Obwohl es keine Online-Optionen oder Boni gibt, bietet der physische Standort in Bayern ein einzigartiges und fesselndes Erlebnis für die Besucher.

    Neulinge können in den Spaß eintauchen mit einem Willkommensbonus, der nicht näher spezifiziert ist, aber wir wissen,
    dass er online nicht verfügbar ist, da es sich um
    ein stationäres Casino handelt. Kommen Sie und entdecken Sie das
    ultimative Spielerlebnis in der Spielbank Bad Kissingen – wo Aufregung auf Zuverlässigkeit trifft!
    Mit mobil-optimiertem Gameplay können Sie unser umfangreiches Spielangebot unterwegs genießen, egal ob Roulette, Blackjack,
    Poker oder unsere große Auswahl an Spielautomaten. Unser reaktionsschnelles Support-Team steht
    Ihnen rund um die Uhr zur Verfügung, um alle Fragen oder Anliegen zu klären und
    ein unübertroffenes Serviceniveau zu bieten. Als vertrauenswürdiges und zuverlässiges Ziel für Abenteuerlustige bieten wir zuverlässige Auszahlungen, damit Sie
    Ihre Gewinne schnell erhalten. Erleben Sie das ultimative Spielerlebnis in der Spielbank Bad Kissingen!

    References:
    https://online-spielhallen.de/izzi-casino-deutschland-ein-tiefenblick-in-das-online-glucksspiel/

  2. Yes, they work identically across desktop and mobile versions.
    PayID and eZeeWallet payouts arrive within 24 hours for verified
    accounts. Register, verify your email, and the bonus is added automatically.

    A Big Candy Casino is the perfect mix of fun, security, and rewarding play.

    This collection ensures that both beginners and experts can engage with
    familiar and exotic games alike. Whether you enjoy
    timeless roulette or innovative themed slots like Temple Totems, the Big
    Candy casino manages to cover all preferences. Each section brings unique flavours,
    ensuring variety for every style of player. In terms of licensing, the casino operates under
    internationally recognised gaming regulations.
    The game lobby is categorized into sections, making it easy for players to browse through
    titles quickly. Therefore, players can expect a wide game collection with plenty
    of alternatives to suit all kinds of players’ needs. Head over to A Big Candy Casino and play hundreds of the best RTG games for free or real money, take advantage of plenty of
    promotions, and do all this from your home or on the
    go!

    References:
    https://blackcoin.co/luck-nation-casino-real-money-pokies-australia/

  3. What this casino lacks in quantity, it makes up for in quality.

    Gaming choices are limited, although those who love poker will not be disappointed.

    Casino Canberra is certainly not the biggest gaming establishment in Australia.

    As players earn more points by playing at the casino, they rise through
    membership levels and receive more benefits.

    Special room rates are available for those visiting the casino.
    Casino Canberra has two bars where you can enjoy drinks,
    snacks, and great times. However, with this table game you get five cards
    and so does the dealer. Unlike regular poker where you
    compete against other players, with Canberra Poker you play against
    the dealer.
    Casino Canberra is a European-style tables game casino with
    bars, restaurants and a nightclub. Book your table now and make this Christmas in July a truly
    magical experience at the Canberra Casino. Located on the main floor—onyx
    lounge features access to the main bar and gaming tables all in front of the big
    screen Also featured in the gaming room are the casino’s blackjack tournaments,
    which are held over two days. In that way, it’s like blackjack
    and many other table games. The casino has managed to more than double its current terminals to 50,
    in order to create a “multi-terminal” stadium for gaming.

    References:
    https://blackcoin.co/stake-casino-australia-where-online-thrills-begin/

ಕಾಡು ಮಲ್ಲೇಶ್ವರ ದೇವಾಲಯ

ಮಲ್ಲೇಶ್ವರಂನಲ್ಲಿರುವ ಕಾಡು ಮಲ್ಲೇಶ್ವರ ದೇವಾಲಯ

ಇಂದಿನಿಂದ 2030 ರವರೆಗೆ ಏಳು ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆ ಶುರು.

ಇಂದಿನಿಂದ 2030 ರವರೆಗೆ ಏಳು ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆ ಶುರು.