in

ನಮ್ಮದೇ ಕನ್ನಡಿಗರು ಆದ ರಾಹುಲ್ ದ್ರಾವಿಡ್

ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್

ರಾಹುಲ್ ಶರದ್ ದ್ರಾವಿಡ್ , ಜನನ: ಜನವರಿ ೧೧, ೧೯೭೩ – ಭಾರತ ಕ್ರಿಕೆಟ್ ತಂಡದ ಆಟಗಾರರಲ್ಲೊಬ್ಬರು ಮತ್ತು ತಂಡದ ಮಾಜಿ ನಾಯಕ. ಮದ್ಯಪ್ರದೇಶ ಮೂಲದವರಾದ ದ್ರಾವಿಡ್ ಪೂರ್ಣ ಕನ್ನಡಿಗರು. ಟೆಸ್ಟ್ ಪಂದ್ಯಗಳಲ್ಲಿ ೧೦,೦೦೦ಕ್ಕೂ ಅಧಿಕ ರನ್ನುಗಳನ್ನು ಗಳಿಸುವುದರಲ್ಲಿ, ಸಚಿನ್ ತೆಂಡೂಲ್ಕರ್ ಮತ್ತು ಸುನಿಲ್ ಗವಾಸ್ಕರ್ ನಂತರ ಮೂರನೇಯ ಭಾರತೀಯ. ಫೆಬ್ರುವರಿ ೧೪, ೨೦೦೭ ರಂದು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ೧೦,೦೦೦ಕ್ಕೂ ಅಧಿಕ ರನ್ನುಗಳನ್ನು ಗಳಿಸಿದ ವಿಶ್ವದಲ್ಲಿ ೬ನೇ ಆಟಗಾರ, ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ನಂತರ ಮೂರನೇ ಭಾರತೀಯ. ಇವರು ಅಕ್ಟೋಬರ್ ೨೦೦೫ರಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕನಾಗಿ, ಸೆಪ್ಟೆಂಬರ್ ೨೦೦೭ ರಲ್ಲಿ ತಂಡದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ರಾಹುಲ್ ಡ್ರಾವಿಡ್ ಭಾರತೀಯ ಪ್ರಿಮಿಯರ್ ಲೀಗ್ ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ೨ ವರ್ಷ್ ‘ಐಕಾನ್ ಆಟಗಾರ’ನಾಗಿ ಆಡಿ, ಈಗ ಜೈಪೂರದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ರಾಹುಲ್ ದ್ರಾವಿಡ್‌ಗೆ, ೨೦೦೦ರಲ್ಲಿ, “ವಿಜಡನ್ ಕ್ರಿಕೆಟರ್” ಅಂತ ಗೌರವಿಸಲಾಗಿದೆ. ದ್ರಾವಿಡ್‌ಗೆ, ೨೦೦೪ರಲ್ಲಿ, ವರ್ಷದ ಐಸಿಸಿ ಪ್ಲೆಯರ್ ಹಾಗೂ ವರ್ಷದ ಟೆಸ್ಟ್ ಆಟಗಾರನೆಂದೂ ಸನ್ಮಾನಿಸಲಾಗಿದೆ. ರಾಹುಲ್ ದ್ರಾವಿಡ್, ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಕ್ಯಾಚ್ (೨೧೦) ಹಿಡಿದ ಆಟಗಾರರಾಗಿರುತ್ತಾರೆ.

ನಮ್ಮದೇ ಕನ್ನಡಿಗರು ಆದ ರಾಹುಲ್ ದ್ರಾವಿಡ್
ಅತಿ ಹೆಚ್ಚು ಕ್ಯಾಚ್ ಹಿಡಿದ ಆಟಗಾರ

೭ ಅಗಸ್ಟ್ ೨೦೧೧ ರಂದು, ಒಂದು ದಿನದ ಹಾಗೂ ಟಿ ೨೦ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು. ೨೦೧೨ ಮಾರ್ಚಿ ೯ ರಂದು ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದರು. ೨೦೧೩ ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಯನ್ನು ಇವರಿಗೆ ನೀಡಲಾಗಿದೆ.

ದಿನಾಂಕ ನವೆಂಬರ್ ೧ ೨೦೧೨ರಂದು ಸಿಡ್ನಿಯಲ್ಲಿ ನಡೆದ ಏಳನೆಯ ಬ್ರಾಡ್ಮನ್ ವಾರ್ಷಿಕ ಪುರಸ್ಕಾರ ಸಮಾರಂಭದಲ್ಲಿ ರಾಹುಲ್ ದ್ರಾವಿಡ್ ಹಾಗು ಗ್ಲೆನ್ ಮ್ಯಾಕ್ಗ್ರಾಥ್ ಅವರುಗಳನ್ನು ಸನ್ಮಾನಿಸಲಾಯಿತು. ಭಾರತದ ಮೂರನೇ ಹಾಗು ನಾಲ್ಕನೆಯ ಅತ್ಯುಚ್ಚ ನಾಗರಿಕ ಸನ್ಮಾನವಾದ ಪದ್ಮ ಭೂಷಣ ಹಾಗು ಪದ್ಮ ಶ್ರೀ ಪುರಸ್ಕಾರಗಳಿಗೂ ಸಹ ರಾಹುಲ್ ದ್ರಾವಿಡ್ ಭಾಜನರಾಗಿದ್ದಾರೆ.

೨೦೧೪ರಲ್ಲಿ ಬೆಂಗಳೂರಿನ ಗೋ ಸ್ಪೋರ್ಟ್ಸ್ ಪ್ರತಿಷ್ಠಾನದ ಸಲಹಾ ಮಂಡಳಿಯ ಸದಸ್ಯರಾಗಿ ರಾಹುಲ್ ದ್ರಾವಿಡ್ ಅವರು ಸೇರ್ಪಡೆಯಾದರು. ಗೋ ಸ್ಪೋರ್ಟ್ಸ್ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಭಾರತದ ಭವಿಷ್ಯ ಒಲಿಂಪಿಕ್ ಸ್ಪರ್ಧಾಳುಗಳನ್ನು ರೂಪಿಸುವ ಯೋಜನೆಯಲ್ಲಿ ರಾಹುಲ್ ದ್ರಾವಿಡ್ ತೊಡಗಿಸಿಕೊಂಡಿದ್ದಾರೆ. ರಾಹುಲ್ ದ್ರಾವಿಡ್ರವರ ನೇತೃತ್ವದ ಮೇಲಿನ ಯೋಜನೆಯಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರರಾದ ಪ್ರನ್ನೊಯ್ ಕುಮಾರ್, ಈಜುಗಾರಾದ ಶರತ್ ಗಾಯಕ್ವಾಡ್ ಹಾಗು ಯುವ ಗೋಲ್ಫೆರ್ ಚಿಕ್ಕರಂಗಪ್ಪ ರವರು ಸ್ಪರ್ಧಾಳುಗಳನ್ನು ರೂಪಿಸುವ ಪ್ರಥಮ ತಂಡದ ತರಬೇತಿಯಲ್ಲಿ ಭಾಗಿಯಾಗಿದ್ದರು.

ದ್ರಾವಿಡ ಅವರು ತಮ್ಮ ೧೨ನೇ ವಯಸ್ಸಿನಲ್ಲೇ ಕ್ರಿಕೆಟ್ ಆಡಲು ಪ್ರಾರಂಭಿಸಿದರು ಮತ್ತು ಕರ್ನಾಟಕ ರಾಜ್ಯದ ಪರವಾಗಿ ಅಂಡರ್-೧೫, ಅಂಡರ್-೧೭, ಅಂಡರ್-೧೯ ಮಟ್ಟದ ತಂಡಗಳಲ್ಲಿ ಆಡಿದ್ದರು. ಇವರ ಪ್ರತಿಭೆಯನ್ನು ಮೊದಲು ಗುರುತಿಸಿದ್ದು ಮಾಜಿ ಕ್ರಿಕೆಟ್ ಆಟಗಾರರಾದ ಕೆಕಿ ತಾರಾಪೊರ್‌ರವರು. ತಮ್ಮ ಶಾಲೆಗೆ ಆಡಿದ ಮೊದಲನೆಯ ಪಂದ್ಯದಲ್ಲೇ ಶತಕ ಬಾರಿಸಿದ ದ್ರಾವಿಡ್, ಬ್ಯಾಟ್ಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಕೂಡ ಮಾಡುತ್ತಿದ್ದರು. ಆದರೆ ಇವರು ಮಾಜಿ ಟೆಸ್ಟ್ ಆಟಗಾರರಾದ ಗುಂಡಪ್ಪ ವಿಶ್ವನಾಥ್, ರೋಜರ್ ಬಿನ್ನಿ, ಬ್ರಿಜೇಶ್ ಪಟೇಲ್ ಮತ್ತು ತಾರಾಪೊರ್ ರವರ ಸಲಹೆಯಂತೆ ವಿಕೆಟ್ ಕೀಪಿಂಗ್ ಮಾಡುವುದನ್ನು ನಿಲ್ಲಿಸಿದರು.

೧೯೯೬ರಿಂದ ಭಾರತ ಕ್ರಿಕೆಟ್ ತಂಡದ ಸದಸ್ಯರಾಗಿರುವ ರಾಹುಲ್ ದ್ರಾವಿಡ್ ಬಲಗೈ ಬ್ಯಾಟ್ಸ್‌ಮನ್. ಕೆಕಿ ತಾರಾಪೊರ್‌ರವರ ಬಳಿ ಅಭ್ಯಾಸ ಮಾಡಿದ ಇವರು ಬ್ಯಾಟಿಂಗ್‌ನ ಅತ್ಯುತ್ತಮ ತಾಂತ್ರಿಕತೆಗೆ ಹೆಸರುವಾಸಿ. ಔಟಾಗದೆಯೇ ತೀಕ್ಷ್ಣವಾಗಿ ಬ್ಯಾಟಿಂಗ್ ಮಾಡುವ ಇವರಿಗೆ ಸುದ್ದಿ ಮಾಧ್ಯಮದವರಿಂದ “ದ ವಾಲ್” ಎಂದೂ ಬಣ್ಣಿಸಲಾಗುತ್ತದೆ. ಇವರ ಖಾತೆಯಲ್ಲಿ ಈಗಾಗಲೆ ಟೆಸ್ಟ್ ಕ್ರಿಕೆಟ್‌ನ ೩೬ ಶತಕಗಳು ಇವೆ. ಒಂದು ದಿನದ ಅಂತರ ರಾಷ್ಟ್ರೀಯ ಪಂದ್ಯಗಳಲ್ಲಿ ಇವರ ಸರಾಸರಿ ೩೯ , ಸ್ಟ್ರೈಕ್ ರೇಟ್ – ೬೯. ಇವರು ಆಗಿಂದಾಗ್ಗೆ ತಂಡಕ್ಕೆ ವಿಕೆಟ್ ಕೀಪಿಂಗ್ ಕೂಡ ಮಾಡುತ್ತಿದ್ದರು.

ನಮ್ಮದೇ ಕನ್ನಡಿಗರು ಆದ ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್

ಭಾರತ ಹಾಗೂ ಕರ್ನಾಟಕಕ್ಕೆ ಆಡುವುದಲ್ಲದೆ ದ್ರಾವಿಡ್ ಕೆಂಟ್ ಹಾಗೂ ಸ್ಕಾಟ್ಲ್ಯಾಂಡ್‌ಗೆ ಕೂಡ ಆಡಿದ್ದಾರೆ. ಇವರ ಚೊಚ್ಚಲ ಟೆಸ್ಟ್ ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಭಾರತದ ೧೯೯೬ರ ಇಂಗ್ಲೆಂಡ್‌ ಪ್ರವಾಸದ ಎರಡನೆ ಯ ಟೆಸ್ಟ್ ಪಂದ್ಯ. ಒಂದು ದಿನದ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅದೇ ವರ್ಷ ಸಿಂಗಪೂರಿನಲ್ಲಿ ನಡೆದ ಸಿಂಗರ್ ಕಪ್‌ನ ಶ್ರೀಲಂಕಾ ವಿರುದ್ಧದ ಪಂದ್ಯದಿಂದ ಪಾದಾರ್ಪಣೆ ಮಾಡಿದರು. ವಿಸ್ಡನ್ ಸಂಸ್ಥೆಯು ಇವರನ್ನು ೨೦೦೦ನೆ ವರ್ಷದಲ್ಲಿ, ವರ್ಷದ ಕ್ರಿಕೆಟಿಗನೆಂದು ಪುರಸ್ಕರಿಸಿತು.

೨೦೦೪ ರಲ್ಲಿ ಇವರಿಗೆ ಭಾರತ ಸರಕಾರವು ಪದ್ಮಶ್ರೀ ಪ್ರಶಸ್ತಿ ಕೊಟ್ಟು ಗೌರವಿಸಿತು. ೨೦೦೪, ಸೆಪ್ಟೆಂಬರ್ ೭ರಂದು ಇವರಿಗೆ ಐಸಿಸಿಯು ವರ್ಷದ ಆಟಗಾರನೆಂದೂ, ವರ್ಷದ ಅತ್ಯುತ್ತಮ ಟೆಸ್ಟ್ ಆಟಗಾರ ನೆಂದೂ ಗೌರವಿಸಿತು. ೨೦೦೪ರಲ್ಲಿ ಇವರು ಭಾರತ ತಂಡದ ಉಪನಾಯಕರಾಗಿದ್ದರು. ಕೆಲವೊಮ್ಮೆ ಸೌರವ್ ಗಂಗೂಲಿ ಇಲ್ಲದಿರುವಾಗ ಭಾರತ ತಂಡದ ನಾಯಕತ್ವ ವಹಿಸಿದ್ದರು.

೨೦೦೫ರಲ್ಲಿ ಭಾರತದ ನಾಯಕತ್ವ ವಹಿಸಿಕೊಂಡ ಇವರು, ಶ್ರೀಲಂಕಾ ವಿರುದ್ಧ ಸರಣಿ ಜಯ ಪಡೆದು, ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತದಲ್ಲಿ ನಡೆದ ಸರಣಿಯನ್ನು ೨-೨ರಿಂದ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು.

ಡಾನ್ ಬ್ರಾಡ್ಮನ್ ಮತ್ತು ಸಚಿನ್ ತೆಂಡೂಲ್ಕರ್ ಬಳಿಕ ವಿಶ್ವದ ಆಗ್ರಮಾನ್ಯ ಆಟಗಾರ ಎಂದು ಕರೆಸಿಕೊಳ್ಳುವ ರಾಹುಲ್ ಹದಿನಾರು ವರ್ಷದ ಅಂತರ್ ರಾಷ್ಟ್ರೀಯ ಕ್ರಿಕೆಟ್ ನ ಸಾಧನೆಗಳು ಮತ್ತು ಧಾಖಲೆಗಳು ಒಂದೆರಡಲ್ಲ. ಸಚಿನ್ ಬಳಿಕ ಭಾರತದ ಪರ ಅತ್ಯಂತ ಹೆಚ್ಹು ಟೆಸ್ಟ್ ರನ್ (೧೩,೨೮೮) ಗಳಿಸಿದಾತ. ಮೂರನೇ ಕ್ರಮಾಂಕದಲ್ಲಿ ಬಂದು ಒಟ್ಟು ಹತ್ತು ಸಾವಿರ ರನ್ ಹೊಡೆದ ವಿಶ್ವದ ಏಕೈಕ ಕ್ರಿಕೆಟಿಗ. ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯದಿಕ (88) ಶತಕದ ಜೊತೆಯಾಟ ನೀಡಿದಾತ. ಟೆಸ್ಟ್ ಆಡುವ ಎಲ್ಲ ಹತ್ತು ದೇಶಗಳ ವಿರುದ್ದ ಶತಕ ಬಾರಿಸಿರುವ ವಿಶ್ವದ ಏಕೈಕ ಆಟಗಾರ. ಟೆಸ್ಟ್ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಹೆಚ್ಹು ಚೆಂಡುಗಳನ್ನು (೩೧೨೫೮)ಎದುರಿಸಿರುವ ಆಟಗಾರ. ಸೊನ್ನೆ ಹೊಡೆಯದೆ ಅತ್ಯದಿಕ (೧೭೩) ಇನ್ನಿಂಗ್ಸ್ ಗಳನ್ನು ಸತತವಾಗಿ ಆಡಿರುವ ವಿಶ್ವದ ಏಕೈಕ ಆಟಗಾರ. ಡಾನ್ ಬ್ರಾಡ್ಮನ್ ನಂತರ ಸತತ ಮೂರು ಸರಣಿಗಳಲ್ಲಿ ಡಬಲ್ ಸೆಂಚುರಿ ಹೊಡೆದ ಏಕೈಕ ಕ್ರಿಕೆಟಿಗ.

