in

ಝಾನ್ಸಿ ರಾಣಿ ಲಕ್ಷ್ಮೀಬಾಯಿ

ಝಾನ್ಸಿ ರಾಣಿ ಲಕ್ಷ್ಮೀಬಾಯಿ
ಝಾನ್ಸಿ ರಾಣಿ ಲಕ್ಷ್ಮೀಬಾಯಿ

ಸ್ವಾತಂತ್ಯ ಹೋರಾಟದಲ್ಲಿ ಹೋರಾಡಿದ ಇನ್ನೊಬ್ಬ ವೀರ ಮಹಿಳೆ ಝಾನ್ಸಿ ರಾಣಿ ಲಕ್ಷ್ಮೀಬಾಯಿ. ಈಕೆಯ ಬಗ್ಗೆ ನಾವು ಪಠ್ಯ ಪುಸ್ತಕದಲ್ಲಿ ಕೂಡಾ ಓದಿರುತ್ತೇವೆ.

ಝಾನ್ಸಿ ರಾಣಿ ಲಕ್ಷ್ಮೀಬಾಯಿಯವರ ಕಾಲ 19, ನವೆಂಬರ್ 1829___17, ಜೂನ್ 1858, ಇವರು ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು 1857 ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್‌ಗೆ ಪ್ರತಿರೋಧದ ಸಂಕೇತವಾಯಿತು.

ಝಾನ್ಸಿ ರಾಣಿ ಲಕ್ಷ್ಮೀಬಾಯಿ
ಝಾನ್ಸಿ ರಾಣಿ ಲಕ್ಷ್ಮೀಬಾಯಿ

ಕಾಶಿ ವಾರಣಾಸಿ ಒಂದು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು ಲಕ್ಷ್ಮೀಬಾಯಿ. ಮಣಿಕರ್ಣಿಕ ಅವರ ನಿಜವಾದ ಹೆಸರಾಗಿದ್ದು ಅವರನ್ನು ಮನು ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಲಕ್ಷ್ಮೀಬಾಯಿರವರು 8 ವರ್ಷದವರಾಗಿರುವಾಗ ಅವರ ತಾಯಿ ಮರಣಹೊಂದಿದರು. ಅವರ ಶಿಕ್ಷಣ ಮನೆಯಲ್ಲಿ ನಡೆಯಿತು. ತಂದೆ ಮೊರೋಪಂತ್ ತಂಬೆಯವರು ಪೆಶ್ವೆಯವರ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದರು ಹಾಗು ಮುಂದೆ ಲಕ್ಷ್ಮೀಬಾಯಿಯವರಿಗೆ 13 ವರ್ಷದವರಾಗಿರುವಾಗ ಝಾನ್ಸಿಯ ಮಹಾರಾಜ ರಾಜ ಬಾಲಗಂಗಾಧರ ರಾವ್ ಅವರ ಆಸ್ಥಾನದಲ್ಲಿ ಸೇರಿದರು. ಮುಂದೆ ಲಕ್ಷ್ಮೀಬಾಯಿಯವರಿಗೆ 14ವರ್ಷವಾದಾಗ ಮಹಾರಾಜ ರಾಜ ಬಾಲಗಂಗಾಧರ ರಾವ್ ಅವರನ್ನು ಮದುವೆಯಾದರು ಹಾಗು ಅವರ ಹೆಸರನ್ನು ಲಕ್ಷ್ಮೀಬಾಯಿ ಎಂದು ಬದಲಾಯಿಸಲಾಯಿತು. ಲಕ್ಷ್ಮೀಬಾಯಿ ಕುದುರೆ ಸವಾರಿ,ಕತ್ತಿವರಸೆ,ಬಿಲ್ವಿದ್ಯೆ ಯನ್ನು ತನ್ನ ಸ್ವಂತಿಕೆಯಿಂದ ಕಲಿತರು ಹಾಗು ಆಸ್ಥಾನದ ತನ್ನ ಸ್ತ್ರೀಮಿತ್ರರನ್ನು ಸೇರಿಸಿ ಚಿಕ್ಕ ಸೈನ್ಯವನ್ನು ಕಟ್ಟಿದರು ಲಕ್ಷ್ಮೀಬಾಯಿ. 1851ರಲ್ಲಿ ಲಕ್ಷ್ಮೀಬಾಯಿಯವರು ಗಂಡುಮಗುವಿಗೆ ಜನ್ಮವಿತ್ತರು. ಆದರೆ ಆ ಮಗು, 4 ತಿಂಗಳಿರುವಾಗ ಮರಣವಪ್ಪಿತು. ತಮ್ಮ ಮೊದಲನೆಯ ಮಗುವಿನ ಮರಣದ ನಂತರ ಅವರು ದಾಮೋದರ ರಾವ್ಅವರನ್ನು ದತ್ತು ಪಡೆದರು. ಆದರೆ ತನ್ನ ಮಗನ ಸಾವಿನ ದುಃಖದಿಂದ ಹೊರಬರಲಾರದ ಮಹಾರಾಜ ರಾಜ ಬಾಲಗಂಗಾಧರ ರಾವ್ 21, ನವೆಂಬರ್ 1853ರಲ್ಲಿ ಹೃದಯಾಘಾತದಿಂದ ಸಾವಿಗೀಡಾದರು.
ದಾಮೋದರ ರಾವ್ ರವರು ರಾಜನಿಗೆ ರಕ್ತಸಂಬಂಧಿ ಅಲ್ಲದಿದ್ದರಿಂದ ಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿಯ ಲಾರ್ಡ್ ಡಾಲ್‌ಹೌಸಿಯು ದಾಮೋದರ ರಾವ್ ಅವರಿಗೆ ರಾಜಾಭಿಶೇಕ ಮಾಡಲು ಬಿಡಲಿಲ್ಲ. ಲಾರ್ಡ್ ಡಾಲ್‌ಹೌಸಿಯು ಝಾನ್ಸಿಯ ರಕ್ಷಣೆ ಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿಯ ಜವಾಬ್ಡಾರಿಯೆಂದು ರಾಣಿ ಲಕ್ಷ್ಮೀಬಾಯಿಯವರಿಗೆ ರುಪಾಯಿ 60,000ಪಿಂಚಣಿ ಹಣವನ್ನು ಕೊಟ್ಟು ಝಾನ್ಸಿಕೊಟೆಯನ್ನು ಬಿಟ್ಟು ಹೊಗಲು ಆಜ್ಞೆ ಮಾಡಿದನು.

