in

ಖ್ಯಾತ ಸ್ವಾಮೀಜಿ ಇನ್ನಿಲ್ಲ

ಖ್ಯಾತ ಸ್ವಾಮೀಜಿ ಇನ್ನಿಲ್ಲ

ಬೆಂಗಳೂರಿನ ಕೊಳದ ಮಠದ ಶಾಂತವೀರ ಸ್ವಾಮೀಜಿ ಇಂದು ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಅವರಿಗೆ 80ವರ್ಷ ವಯಸ್ಸಾಗಿತ್ತು. ಸ್ವಾಮೀಜಿ ನಿಧನದ ಬಗ್ಗೆ ಅವರ ಅಣ್ಣನ ಮಗ ಹರ್ಷ ಮಾಹಿತಿ ನೀಡಿದ್ದಾರೆ. ಸ್ವಾಮೀಜಿ ನಿನ್ನೆ ಆರಾಮಾಗಿಯೇ ಇದ್ದರು. ಮಹಾಲಕ್ಷ್ಮೀ ಲೇಔಟ್​​ನಲ್ಲಿ ನಡೆದ ಒಂದು ಕಾರ್ಯಕ್ರಮಕ್ಕೂ ಹೋಗಿದ್ದರು. ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆಯೂ ಕಾಣಿಸಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ಹಾಗೇ, ಇಂದು ಬೆಳಗ್ಗ ನಾನು ಮಠಕ್ಕೆ ಬಂದು ನೋಡಿದಾಗ ಅವರು ನಿಧನರಾಗಿದ್ದರು. ಆದರೆ ಆಸ್ಪತ್ರೆಗೆ  ಕರೆದುಕೊಂಡು ಹೋಗಲಾಯಿತು. ಸ್ವಾಮೀಜಿ ನಿಧನರಾಗಿದ್ದನ್ನು ವೈದ್ಯರು ದೃಢಪಡಿಸಿದರು. ಯಾವಾಗ? ಎಷ್ಟೊತ್ತಿಗೆ ಪ್ರಾಣ ಹೋಗಿದೆ ಎಂಬುದು ಗೊತ್ತಿಲ್ಲ.  ಬೆಳಗಿನ ಜಾವವೇ ಪ್ರಾಣ ಹೋಗಿರಬಹುದು ಎಂದು  ತಿಳಿಸಿದ್ದಾರೆ.

ಈಗ 8-9 ತಿಂಗಳ ಹಿಂದೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಂದಾಗ ಕೊಳದ ಮಠದ ಶಾಂತವೀರ ಸ್ವಾಮೀಜಿಯವರ ಹೆಸರು ಮುನ್ನೆಲೆಗೆ ಬಂದಿತ್ತು.  ವಿವಿಧ ಸ್ವಾಮೀಜಿಗಳೊಂದಿಗೆ ಸೇರಿ ಸುದ್ದಿಗೋಷ್ಠಿ ನಡೆಸಿದ್ದ ಅವರು, ಯಡಿಯೂರಪ್ಪ ಬದಲಾವಣೆ ವಿಚಾರ ಕುರಿತು ಊಹಾಪೋಹ ಕೇಳಿ ಬರುತ್ತಿದೆ. ರಾಜ್ಯಕೀಯ ಅನ್ನೋದು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ವೀರಶೈವ ಲಿಂಗಾಯತ ಜನಾಂಗದವರು ಐವತ್ತಕ್ಕು ಹೆಚ್ಚು ಜನ ಸ್ಥಾನದಲ್ಲಿದ್ದಾರೆ.

ಸಮುದಾಯವನ್ನು ಕಡೆಗಣಿಸುವ ಕೆಲಸ ಆಗಬಾರದು ಎಂದಿದ್ದರು. ನಮ್ಮ ಸಾಧು ಸಂತರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುತ್ತೀವಿ. ಕರ್ನಾಟಕದ ವತಿಯಿಂದ ಸುಮಾರು ಮೂನ್ನೂರರಿಂದ ನಾನೂರು ಸಾಧು ಸಂತರನ್ನು ಸೇರಿಸಿ ಮೋದಿಯನ್ನು ಭೇಟಿ ಮಾಡುತ್ತೇವೆ ಎಂದು ಕೊಳದ ಮಠದ ಡಾ.ಶಾಂತವೀರ ಮಹಾಸ್ವಾಮಿ ಹೇಳಿದ್ದರು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಕುರುಕ್ಷೇತ್ರ ಯುದ್ಧದ ನಂತರದ ದಿನಗಳು

ಕುರುಕ್ಷೇತ್ರ ಯುದ್ಧದ ನಂತರದ ದಿನಗಳು

ಎಳನೀರು

ಎಳನೀರು ಕುಡಿಯುವುದರಿಂದ ದೇಹಕ್ಕೂ ಲಾಭ, ಬೆಳೆಯುವ ರೈತರಿಗೂ ಲಾಭ