ಆಗಸ್ಟ್ ೨೦೧೧ರಲ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ನಲ್ಲಿ ೧೦,೦೦೦ ರನ್ ಗಳಿಸಿರುವ ರಾಹುಲ್ ದ್ರಾವಿಡ್ ಸಾಧನೆಯನ್ನು ನೆನಪಿಸುವ ಗೋಡೆಯೊಂದನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿರ್ಮಿಸಿದ್ದಾರೆ. ಗೋಡೆಯ ಮೇಲೆ ದ್ರಾವಿಡ್ ಆಟದ ಮೂರು ಗುಣಗಳಾದ ಬದ್ಧತೆ, ದೃಢತೆ ಹಾಗೂ ಉತ್ಕೃಷ್ಟತೆಯನ್ನು ಬಿಂಬಿಸಲಾಗಿದೆ. ಕೆಎಸ್ ಸಿಎ ಹಾಗೂ ಸ್ಕೈಲೈನ್ ಬಿಲ್ಡರ್ಸ್ ಈ ಗೋಡೆಗೆ ‘ದಿ ವಾಲ್’ ಎಂದೇ ಹೆಸರಿಸಿವೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ‘ದಿ ವಾಲ್’ ಅನ್ನು ಅನಾವರಣಗೊಳಿಸಿದ್ದರು. ಈ ಗೋಡೆಯು ೧೫ ಅಡಿ ಎತ್ತರ ಹಾಗೂ ೨೭ ಅಡಿ ಅಗಲವಿದ್ದು ಇದರ ನಿರ್ಮಾಣಕ್ಕಾಗಿ ೧೦,೦೦೦ ಇಟ್ಟಿಗೆಗಳನ್ನು ಬಳಸಲಾಗಿದೆ. ಕವರ್ ಡ್ರೈವ್ ಭಂಗಿಯ ಶಿಲ್ಪ ಹೊಂದಿದ್ದು, ಗೋಡೆಗೆ ವಿದ್ಯುನ್ಮಾನ ಪರದೆಯನ್ನು ಅಳವಡಿಸಲಾಗಿದ್ದು, ದ್ರಾವಿಡ್ ಪ್ರತಿ ರನ್ ಗಳಿಸುತ್ತಿದ್ದಾಗ ಒಟ್ಟು ರನ್ ಇಲ್ಲಿನ ವಿದ್ಯುನ್ಮಾನ ಪರದೆಯಲ್ಲಿ ಮೂಡುತಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣದ ” ದಿ ವಾಲ್ “
೨೦೧೨ ಮಾರ್ಚಿ ೯ ರಂದು ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದರು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಮಿನುಗು ತಾರೆ ಕಲ್ಪನಾ

ರಸಿಕರ ಮನಸ್ಸಿನಲ್ಲಿ ಅಚ್ಚಳಿಯದ ಪಾತ್ರಗಳನ್ನು ನಿರ್ವಹಿಸಿದ ಮಿನುಗು ತಾರೆ ಕಲ್ಪನಾ

ಹನಿಮೂನ್ ಗಾಗಿ ಪ್ಯಾರಿಸ್ ಗೆ ಹಾರಿದ ನನ್ನರಸಿ ರಾದೆ ಸೀರಿಯಲ್ ನಟಿ ತೇಜಸ್ವಿ ಪ್ರಕಾಶ್

ಹನಿಮೂನ್ ಗಾಗಿ ಪ್ಯಾರಿಸ್ ಗೆ ಹಾರಿದ ನನ್ನರಸಿ ರಾದೆ ಸೀರಿಯಲ್ ನಟಿ ತೇಜಸ್ವಿ ಪ್ರಕಾಶ್