ಝಾನ್ಸಿಯಲ್ಲಿ ಇದೆಲ್ಲಾ ನಡೆಯುತ್ತಿರುವಾಗ ಮೇ 10,1857 ರಲ್ಲಿ ಮೀರತ್ನಲ್ಲಿ ಸಿಪಾಯಿ ಬಂಡಾಯ ಶುರುವಾಯಿತು. ಸಿಪಾಯಿಗಳ ಮನದಲ್ಲಿ ಅವರು ಉಪಯೋಗಿಸುವ ತೋಪಿಗೆ ದನದ ಅಥವಾ ಹಂದಿಯ ಕೊಬ್ಬನ್ನು ಸವರಿದ್ದಾರೆಯೆಂದು ತಿಳಿದು ಅದೇ ದಂಗೆಗೆ ಮುಖ್ಯಕಾರಣವಾಯಿತು. ಮುಸ್ಲಿಮರಿಗೆ ಹಂದಿ ನಿಷೇಧವಾಗಿದ್ದರಿಂದ ಹಾಗೂ ಹಿಂದೂಗಳಿಗೆ ದನ ಪವಿತ್ರವಾದುದರಿಂದ ಸೈನಿಕರು ದಂಗೆಯೆದ್ದರು. ದಂಗೆಯಲ್ಲಿ ಬಹಳಸ್ಟು ಬ್ರಿಟಿಷ್ ಸೈನಿಕರು ಹಾಗೂ ಅಧಿಕಾರಿಗಳು ಸಾವಿಗೀಡಾದರಿಂದ ಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿ ಈ ದಂಗೆಯನ್ನು ಆದಸ್ಟು ಬೇಗ ನಿಲ್ಲಿಸಲು ತಯಾರಿ ನಡೆಸಿದರು.

1857ರಲ್ಲಿ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭವಾಯಿತು ಹಾಗೂ ಭಾರತದ ಎಲ್ಲ ಕಡೆ ಹರಡಿತು. ಇದೇ ಸಮಯದಲ್ಲಿ ಬ್ರಿಟಿಷರಿಗೆ ದೇಶದ ಇತರೆ ಪ್ರದೇಶಗಳ ಬಗ್ಗೆ ಹೆಚ್ಚು ಜಾಗರೂಕರಾಗಿ ಇರಬೇಕಾಗಿತ್ತು. ಝಾನ್ಸಿಯನ್ನು ರಾಣಿ ಲಕ್ಷ್ಮೀಬಾಯಿಯವರ ಆಳ್ವಿಕೆಗೆ ಬಿಟ್ಟರು. ಇದೇ ಸಮಯದಲ್ಲಿ ರಾಣಿ ಲಕ್ಷ್ಮೀಬಾಯಿಯ ಶ್ರೇಷ್ಠತೆಯು ರುಜುವಾತಾಯಿತು. ರಾಣಿ ಲಕ್ಷ್ಮೀಬಾಯಿಯವರ ನಾಯಕತ್ವದಲ್ಲಿ ಝಾನ್ಸಿಯಲ್ಲಿ ಶಾಂತಿ ಹಾಗು ನೆಮ್ಮದಿ ನೆಲೆಸಿ ಅವರೊಬ್ಬ ಉತ್ತಮ ನಾಯಕಿ ಎಂದು ಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿಯ ಸಹಿತ ಝಾನ್ಸಿಯ ಪ್ರಜೆಗಳ ಮನದಲ್ಲಿ ನೆಲೆಸಿದರು.

ಈ ಸಮಯದಲ್ಲಿ ರಾಣಿ ಲಕ್ಷ್ಮೀಬಾಯಿಯವರು ಬ್ರಿಟಿಷರಿಗೆ ವಿರುದ್ದವಾಗಿ ಹೋಗುವ ಯೋಚನೆಯಲ್ಲಿ ಇರಲಿಲ್ಲ, ಆದರೆ ಸರ್ ಹುಘ್ ರೋಸ್ ಅವರ ನೇತ್ರತ್ವದ ಸೈನ್ಯ ಝಾನ್ಸಿಯನ್ನು 28 ಮಾರ್ಚ್ 1858ರಂದು ಮುತ್ತಿಗೆ ಹಾಕ್ಕಿದ್ದರಿಂದ ರಾಣಿ ಲಕ್ಷ್ಮೀಬಾಯಿಯವರ ಬ್ರಿಟಿಷರ ಬಗೆಗಿನ ನಿಲುವು ಬದಲಾಯಿತು. ರಾಣಿ ಲಕ್ಷ್ಮೀಬಾಯಿ ಹಾಗೂ ಅವರ ನಿಷ್ಠಾವಂತ ಸೈನಿಕರು ಶರಣಾಗಲು ಒಪ್ಪಲಿಲ್ಲ. ಎರಡು ವಾರಗಳವರೆಗೆ ಉಗ್ರ ಹೊರಾಟ ನಡೆಸಿದರು. ಝಾನ್ಸಿಯ ಸ್ತ್ರೀಸೈನಿಕರು ಕೂಡಾ ಯುದ್ಧಸಾಮಗ್ರಿ ಹಾಗೂ ಸೇನಾನಿಗಳಿಗೆ ಭೋಜನದ ವ್ಯವಸ್ತೆ ಮಾಡುತ್ತಿದ್ದರು.

ಝಾನ್ಸಿ ರಾಣಿ ಲಕ್ಷ್ಮೀಬಾಯಿ
ಝಾನ್ಸಿ ರಾಣಿ ಲಕ್ಷ್ಮೀಬಾಯಿ

ರಾಣಿ ಲಕ್ಷ್ಮೀಬಾಯಿ ಸ್ವತಃ ಸೈನಿಕರ ನಡುವಿನಲ್ಲಿ ಓಡಾಡಿಕೊಂದದು ಅವರನ್ನು ಹುರಿದುಂಬಿಸಿ ಬಹಳ ದಿಟ್ಟತನದಿಂದ ಹೋರಾಡಿದಳು. 2೦,೦೦೦ ಜನರ ಸೇನೆಯನ್ನು ದಂಗೆಕೋರ ತಾತ್ಯಾ ಟೊಪಿ ಮುಖಂಡನಾಗಿ ಯುದ್ದ ಮಾಡಿ ರಾಣಿ ಲಕ್ಷ್ಮೀಬಾಯಿ ಹಾಗೂ ಝಾನ್ಸಿಯ ಸ್ವತಂತ್ರವಾಗಲು ಸಹಾಯ ಮಾಡಿದ. ಆದರೆ ಕೇವಲ 1540ರ ಸಂಖ್ಯೆಯಲ್ಲಿದ್ದ ಬ್ರಿಟಿಷ್ ಸೈನಿಕರು 31, ಮಾರ್ಚ್ ನಂದು ಆಕ್ರಮಣ ಮಾಡಿದಾಗ ಅಷ್ಟೇನೂ ಅನುಭವಿ ಅಲ್ಲದ ಝಾನ್ಸಿಯ ಸೈನಿಕರಿಂದ 3ದಿನಗಳಿಂದ ಜಾಸ್ತಿ ಹೊರಾಟ ನಡೆಸಲು ಆಗಲಿಲ್ಲ, ಹಾಗೂ ಬ್ರಿಟಿಷ್ ಸೈನಿಕರು ಝಾನ್ಸಿ ನಗರವನ್ನು ಮುತ್ತಿಗೆ ಹಾಕಿದರು. ಅದೇ ಸಮಯದಲ್ಲಿ ರಾಣಿ ಲಕ್ಷ್ಮೀಬಾಯಿ ಕೋಟೆಯ ಗೋಡೆಯನ್ನು ರಾತ್ರಿಯಲ್ಲಿ ತನ್ನ ಕೆಲವು ಮಹಿಳಾ ಸೈನಿಕರು ಹಾಗೂ ರಕ್ಷಕರ ಜೊತೆಗೆ ಸೇರಿ ತಪ್ಪಿಸಿಕೊಂಡಳು.

ತನ್ನ ಮಗ ದಾಮೋದರ ರಾವ್ ಜೊತೆಗೆ ಸೇರಿ ಕಲ್ಪಿ ಎಂಬಲ್ಲಿ ತಲೆಮರೆಸಿ ಕೊಂಡಳು. ಹಾಗೂ ಅಲ್ಲಿಯೇ ತಾತ್ಯಾ ಟೊಪಿ ಹಾಗೂ ಇತರ ದಂಗೆಕೋರರ ಜೊತೆಗೆ ತನ್ನ ಸೈನ್ಯವನ್ನು ಸೇರಿಸಿದಳು. ರಾಣಿ ಹಾಗೂ ತಾತ್ಯಾ ಟೊಪಿ ಗ್ವಾಲಿಯರ್ಗೆ ಹೋಗಿ ಅಲ್ಲಿನ ಮಹಾರಾಜನ ಸೈನಿಕರನ್ನು ಇವರ ದಂಗೆಕೋರರ ಗುಂಪು ಸೋಲಿಸಿತು. ನಂತರ ಅವರು ಗ್ವಾಲಿಯರ್ ಕೋಟೆಯನ್ನು ವಶಪಡಿಸಿಕೊಂಡರು. ಆದರೆ ಯುದ್ದದ 2 ನೆಯ ದಿನ ಅಂದರೆ 18 , ಜೂನ್1858 ರಂದು ರಾಣಿ ಲಕ್ಷ್ಮೀಬಾಯಿ ಸಾವನ್ನಪ್ಪಿದರು. ಬ್ರಿಟಿಷರು 3ದಿನಗಳ ನಂತರ ಗ್ವಾಲಿಯರ್ ಕೋಟೆಯನ್ನು ವಶಪಡಿಸಿಕೋಂಡರು.

ಸರ್ ಹುಘ್ ರೋಸ್ ತಮ್ಮ ಯುದ್ದದ ಟಿಪ್ಪಣಿಯಲ್ಲಿ ರಾಣಿಯನ್ನು “ಅತೀ ಸುಂದರಿ, ದೃಢನಿಷ್ಠೆ ಹಾಗು ಅತೀ ಬುದ್ದಿವಂತೆ” ಹಾಗೂ “ಅಪಾಯಕಾರಿ ದಂಗೆಕೋರ ನಾಯಕಿ” ಎಂದು ವರ್ಣಿಸಿದ್ದಾನೆ.ರಾಣಿಯ ತಂದೆ ಮೊರೋಪಂತ್ ತಂಬೆಯವರನ್ನು ಝಾನ್ಸಿಯ ಸೋಲಿನ ಕೆಲವೇ ದಿನಗಳನಂತರ ಸೆರೆಹಿಡಿಯಲಾಯಿತು ಹಾಗೂ ಗಲ್ಲಿಗೇರಿಸಲಾಯಿತು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

One Comment

ತಲೆ ಹೊಟ್ಟಿನ ಸಮಸ್ಯೆ

ತಲೆ ಹೊಟ್ಟಿನ ಸಮಸ್ಯೆಗೆ ಇಲ್ಲಿದೆ ಉಪಾಯಗಳು

ಮಾವಿನ ಹಣ್ಣು

ಹಣ್ಣುಗಳ ರಾಜ ಮಾವಿನ ಹಣ್ಣು